ಸಂಘದ ರಾಜ್ಯ ಘಟಕದ ಅಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ್, ‘ದೇಶದಲ್ಲಿ ಇತ್ತೀಚಿನ ವರ್ಷಗಳಲ್ಲಿ ಬೆಲೆ ಏರಿಕೆಯಾಗುತ್ತಿದೆ. ಡೀಸೆಲ್, ವಿದ್ಯುಚ್ಛಕ್ತಿ, ರಸಗೊಬ್ಬರ ಹಾಗೂ ದಿನಬಳಕೆಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ. ಇದರಿಂದಾಗಿ ರೈತರ ಬದುದಕು ಸಂಕಷ್ಟಕ್ಕೆ ಸಿಲುಕಿದೆ. ಆದರೆ ಕೇಂದ್ರ ಸರ್ಕಾರ ಶೇಂಗಾಕ್ಕೆ ಬೆಂಬಲ ಬೆಲೆಯನ್ನು ಪ್ರತಿ ಕ್ವಿಂಟಲ್ಗೆ ₹ 5,090 ನಿಗದಿಪಡಿಸಿರುವುದು ಸರಿಯಲ್ಲ. ಕಡಿಮೆ ಬೆಲೆ ನಿಗದಿಯಿಂದಾಗಿ ರೈತರು ಪ್ರತಿ ಎಕೆರೆಗೆ ಕನಿಷ್ಠ ₹ 4 ಸಾವಿರ ನಷ್ಟ ಅನುಭವಿಸುವಂತಾಗಿದೆ‘ ಎಂದು ಆಕ್ಷೇಪ ವ್ಯಕ್ತಪಡಿಸಿದರು.