ದಾವಣಗೆರೆ: ಇಲ್ಲಿನ ನಿಟುವಳ್ಳಿ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಶನಿವಾರ ರಾತ್ರಿ ಹುಂಡಿ ಒಡೆದಿರುವ ಕಳ್ಳರು ₹ 1 ಲಕ್ಷ ದೋಚಿದ್ದಾರೆ.
ಸ್ಥಳಕ್ಕೆ ಪೊಲೀಸರು, ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲಿಸಿದರು.
ಕಳೆದ ವಾರ ಇದೇ ಬಡಾವಣೆಯ ಕೊಟ್ಟೂರೇಶ್ವರ ದೇವಸ್ಥಾನ ಹಾಗೂ ಒಂದು ಮನೆಯಲ್ಲಿ ಕಳ್ಳತನವಾಗಿತ್ತು. ಪ್ರಕರಣ ದಾಖಲಿಸಿಕೊಂಡಿರುವ ಕೆಟಿಜೆ ನಗರ ಠಾಣೆಯ ಪೊಲೀಸರು ಕಳ್ಳರ ಪತ್ತೆಗೆ ಬಲೆ ಬೀಸಿದ್ದಾರೆ.