ರಾಜಸ್ತಾನದ ಜೈಪುರ ಹಾಗೂ ಉತ್ತರ ಪ್ರದೇಶದ ಅಲೀಗಢದಲ್ಲಿ ನಡೆದ ಬಿಜೆಪಿಯ ಚುನಾವಣಾ ಪ್ರಚಾರದ ವೇಳೆ ಮೋದಿ ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ಸುಳ್ಳು ಹೇಳಿದ್ದಾರೆ. ಕೋಮುಭಾವನೆ ಕೆರಳಿಸುವಂತೆ ಮಾತನಾಡಿದ್ದಾರೆ. ಜವಾಬ್ದಾರಿ ಸ್ಥಾನದಲ್ಲಿ ಇರುವವರು ಈ ರೀತಿಯ ಹೇಳಿಕೆ ನೀಡಿದರೆ ಶಾಂತಿ ಸುವ್ಯವಸ್ಥೆಗೆ ಧಕ್ಕೆ ಉಂಟಾಗುತ್ತದೆ. ಒಂದು ವೇಳೆ ಮೋದಿ ಭಾಗವಹಿಸಲು ಅವಕಾಶ ನೀಡಿದರೆ, ಕಪ್ಪು ಬಾವುಟ ಪ್ರದರ್ಶಿಸುವ ಮೂಲಕ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.