<p><strong>ದಾವಣಗೆರೆ: </strong>ಬಿಜೆಪಿಯವರು ಕಾಂಗ್ರೆಸ್ನವರ ಮನೆಯ ಮೇಲೆ ದಾಳಿ ಮಾಡಿಸುತ್ತಿದ್ದು, ಸೇಡಿನ ರಾಜಕಾರಣ ಮಾಡುತ್ತಿದ್ದಾರೆ. ಇದು ಎಲ್ಲರಿಗೂ ಗೊತ್ತಿದೆ. ತಪ್ಪಿಲ್ಲದಿದ್ದರೂ ತಪ್ಪು ಹುಡುಕುವುದನ್ನು ಮಾಡುತ್ತಾ ಬಂದಿದ್ದಾರೆ. ಬಿಜೆಪಿಯವರು ಸೇಡಿನ ರಾಜಕೀಯ ಬಿಟ್ಟರೆ ಬಹಳ ಒಳ್ಳೆಯದು ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದರು.</p>.<p>ಮಾಧ್ಯಮದವರೊಂದಿಗೆ ಮಾತನಾಡಿ, ‘ಗುಜರಾತ್ನ ಕಾಂಗ್ರೆಸ್ ಶಾಸಕರಿಗೆ ಬೆಂಗಳೂರಿನಲ್ಲಿ ಡಿಕೆಶಿ ಆಶ್ರಯ ನೀಡಿ ರಕ್ಷಿಸಿದರು. ಇದೇ ಕಾರಣಕ್ಕೆ ಡಿಕೆಶಿ ಮೇಲೆ ದಾಳಿ ಮಾಡಲಾಗಿದೆ. ಕಾಂಗ್ರೆಸ್ನ ಬಲಿಷ್ಠ ನಾಯಕರ ಮೇಲೆ ಸೇಡು ತೀರಿಸಿಕೊಳ್ಳುತ್ತಿದ್ದಾರೆ. ಸೇಡಿನ ರಾಜಕಾರಣ ಎಷ್ಟು ದಿನ ಮಾಡುತ್ತಾರೇ ನೋಡೋಣ’ ಎಂದರು.</p>.<p>‘ಚುನಾವಣೆ ವೇಳೆಯಿಂದಲೂ ಬಿಜೆಪಿಯವರು ಇಂತಹ ರಾಜಕಾರಣ ಮಾಡುತ್ತಲೇ ಬಂದಿದ್ದಾರೆ. ರೇವಣ್ಣ ಅವರ ಸಂಬಂಧಿಕರ ಮನೆಯ ಮೇಲೆ ದಾಳಿ ನಡೆಸಿದರು. ಬಿಜೆಪಿಯವರ ಮೇಲೆ ಏಕೆ ದಾಳಿ ಮಾಡಲಿಲ್ಲ ಎಂದು ಪ್ರಶ್ನಿಸಿದ ಅವರು, ಸುಳ್ಳು ನಿಜ ಮಾಡುವುದರಲ್ಲಿ ಬಿಜೆಪಿಯವರು ನಿಸ್ಸೀಮರು’ ಎಂದು ಹೇಳಿದರು.</p>.<p>‘ರಾಜ್ಯದಲ್ಲಿ ತುಂಬಾ ಗಲಾಟೆಗಳು ಆಗುತ್ತಿವೆ. ಬಸ್ಗಳನ್ನು ಸುಡುತ್ತಿದ್ದಾರೆ. ಇದು ಅನಾವಶ್ಯಕ’ ಎಂದು ಹೇಳಿದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ಬಿಜೆಪಿಯವರು ಕಾಂಗ್ರೆಸ್ನವರ ಮನೆಯ ಮೇಲೆ ದಾಳಿ ಮಾಡಿಸುತ್ತಿದ್ದು, ಸೇಡಿನ ರಾಜಕಾರಣ ಮಾಡುತ್ತಿದ್ದಾರೆ. ಇದು ಎಲ್ಲರಿಗೂ ಗೊತ್ತಿದೆ. ತಪ್ಪಿಲ್ಲದಿದ್ದರೂ ತಪ್ಪು ಹುಡುಕುವುದನ್ನು ಮಾಡುತ್ತಾ ಬಂದಿದ್ದಾರೆ. ಬಿಜೆಪಿಯವರು ಸೇಡಿನ ರಾಜಕೀಯ ಬಿಟ್ಟರೆ ಬಹಳ ಒಳ್ಳೆಯದು ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದರು.</p>.<p>ಮಾಧ್ಯಮದವರೊಂದಿಗೆ ಮಾತನಾಡಿ, ‘ಗುಜರಾತ್ನ ಕಾಂಗ್ರೆಸ್ ಶಾಸಕರಿಗೆ ಬೆಂಗಳೂರಿನಲ್ಲಿ ಡಿಕೆಶಿ ಆಶ್ರಯ ನೀಡಿ ರಕ್ಷಿಸಿದರು. ಇದೇ ಕಾರಣಕ್ಕೆ ಡಿಕೆಶಿ ಮೇಲೆ ದಾಳಿ ಮಾಡಲಾಗಿದೆ. ಕಾಂಗ್ರೆಸ್ನ ಬಲಿಷ್ಠ ನಾಯಕರ ಮೇಲೆ ಸೇಡು ತೀರಿಸಿಕೊಳ್ಳುತ್ತಿದ್ದಾರೆ. ಸೇಡಿನ ರಾಜಕಾರಣ ಎಷ್ಟು ದಿನ ಮಾಡುತ್ತಾರೇ ನೋಡೋಣ’ ಎಂದರು.</p>.<p>‘ಚುನಾವಣೆ ವೇಳೆಯಿಂದಲೂ ಬಿಜೆಪಿಯವರು ಇಂತಹ ರಾಜಕಾರಣ ಮಾಡುತ್ತಲೇ ಬಂದಿದ್ದಾರೆ. ರೇವಣ್ಣ ಅವರ ಸಂಬಂಧಿಕರ ಮನೆಯ ಮೇಲೆ ದಾಳಿ ನಡೆಸಿದರು. ಬಿಜೆಪಿಯವರ ಮೇಲೆ ಏಕೆ ದಾಳಿ ಮಾಡಲಿಲ್ಲ ಎಂದು ಪ್ರಶ್ನಿಸಿದ ಅವರು, ಸುಳ್ಳು ನಿಜ ಮಾಡುವುದರಲ್ಲಿ ಬಿಜೆಪಿಯವರು ನಿಸ್ಸೀಮರು’ ಎಂದು ಹೇಳಿದರು.</p>.<p>‘ರಾಜ್ಯದಲ್ಲಿ ತುಂಬಾ ಗಲಾಟೆಗಳು ಆಗುತ್ತಿವೆ. ಬಸ್ಗಳನ್ನು ಸುಡುತ್ತಿದ್ದಾರೆ. ಇದು ಅನಾವಶ್ಯಕ’ ಎಂದು ಹೇಳಿದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>