ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರದ್ದಾಗಿರುವ ಬಿಪಿಎಲ್ ಕಾರ್ಡ್‍ಗಳಿಗೂ ರೇಷನ್ ನೀಡಲು ಆಗ್ರಹ

Last Updated 21 ಮೇ 2021, 3:13 IST
ಅಕ್ಷರ ಗಾತ್ರ

ದಾವಣಗೆರೆ: ನಗರದಲ್ಲಿ 2-3 ತಿಂಗಳುಗಳಲ್ಲಿ ನಾನಾ ಕಾರಣಗಳಿಗೆ 5-6 ಸಾವಿರ ಬಿಪಿಎಲ್ ಕಾರ್ಡ್‍ಗಳನ್ನು ರದ್ದುಪಡಿಸಲಾಗಿದೆ. ಇದರಲ್ಲಿ ಬಡವರೇ ಹೆಚ್ಚಿದ್ದಾರೆ. ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರ ಮಾನವೀಯ ದೃಷ್ಟಿಯಿಂದ ರದ್ದಾದ ಬಿಪಿಎಲ್ ಕಾರ್ಡ್‍ಗಳಿಗೂ ನ್ಯಾಯಬೆಲೆ ಅಂಗಡಿಗಳಲ್ಲಿ ರೇಷನ್ ಒದಗಿಸಬೇಕು ಎಂದು ಪಾಲಿಕೆ ವಿರೋಧ ಪಕ್ಷದ ನಾಯಕ ಎ.ನಾಗರಾಜ್ ಅವರು ಆಗ್ರಹಿಸಿದ್ದಾರೆ.

ಆದಾಯ ತೆರಿಗೆ ಕಚೇರಿಯ ವರದಿಯಂತೆ ಬಿಪಿಎಲ್ ಕಾರ್ಡ್‍ಗಳು ರದ್ದಾಗಿವೆ. ಕೆಲವರು ಮನೆ ನಿರ್ಮಾಣಕ್ಕಾಗಿ ಬ್ಯಾಂಕ್ ಸಾಲ ತೆಗೆದುಕೊಳ್ಳಲು ಐಟಿ ರಿಟರ್ನ್ಸ್‌ ಪಡೆದಿದ್ದಾರೆ. ವಿನಃ ಅವರು ಐಟಿ ಕಟ್ಟುವಷ್ಟು ಶ್ರೀಮಂತರಲ್ಲ. ₹ 2 ಲಕ್ಷವರೆಗೆ ಎಕ್ಸಂಪ್ಶನ್‌ ತೋರಿಸಿದ್ದಕ್ಕಾಗಿ ರದ್ದಾಗಿದೆ ಎಂದು ತಿಳಿಸಿದ್ದಾರೆ.

ಕೂಲಿ ಕಾರ್ಮಿಕರಾಗಿರುವವರು ನ್ಯಾಯಬೆಲೆ ಅಂಗಡಿಗಳಲ್ಲಿ ನೀಡುವ ಅಕ್ಕಿಯನ್ನು ಊಟ ಮಾಡುವವರಾಗಿದ್ದಾರೆ. ಇಂತಹ ಸಂಕಷ್ಟದ ಸಮಯದಲ್ಲಿ ರದ್ದಾದ ಕಾರ್ಡ್‍ಗಳಿಗೆ ನ್ಯಾಯಬೆಲೆ ಅಂಗಡಿಗಳಲ್ಲಿ ರೇಷನ್ ಒದಗಿಸಬೇಕು ಎಂದು ನಾಗರಾಜ್‌ ಹೇಳಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT