ಹರಿಹರ: 2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆಯಿಂದಾಗಿ ಬೆಳೆಹಾನಿ ಅನುಭವಿಸಿದ ಹರಿಹರ ತಾಲ್ಲೂಕಿನ 7,476 ರೈತರ ಬ್ಯಾಂಕ್ ಖಾತೆಗಳಿಗೆ ಎಸ್ಡಿಆರ್ಎಫ್ ಮತ್ತು ಎನ್ಡಿಆರ್ಎಫ್ ಮಾರ್ಗಸೂಚಿಯಂತೆ ಗರಿಷ್ಠ ₹ 2000 ರಂತೆ ಒಟ್ಟು ₹ 2,55,52,540 ಮೊತ್ತವನ್ನು ಪಾವತಿ ಮಾಡಲಾಗಿದೆ ಎಂದು ತಹಶೀಲ್ದಾರ್ ಗುರುಬಸವರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.