<p><strong>ದಾವಣಗೆರೆ: </strong>ನಗರದಲ್ಲಿ 2-3 ತಿಂಗಳುಗಳಲ್ಲಿ ನಾನಾ ಕಾರಣಗಳಿಗೆ 5-6 ಸಾವಿರ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಲಾಗಿದೆ. ಇದರಲ್ಲಿ ಬಡವರೇ ಹೆಚ್ಚಿದ್ದಾರೆ. ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರ ಮಾನವೀಯ ದೃಷ್ಟಿಯಿಂದ ರದ್ದಾದ ಬಿಪಿಎಲ್ ಕಾರ್ಡ್ಗಳಿಗೂ ನ್ಯಾಯಬೆಲೆ ಅಂಗಡಿಗಳಲ್ಲಿ ರೇಷನ್ ಒದಗಿಸಬೇಕು ಎಂದು ಪಾಲಿಕೆ ವಿರೋಧ ಪಕ್ಷದ ನಾಯಕ ಎ.ನಾಗರಾಜ್ ಅವರು ಆಗ್ರಹಿಸಿದ್ದಾರೆ.</p>.<p>ಆದಾಯ ತೆರಿಗೆ ಕಚೇರಿಯ ವರದಿಯಂತೆ ಬಿಪಿಎಲ್ ಕಾರ್ಡ್ಗಳು ರದ್ದಾಗಿವೆ. ಕೆಲವರು ಮನೆ ನಿರ್ಮಾಣಕ್ಕಾಗಿ ಬ್ಯಾಂಕ್ ಸಾಲ ತೆಗೆದುಕೊಳ್ಳಲು ಐಟಿ ರಿಟರ್ನ್ಸ್ ಪಡೆದಿದ್ದಾರೆ. ವಿನಃ ಅವರು ಐಟಿ ಕಟ್ಟುವಷ್ಟು ಶ್ರೀಮಂತರಲ್ಲ. ₹ 2 ಲಕ್ಷವರೆಗೆ ಎಕ್ಸಂಪ್ಶನ್ ತೋರಿಸಿದ್ದಕ್ಕಾಗಿ ರದ್ದಾಗಿದೆ ಎಂದು ತಿಳಿಸಿದ್ದಾರೆ.</p>.<p>ಕೂಲಿ ಕಾರ್ಮಿಕರಾಗಿರುವವರು ನ್ಯಾಯಬೆಲೆ ಅಂಗಡಿಗಳಲ್ಲಿ ನೀಡುವ ಅಕ್ಕಿಯನ್ನು ಊಟ ಮಾಡುವವರಾಗಿದ್ದಾರೆ. ಇಂತಹ ಸಂಕಷ್ಟದ ಸಮಯದಲ್ಲಿ ರದ್ದಾದ ಕಾರ್ಡ್ಗಳಿಗೆ ನ್ಯಾಯಬೆಲೆ ಅಂಗಡಿಗಳಲ್ಲಿ ರೇಷನ್ ಒದಗಿಸಬೇಕು ಎಂದು ನಾಗರಾಜ್ ಹೇಳಿಕೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ನಗರದಲ್ಲಿ 2-3 ತಿಂಗಳುಗಳಲ್ಲಿ ನಾನಾ ಕಾರಣಗಳಿಗೆ 5-6 ಸಾವಿರ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಲಾಗಿದೆ. ಇದರಲ್ಲಿ ಬಡವರೇ ಹೆಚ್ಚಿದ್ದಾರೆ. ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರ ಮಾನವೀಯ ದೃಷ್ಟಿಯಿಂದ ರದ್ದಾದ ಬಿಪಿಎಲ್ ಕಾರ್ಡ್ಗಳಿಗೂ ನ್ಯಾಯಬೆಲೆ ಅಂಗಡಿಗಳಲ್ಲಿ ರೇಷನ್ ಒದಗಿಸಬೇಕು ಎಂದು ಪಾಲಿಕೆ ವಿರೋಧ ಪಕ್ಷದ ನಾಯಕ ಎ.ನಾಗರಾಜ್ ಅವರು ಆಗ್ರಹಿಸಿದ್ದಾರೆ.</p>.<p>ಆದಾಯ ತೆರಿಗೆ ಕಚೇರಿಯ ವರದಿಯಂತೆ ಬಿಪಿಎಲ್ ಕಾರ್ಡ್ಗಳು ರದ್ದಾಗಿವೆ. ಕೆಲವರು ಮನೆ ನಿರ್ಮಾಣಕ್ಕಾಗಿ ಬ್ಯಾಂಕ್ ಸಾಲ ತೆಗೆದುಕೊಳ್ಳಲು ಐಟಿ ರಿಟರ್ನ್ಸ್ ಪಡೆದಿದ್ದಾರೆ. ವಿನಃ ಅವರು ಐಟಿ ಕಟ್ಟುವಷ್ಟು ಶ್ರೀಮಂತರಲ್ಲ. ₹ 2 ಲಕ್ಷವರೆಗೆ ಎಕ್ಸಂಪ್ಶನ್ ತೋರಿಸಿದ್ದಕ್ಕಾಗಿ ರದ್ದಾಗಿದೆ ಎಂದು ತಿಳಿಸಿದ್ದಾರೆ.</p>.<p>ಕೂಲಿ ಕಾರ್ಮಿಕರಾಗಿರುವವರು ನ್ಯಾಯಬೆಲೆ ಅಂಗಡಿಗಳಲ್ಲಿ ನೀಡುವ ಅಕ್ಕಿಯನ್ನು ಊಟ ಮಾಡುವವರಾಗಿದ್ದಾರೆ. ಇಂತಹ ಸಂಕಷ್ಟದ ಸಮಯದಲ್ಲಿ ರದ್ದಾದ ಕಾರ್ಡ್ಗಳಿಗೆ ನ್ಯಾಯಬೆಲೆ ಅಂಗಡಿಗಳಲ್ಲಿ ರೇಷನ್ ಒದಗಿಸಬೇಕು ಎಂದು ನಾಗರಾಜ್ ಹೇಳಿಕೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>