<p><strong>ಭಾನುವಳ್ಳಿ </strong>(<strong>ಕಡರನಾಯ್ಕನಹಳ್ಳಿ</strong>): ಗ್ರಾಮದ ಸಂಪರ್ಕ ರಸ್ತೆ ದಶಕಗಳಿಂದ ದುರಸ್ತಿ ಕಾಣದೆ ಹದಗೆಟ್ಟಿದೆ. ಇದರಿಂದ ಬೇಸತ್ತ ಗ್ರಾಮಸ್ಥರು ಡಾ.ಬಿ.ಆರ್ ಅಂಬೇಡ್ಕರ್ ಯುವಕ ಸಂಘದ ನೇತೃತ್ವದಲ್ಲಿ ರಸ್ತೆಯಲ್ಲಿ ಭತ್ತದ ನಾಟಿ ಮಾಡುವ ಮೂಲಕ ಪ್ರತಿಭಟಿಸಿದರು. </p>.<p>ನಂದಿಗುಡಿ ರಸ್ತೆಯಿಂದ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದ್ದು, ರಾಮತೀರ್ಥ, ನಾಗೇನಹಳ್ಳಿ ಗ್ರಾಮದ ಮೂಲಕ ಹೆದ್ದಾರಿ ತಲುಪುತ್ತದೆ. </p>.<p>ಈ ರಸ್ತೆಯ ತುಂಬಾ ತಗ್ಗು ಗುಂಡಿಗಳು ತುಂಬಿಕೊಂಡಿವೆ. ಭಾನುವಳ್ಳಿ ಗ್ರಾಮದಲ್ಲಿ ರಸ್ತೆ ತುಂಬಾ ಹದಗೆಟ್ಟಿದೆ. </p>.<p>‘ಮಳೆಗಾಲದಲ್ಲಿ ಓಡಾಡಲು ತೀವ್ರ ತೊಂದರೆಯಾಗುತ್ತಿದೆ. ವಿದ್ಯಾರ್ಥಿಗಳು ಶಾಲೆಗೆ ತೆರಳಲು, ರೋಗಿಗಳು ಆಸ್ಪತ್ರೆಗೆ ತೆರಳಲು ಪ್ರಯಾಸ ಪಡಬೇಕಿದೆ ಎಂದು ಗ್ರಾಮ ರೈತ ಸಂಘದ ಅಧ್ಯಕ್ಷ ಎನ್.ಪ್ರಕಾಶ್ ಹೇಳಿದರು. </p>.<p>‘ಶೀಘ್ರವೇ ರಸ್ತೆ ಕಾಮಗಾರಿಗೆ ಸಂಬಂಧಪಟ್ಟವರು ಮುಂದಾಗಬೇಕು’ ಎಂದು ಅಂಬೇಡ್ಕರ್ ಯುವಕ ಸಂಘದ ಉಪಾಧ್ಯಕ್ಷ ಹಳದಪ್ಪರ ಸಂತೋಷ್, ಕಾರ್ಯದರ್ಶಿ ನಾಗೇಶ್, ಖಜಾಂಚಿ ಹರೀಶ್, ಸದಸ್ಯರಾದ ನವೀನ್, ಪ್ರವೀಣ್, ಸಚಿನ್, ಸ್ವಾಮಿ ನಿಂಗಪ್ಪ, ಹನುಮಂತಪ್ಪ, ರಾಜಪ್ಪ ಇದ್ದರು. </p>.<p>‘ರಸ್ತೆ ದುರಸ್ತಿಗೆ ಬೇಕಾಗುವಷ್ಟು ಅನುದಾನವಿಲ್ಲ. ಈ ರಸ್ತೆ ಲೋಕೋಪಯೋಗಿ ಇಲಾಖೆಗೆ ಬರುತ್ತದೆ. ಈ ಬಗ್ಗೆ ಇಲಾಖೆಗೆ ಮನವಿ ಮಾಡುತ್ತೇವೆ’ ಎಂದು ಭಾನುವಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಕಾಳಮ್ಮ ತಿಳಿಸಿದರು. </p>.<p>ಈ ರಸ್ತೆ ಕಾಮಗಾರಿಗೆ ಟೆಂಡರ್ ಆಗಿದೆ. ₹1.95 ಕೋಟಿ ಮೊತ್ತದ ಕಾಮಗಾರಿ ಇದಾಗಿದೆ. ತಾಂತ್ರಿಕ ಕಾರಣಗಳಿಂದ ವಿಳಂಬವಾಗಿದ್ದು, ತುರ್ತಾಗಿ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಎಇಇ ಮರಿಸ್ವಾಮಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಾನುವಳ್ಳಿ </strong>(<strong>ಕಡರನಾಯ್ಕನಹಳ್ಳಿ</strong>): ಗ್ರಾಮದ ಸಂಪರ್ಕ ರಸ್ತೆ ದಶಕಗಳಿಂದ ದುರಸ್ತಿ ಕಾಣದೆ ಹದಗೆಟ್ಟಿದೆ. ಇದರಿಂದ ಬೇಸತ್ತ ಗ್ರಾಮಸ್ಥರು ಡಾ.ಬಿ.ಆರ್ ಅಂಬೇಡ್ಕರ್ ಯುವಕ ಸಂಘದ ನೇತೃತ್ವದಲ್ಲಿ ರಸ್ತೆಯಲ್ಲಿ ಭತ್ತದ ನಾಟಿ ಮಾಡುವ ಮೂಲಕ ಪ್ರತಿಭಟಿಸಿದರು. </p>.<p>ನಂದಿಗುಡಿ ರಸ್ತೆಯಿಂದ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದ್ದು, ರಾಮತೀರ್ಥ, ನಾಗೇನಹಳ್ಳಿ ಗ್ರಾಮದ ಮೂಲಕ ಹೆದ್ದಾರಿ ತಲುಪುತ್ತದೆ. </p>.<p>ಈ ರಸ್ತೆಯ ತುಂಬಾ ತಗ್ಗು ಗುಂಡಿಗಳು ತುಂಬಿಕೊಂಡಿವೆ. ಭಾನುವಳ್ಳಿ ಗ್ರಾಮದಲ್ಲಿ ರಸ್ತೆ ತುಂಬಾ ಹದಗೆಟ್ಟಿದೆ. </p>.<p>‘ಮಳೆಗಾಲದಲ್ಲಿ ಓಡಾಡಲು ತೀವ್ರ ತೊಂದರೆಯಾಗುತ್ತಿದೆ. ವಿದ್ಯಾರ್ಥಿಗಳು ಶಾಲೆಗೆ ತೆರಳಲು, ರೋಗಿಗಳು ಆಸ್ಪತ್ರೆಗೆ ತೆರಳಲು ಪ್ರಯಾಸ ಪಡಬೇಕಿದೆ ಎಂದು ಗ್ರಾಮ ರೈತ ಸಂಘದ ಅಧ್ಯಕ್ಷ ಎನ್.ಪ್ರಕಾಶ್ ಹೇಳಿದರು. </p>.<p>‘ಶೀಘ್ರವೇ ರಸ್ತೆ ಕಾಮಗಾರಿಗೆ ಸಂಬಂಧಪಟ್ಟವರು ಮುಂದಾಗಬೇಕು’ ಎಂದು ಅಂಬೇಡ್ಕರ್ ಯುವಕ ಸಂಘದ ಉಪಾಧ್ಯಕ್ಷ ಹಳದಪ್ಪರ ಸಂತೋಷ್, ಕಾರ್ಯದರ್ಶಿ ನಾಗೇಶ್, ಖಜಾಂಚಿ ಹರೀಶ್, ಸದಸ್ಯರಾದ ನವೀನ್, ಪ್ರವೀಣ್, ಸಚಿನ್, ಸ್ವಾಮಿ ನಿಂಗಪ್ಪ, ಹನುಮಂತಪ್ಪ, ರಾಜಪ್ಪ ಇದ್ದರು. </p>.<p>‘ರಸ್ತೆ ದುರಸ್ತಿಗೆ ಬೇಕಾಗುವಷ್ಟು ಅನುದಾನವಿಲ್ಲ. ಈ ರಸ್ತೆ ಲೋಕೋಪಯೋಗಿ ಇಲಾಖೆಗೆ ಬರುತ್ತದೆ. ಈ ಬಗ್ಗೆ ಇಲಾಖೆಗೆ ಮನವಿ ಮಾಡುತ್ತೇವೆ’ ಎಂದು ಭಾನುವಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಕಾಳಮ್ಮ ತಿಳಿಸಿದರು. </p>.<p>ಈ ರಸ್ತೆ ಕಾಮಗಾರಿಗೆ ಟೆಂಡರ್ ಆಗಿದೆ. ₹1.95 ಕೋಟಿ ಮೊತ್ತದ ಕಾಮಗಾರಿ ಇದಾಗಿದೆ. ತಾಂತ್ರಿಕ ಕಾರಣಗಳಿಂದ ವಿಳಂಬವಾಗಿದ್ದು, ತುರ್ತಾಗಿ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಎಇಇ ಮರಿಸ್ವಾಮಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>