ದಾವಣಗೆರೆ ರೈಲು ನಿಲ್ದಾಣಕ್ಕೆ ಮಧ್ಯಾಹ್ನ ಬಂದ ಪರಮೇಶ್ ಹಾಗೂ ಪುಟ್ಟಸ್ವಾಮಿ ಅವರನ್ನು ಶಾಸಕ ಪ್ರೊ. ಎನ್. ಲಿಂಗಣ್ಣ, ಮೇಯರ್ ಜಯಮ್ಮ ಗೋಪಿನಾಯ್ಕ ಸೇರಿ ಹಲವು ಮುಖಂಡರು ಆತ್ಮೀಯವಾಗಿ ಬರಮಾಡಿಕೊಂಡು ಸನ್ಮಾನಿಸಿದರು. ಇಬ್ಬರು ಯೋಧರನ್ನೂ ಸತ್ಕರಿಸಿ ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಿದರು. ಉಪಮೇಯರ್ ಗಾಯಾತ್ರಿಬಾಯಿ ಕಂಡೋಜಿರಾವ್, ಮಾಜಿ ಮೇಯರ್ ಎಸ್.ಟಿ. ವೀರೇಶ್, ಧೂಡಾ ಅಧ್ಯಕ್ಷ ದೇವರಮನೆ ಶಿವಕುಮಾರ್, ಮಾಜಿ ಅಧ್ಯಕ್ಷರಾದ ಯಶವಂತರಾವ್ ಜಾಧವ್, ರಾಜನಹಳ್ಳಿ ಶಿವಕುಮಾರ್, ಮುಖಂಡರಾದ ಎನ್. ರಾಜಶೇಖರ್ ಸೇರಿ ಹಲವರು ಯೋಧರನ್ನು ಆತ್ಮೀಯವಾಗಿ ಸ್ವಾಗತಿಸಿದರು.