<p><strong>ಹರಿಹರ:</strong> ನಗರಸಭೆಯಿಂದ ರೂಪಿಸಲಾಗುವ ವಸತಿ ಯೋಜನೆಯಲ್ಲಿ ಪೌರಕಾರ್ಮಿಕರು, ಸೈನಿಕರು ಹಾಗೂ ಮಾಜಿ ಸೈನಿಕರಿಗೆ ನಿವೇಶನಗಳನ್ನು ಮೀಸಲಿಡುವಂತೆ ಪೌರಾಯುಕ್ತೆ ಎಸ್. ಲಕ್ಷ್ಮೀ ಅವರಿಗೆ ಶಾಸಕ ಎಸ್. ರಾಮಪ್ಪ ಸೂಚಿಸಿದರು.</p>.<p>ನಗರದ ಹೊರವಲಯದ ಯಲ್ಲಮ್ಮ ಬಡಾವಣೆ ಸುತ್ತಲಿನ ಪ್ರದೇಶವನ್ನು ಶುಕ್ರವಾರ ಪರಿಶೀಲನೆ ನಡೆಸಿ ಮಾತನಾಡಿದರು.</p>.<p>ವಸತಿ ಯೋಜನೆ ರೂಪಿಸುವ ಮುನ್ನ ಪೌರಕಾರ್ಮಿಕರು, ಸೈನಿಕರು ಹಾಗೂ ಮಾಜಿ ಸೈನಿಕರಿಗೆ ನಿವೇಶನಗಳನ್ನು ಮೀಸಲಿರಿಸಿ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದರು. ಕ್ಷೇತ್ರದಲ್ಲಿ ಆರ್ಥಿಕವಾಗಿ ಹಿಂದುಳಿದ ಬಡವರಿಗೆ ಸೂರು ಕಲ್ಪಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಬೇಕು ಎಂದು ಹೇಳಿದರು.</p>.<p>ಮಾಜಿ ಸೈನಿಕ ಮಂಜುನಾಥ್ ಮಾತನಾಡಿ, ‘ಬಡಾವಣೆಯಲ್ಲಿ 100ಕ್ಕೂ ಹೆಚ್ಚು ಮನೆಗಳಿದ್ದು, 400ಕ್ಕೂ ಹೆಚ್ಚು ಜನರು ವಾಸಿಸುತ್ತಿದ್ದಾರೆ. ಶುದ್ಧ ಕುಡಿಯುವ ನೀರು, ರಸ್ತೆ, ಚರಂಡಿ ಸೇರಿ ಮೂಲ ಸೌಕರ್ಯಗಳನ್ನು ಒದಗಿಸ<br />ಬೇಕು’ ಎಂದು ಮನವಿ ಮಾಡಿದರು.</p>.<p>ಪೌರಾಯುಕ್ತೆ ಎಸ್. ಲಕ್ಷ್ಮೀ ಮಾತನಾಡಿ, ‘ಈಚೆಗೆ ಗುತ್ತೂರು ಗ್ರಾಮವನ್ನು ಹರಿಹರ ನಗರಸಭೆ ವ್ಯಾಪ್ತಿಗೆ ಸೇರ್ಪಡೆ ಮಾಡಲಾಗಿದೆ. ಆದರೆ, ಸೇರ್ಪಡೆಯಾದ ಪ್ರದೇಶದ ಅಭಿವೃದ್ಧಿಗೆ ಅನುದಾನ ಮಂಜೂರಾಗಿಲ್ಲ. ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ’ ಎಂದು ತಿಳಿಸಿದರು.</p>.<p>ಇದೇ ವೇಳೆ ಶಾಸಕ ಎಸ್. ರಾಮಪ್ಪ ಅವರು ಗುರುವಾರ ಹಾವು ಕಚ್ಚಿ ಮೃತಪಟ್ಟ ಕಟ್ಟಡ ಕಾರ್ಮಿಕ ಪ್ರಭು ಅವರ ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. ನಗರಸಭೆಯ ಎಇಇ ಎಸ್.ಎಸ್. ಬಿರಾದಾರ್ ಹಾಗೂ ಸ್ಥಳಿಯ ಮುಖಂಡರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಿಹರ:</strong> ನಗರಸಭೆಯಿಂದ ರೂಪಿಸಲಾಗುವ ವಸತಿ ಯೋಜನೆಯಲ್ಲಿ ಪೌರಕಾರ್ಮಿಕರು, ಸೈನಿಕರು ಹಾಗೂ ಮಾಜಿ ಸೈನಿಕರಿಗೆ ನಿವೇಶನಗಳನ್ನು ಮೀಸಲಿಡುವಂತೆ ಪೌರಾಯುಕ್ತೆ ಎಸ್. ಲಕ್ಷ್ಮೀ ಅವರಿಗೆ ಶಾಸಕ ಎಸ್. ರಾಮಪ್ಪ ಸೂಚಿಸಿದರು.</p>.<p>ನಗರದ ಹೊರವಲಯದ ಯಲ್ಲಮ್ಮ ಬಡಾವಣೆ ಸುತ್ತಲಿನ ಪ್ರದೇಶವನ್ನು ಶುಕ್ರವಾರ ಪರಿಶೀಲನೆ ನಡೆಸಿ ಮಾತನಾಡಿದರು.</p>.<p>ವಸತಿ ಯೋಜನೆ ರೂಪಿಸುವ ಮುನ್ನ ಪೌರಕಾರ್ಮಿಕರು, ಸೈನಿಕರು ಹಾಗೂ ಮಾಜಿ ಸೈನಿಕರಿಗೆ ನಿವೇಶನಗಳನ್ನು ಮೀಸಲಿರಿಸಿ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದರು. ಕ್ಷೇತ್ರದಲ್ಲಿ ಆರ್ಥಿಕವಾಗಿ ಹಿಂದುಳಿದ ಬಡವರಿಗೆ ಸೂರು ಕಲ್ಪಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಬೇಕು ಎಂದು ಹೇಳಿದರು.</p>.<p>ಮಾಜಿ ಸೈನಿಕ ಮಂಜುನಾಥ್ ಮಾತನಾಡಿ, ‘ಬಡಾವಣೆಯಲ್ಲಿ 100ಕ್ಕೂ ಹೆಚ್ಚು ಮನೆಗಳಿದ್ದು, 400ಕ್ಕೂ ಹೆಚ್ಚು ಜನರು ವಾಸಿಸುತ್ತಿದ್ದಾರೆ. ಶುದ್ಧ ಕುಡಿಯುವ ನೀರು, ರಸ್ತೆ, ಚರಂಡಿ ಸೇರಿ ಮೂಲ ಸೌಕರ್ಯಗಳನ್ನು ಒದಗಿಸ<br />ಬೇಕು’ ಎಂದು ಮನವಿ ಮಾಡಿದರು.</p>.<p>ಪೌರಾಯುಕ್ತೆ ಎಸ್. ಲಕ್ಷ್ಮೀ ಮಾತನಾಡಿ, ‘ಈಚೆಗೆ ಗುತ್ತೂರು ಗ್ರಾಮವನ್ನು ಹರಿಹರ ನಗರಸಭೆ ವ್ಯಾಪ್ತಿಗೆ ಸೇರ್ಪಡೆ ಮಾಡಲಾಗಿದೆ. ಆದರೆ, ಸೇರ್ಪಡೆಯಾದ ಪ್ರದೇಶದ ಅಭಿವೃದ್ಧಿಗೆ ಅನುದಾನ ಮಂಜೂರಾಗಿಲ್ಲ. ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ’ ಎಂದು ತಿಳಿಸಿದರು.</p>.<p>ಇದೇ ವೇಳೆ ಶಾಸಕ ಎಸ್. ರಾಮಪ್ಪ ಅವರು ಗುರುವಾರ ಹಾವು ಕಚ್ಚಿ ಮೃತಪಟ್ಟ ಕಟ್ಟಡ ಕಾರ್ಮಿಕ ಪ್ರಭು ಅವರ ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. ನಗರಸಭೆಯ ಎಇಇ ಎಸ್.ಎಸ್. ಬಿರಾದಾರ್ ಹಾಗೂ ಸ್ಥಳಿಯ ಮುಖಂಡರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>