ದಾವಣಗೆರೆ: ಬಿಜೆಪಿಯವರು ಕಾಂಗ್ರೆಸ್ನವರ ಮನೆಯ ಮೇಲೆ ದಾಳಿ ಮಾಡಿಸುತ್ತಿದ್ದು, ಸೇಡಿನ ರಾಜಕಾರಣ ಮಾಡುತ್ತಿದ್ದಾರೆ. ಇದು ಎಲ್ಲರಿಗೂ ಗೊತ್ತಿದೆ. ತಪ್ಪಿಲ್ಲದಿದ್ದರೂ ತಪ್ಪು ಹುಡುಕುವುದನ್ನು ಮಾಡುತ್ತಾ ಬಂದಿದ್ದಾರೆ. ಬಿಜೆಪಿಯವರು ಸೇಡಿನ ರಾಜಕೀಯ ಬಿಟ್ಟರೆ ಬಹಳ ಒಳ್ಳೆಯದು ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದರು.