ಚನ್ನಗಿರಿ: ಸಾಮಾನ್ಯವಾಗಿ ದೃಶ್ಯ ಮಾಧ್ಯಮಗಳಲ್ಲಿ ನಾಗರಹಾವುಗಳ ಕಥಾನಕದ ದೃಶ್ಯಗಳು ಪ್ರತಿ ದಿನ ಪ್ರಸಾರವಾಗುವುದನ್ನು ನೋಡುತ್ತಿದ್ದೇವೆ. ಈ ಧಾರಾವಾಹಿಗಳಲ್ಲಿ ನಾಗರಹಾವು ಸೇಡು ತೀರಿಸಿಕೊಳ್ಳುವ ದೃಶ್ಯ ಸಾಮಾನ್ಯ. ಅದೇ ರೀತಿ ತಾಲ್ಲೂಕಿನ ದಿಗ್ಗೇನಹಳ್ಳಿ ಗ್ರಾಮದ ಬಳಿ ಶುಕ್ರವಾರ ನಾಗರಹಾವೊಂದು ಟ್ರ್ಯಾಕ್ಟರ್ ಚಾಲಕನ ಮೇಲೆ ಸೇಡು ತೀರಿಸಿಕೊಳ್ಳಲು ಪ್ರಯತ್ನಿಸಿ ಕೊನೆಗೆ ತನ್ನ ಜೀವವನ್ನೇ ಕಳೆದುಕೊಂಡಿದೆ.