ದಾವಣಗೆರೆ: ನಗರದಲ್ಲಿ 2-3 ತಿಂಗಳುಗಳಲ್ಲಿ ನಾನಾ ಕಾರಣಗಳಿಗೆ 5-6 ಸಾವಿರ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಲಾಗಿದೆ. ಇದರಲ್ಲಿ ಬಡವರೇ ಹೆಚ್ಚಿದ್ದಾರೆ. ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರ ಮಾನವೀಯ ದೃಷ್ಟಿಯಿಂದ ರದ್ದಾದ ಬಿಪಿಎಲ್ ಕಾರ್ಡ್ಗಳಿಗೂ ನ್ಯಾಯಬೆಲೆ ಅಂಗಡಿಗಳಲ್ಲಿ ರೇಷನ್ ಒದಗಿಸಬೇಕು ಎಂದು ಪಾಲಿಕೆ ವಿರೋಧ ಪಕ್ಷದ ನಾಯಕ ಎ.ನಾಗರಾಜ್ ಅವರು ಆಗ್ರಹಿಸಿದ್ದಾರೆ.