<p><strong>ದಾವಣಗೆರೆ:</strong> ನಗರದ ಆರೈಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯು ಅತ್ಯಾಧುನಿಕ ವೈದ್ಯಕೀಯ ಸೇವೆಗಳನ್ನು ಒದಗಿಸುವ ತನ್ನ ಬದ್ಧತೆಯನ್ನು ಮತ್ತೊಮ್ಮೆ ದೃಢಪಡಿಸುತ್ತಾ, ರೋಬೋಟಿಕ್ ಮಂಡಿಕೀಲು ಬದಲಾವಣೆ ಶಸ್ತ್ರಚಿಕಿತ್ಸೆಯನ್ನು ಜನವರಿ 22ರಿಂದ ಪ್ರಾರಂಭಿಸುತ್ತಿದೆ. </p><p>ಈ ಅತ್ಯಾಧುನಿಕ ರೋಬೋಟಿಕ್ ತಂತ್ರಜ್ಞಾನವು ಮಂಡಿ ಕೀಲು ಬದಲಾವಣೆ ಶಸ್ತ್ರಚಿಕಿತ್ಸೆಯಲ್ಲಿ ನಿಖರತೆಯನ್ನು ಸಾಧಿಸಲಿದೆ. ಕಡಿಮೆ ನೋವು, ವೇಗವಾದ ಚೇತರಿಕೆ ಮತ್ತು ದೀರ್ಘಕಾಲಿಕ ಇಂಪ್ಲಾಂಟ್ ಫಲಿತಾಂಶ ನೀಡಲಿದೆ. ದೀರ್ಘಕಾಲದ ಮಂಡಿ ಕೀಲು ಸಮಸ್ಯೆಗಳಿಂದ ಬಳಲುತ್ತಿರುವ ರೋಗಿಗಳಿಗೆ ಇದು ಅತ್ಯಂತ ಉಪಯುಕ್ತವಾಗಿದೆ. </p><p>ರೋಬೋಟಿಕ್ ಮಂಡಿ ಕೀಲು ಶಸ್ತ್ರಚಿಕಿತ್ಸೆಯನ್ನು ಆಸ್ಪತ್ರೆಯ ಮುಖ್ಯಸ್ಥ ಡಾ. ರವಿಕುಮಾರ್ ಟಿ.ಜಿ. ಮಾರ್ಗದರ್ಶನದಲ್ಲಿ ಮಂಡಿಕೀಲು ಬದಲಾವಣೆ ಶಸ್ತ್ರಚಿಕಿತ್ಸಕರಾದ ಲಿಂಗರಾಜು ಎ.ಪಿ. ಮತ್ತು ಡಾ. ಧ್ರುವ ವಿ. ಹಾಗೂ ಅರಿವಳಿಕೆ ತಜ್ಞ ಡಾ. ದೀಪಕ್ ಆರ್.ಎಂ. ನೇತೃತ್ವದಲ್ಲಿ ಆರಂಭಿಸಲಾಗುತ್ತಿದೆ. </p><p>‘ಮಧ್ಯ ಕರ್ನಾಟಕದಲ್ಲಿ ಪ್ರಪ್ರಥಮ ಬಾರಿಗೆ ದಾವಣಗೆರೆಯಲ್ಲಿ ರೋಬೋಟಿಕ್ ಮಂಡಿಕೀಲು ಬದಲಾವಣೆ ಶಸ್ತ್ರಚಿಕಿತ್ಸೆಯನ್ನು ಪ್ರಾರಂಭಿಸುತ್ತಿದ್ದೇವೆ. ಈ ಮೂಲಕ ಪ್ರಾದೇಶಿಕ ರೋಗಿಗಳಿಗೆ ಅತ್ಯಾಧುನಿಕ ಅಸ್ಥಿ ಚಿಕಿತ್ಸೆಯನ್ನು ಸುಲಭವಾಗಿ ಲಭ್ಯವಾಗಿಸುವುದು ನಮ್ಮ ಉದ್ದೇಶವಾಗಿದೆ’ ಎಂದು ಡಾ. ರವಿಕುಮಾರ್ ಟಿ.ಜಿ. ತಿಳಿಸಿದ್ದಾರೆ. </p><p>ಹೆಚ್ಚಿನ ಮಾಹಿತಿಗೆ ಮೊ. 8431541487 ಸಂಪರ್ಕಿಸಬಹುದು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ನಗರದ ಆರೈಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯು ಅತ್ಯಾಧುನಿಕ ವೈದ್ಯಕೀಯ ಸೇವೆಗಳನ್ನು ಒದಗಿಸುವ ತನ್ನ ಬದ್ಧತೆಯನ್ನು ಮತ್ತೊಮ್ಮೆ ದೃಢಪಡಿಸುತ್ತಾ, ರೋಬೋಟಿಕ್ ಮಂಡಿಕೀಲು ಬದಲಾವಣೆ ಶಸ್ತ್ರಚಿಕಿತ್ಸೆಯನ್ನು ಜನವರಿ 22ರಿಂದ ಪ್ರಾರಂಭಿಸುತ್ತಿದೆ. </p><p>ಈ ಅತ್ಯಾಧುನಿಕ ರೋಬೋಟಿಕ್ ತಂತ್ರಜ್ಞಾನವು ಮಂಡಿ ಕೀಲು ಬದಲಾವಣೆ ಶಸ್ತ್ರಚಿಕಿತ್ಸೆಯಲ್ಲಿ ನಿಖರತೆಯನ್ನು ಸಾಧಿಸಲಿದೆ. ಕಡಿಮೆ ನೋವು, ವೇಗವಾದ ಚೇತರಿಕೆ ಮತ್ತು ದೀರ್ಘಕಾಲಿಕ ಇಂಪ್ಲಾಂಟ್ ಫಲಿತಾಂಶ ನೀಡಲಿದೆ. ದೀರ್ಘಕಾಲದ ಮಂಡಿ ಕೀಲು ಸಮಸ್ಯೆಗಳಿಂದ ಬಳಲುತ್ತಿರುವ ರೋಗಿಗಳಿಗೆ ಇದು ಅತ್ಯಂತ ಉಪಯುಕ್ತವಾಗಿದೆ. </p><p>ರೋಬೋಟಿಕ್ ಮಂಡಿ ಕೀಲು ಶಸ್ತ್ರಚಿಕಿತ್ಸೆಯನ್ನು ಆಸ್ಪತ್ರೆಯ ಮುಖ್ಯಸ್ಥ ಡಾ. ರವಿಕುಮಾರ್ ಟಿ.ಜಿ. ಮಾರ್ಗದರ್ಶನದಲ್ಲಿ ಮಂಡಿಕೀಲು ಬದಲಾವಣೆ ಶಸ್ತ್ರಚಿಕಿತ್ಸಕರಾದ ಲಿಂಗರಾಜು ಎ.ಪಿ. ಮತ್ತು ಡಾ. ಧ್ರುವ ವಿ. ಹಾಗೂ ಅರಿವಳಿಕೆ ತಜ್ಞ ಡಾ. ದೀಪಕ್ ಆರ್.ಎಂ. ನೇತೃತ್ವದಲ್ಲಿ ಆರಂಭಿಸಲಾಗುತ್ತಿದೆ. </p><p>‘ಮಧ್ಯ ಕರ್ನಾಟಕದಲ್ಲಿ ಪ್ರಪ್ರಥಮ ಬಾರಿಗೆ ದಾವಣಗೆರೆಯಲ್ಲಿ ರೋಬೋಟಿಕ್ ಮಂಡಿಕೀಲು ಬದಲಾವಣೆ ಶಸ್ತ್ರಚಿಕಿತ್ಸೆಯನ್ನು ಪ್ರಾರಂಭಿಸುತ್ತಿದ್ದೇವೆ. ಈ ಮೂಲಕ ಪ್ರಾದೇಶಿಕ ರೋಗಿಗಳಿಗೆ ಅತ್ಯಾಧುನಿಕ ಅಸ್ಥಿ ಚಿಕಿತ್ಸೆಯನ್ನು ಸುಲಭವಾಗಿ ಲಭ್ಯವಾಗಿಸುವುದು ನಮ್ಮ ಉದ್ದೇಶವಾಗಿದೆ’ ಎಂದು ಡಾ. ರವಿಕುಮಾರ್ ಟಿ.ಜಿ. ತಿಳಿಸಿದ್ದಾರೆ. </p><p>ಹೆಚ್ಚಿನ ಮಾಹಿತಿಗೆ ಮೊ. 8431541487 ಸಂಪರ್ಕಿಸಬಹುದು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>