<p><strong>ನ್ಯಾಮತಿ</strong>: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ರುದ್ರಭೂಮಿ ಜಾಗವನ್ನು ಗುರುತಿಸುವಂತೆ ತಹಶೀಲ್ದಾರ್ ಎಂ.ಪಿ.ಕವಿರಾಜ ಅವರಿಗೆ ಸಾರ್ವಜನಿಕರು ಬುಧವಾರ ಮನವಿ ಮಾಡಿದರು.</p>.<p>10,000 ಜನಸಂಖ್ಯೆ ಇರುವ ಪಟ್ಟಣದ ಎಲ್ಲಾ ಸಮುದಾಯದವರು ಇದೇ ರುದ್ರಭೂಮಿಯನ್ನು ಬಳಸುತ್ತಾರೆ. ಆದರೆ ಈಗ ಕೆಲವರು ರುದ್ರಭೂಮಿ ಜಾಗ ಒತ್ತುವರಿ ಮಾಡಿ ಮನೆಗಳನ್ನು ನಿರ್ಮಾಣ ಮಾಡುತ್ತಿದ್ದಾರೆ. ರುದ್ರಭೂಮಿಯಲ್ಲಿ ಗಿಡಗಂಟಿ ಬೆಳೆದು ಅಂತ್ಯಸಂಸ್ಕಾರ ಮಾಡಲು ಜನತೆ ಕಷ್ಟವಾಗಿದೆ. ಈ ಬಗ್ಗೆ ಗಮನಹರಿಸಿ, ಸ್ವಚ್ಛತೆ ಮಾಡಿಸುವಂತೆ ಮುಖಂಡರಾದ ಎಚ್.ಎನ್.ವಿರೂಪಾಕ್ಷಪ್ಪ, ಹವಳದ ಲಿಂಗರಾಜ, ಜೋಗದ ಕಾಂತರಾಜ, ವಿಜಯಕುಮಾರ, ಅಕ್ಕಸಾಲಿ ರಾಜು, ಎಂ.ಎಸ್.ಜಗದೀಶ ಮನವಿ ಮಾಡಿದರು.</p>.<p>ಮನವಿಗೆ ಸ್ಪಂದಿಸಿದ ತಹಶೀಲ್ದಾರ್ ಕವಿರಾಜ ಅವರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಪಿ.ಗಣೇಶರಾವ್ ಅವರ ಜೊತೆಗೂಡಿ ಸ್ಥಳ ಪರಿಶೀಲನೆ ನಡೆಸಿದರು.</p>.<p>ರುದ್ರಭೂಮಿ ಜಾಗ ಒತ್ತುವರಿ ಮಾಡಿ ಮನೆ ನಿರ್ಮಾಣ ಮಾಡಿರುವುದು ಕಂಡು ಬಂದಿದ್ದರಿಂದ, ಕೂಡಲೇ ಜಾಗವನ್ನು ಅಳತೆ ಮಾಡಿ ಹದ್ದುಬಸ್ತು ಮಾಡುವಂತೆ ಮುಖ್ಯಾಧಿಕಾರಿಗೆ ಸೂಚಿಸಿದರು. ಅಳತೆ ನಂತರ ಒತ್ತುವರಿ ಮಾಡಿರುವುದು ಕಂಡು ಬಂದರೆ ತೆರವುಗೊಳಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನ್ಯಾಮತಿ</strong>: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ರುದ್ರಭೂಮಿ ಜಾಗವನ್ನು ಗುರುತಿಸುವಂತೆ ತಹಶೀಲ್ದಾರ್ ಎಂ.ಪಿ.ಕವಿರಾಜ ಅವರಿಗೆ ಸಾರ್ವಜನಿಕರು ಬುಧವಾರ ಮನವಿ ಮಾಡಿದರು.</p>.<p>10,000 ಜನಸಂಖ್ಯೆ ಇರುವ ಪಟ್ಟಣದ ಎಲ್ಲಾ ಸಮುದಾಯದವರು ಇದೇ ರುದ್ರಭೂಮಿಯನ್ನು ಬಳಸುತ್ತಾರೆ. ಆದರೆ ಈಗ ಕೆಲವರು ರುದ್ರಭೂಮಿ ಜಾಗ ಒತ್ತುವರಿ ಮಾಡಿ ಮನೆಗಳನ್ನು ನಿರ್ಮಾಣ ಮಾಡುತ್ತಿದ್ದಾರೆ. ರುದ್ರಭೂಮಿಯಲ್ಲಿ ಗಿಡಗಂಟಿ ಬೆಳೆದು ಅಂತ್ಯಸಂಸ್ಕಾರ ಮಾಡಲು ಜನತೆ ಕಷ್ಟವಾಗಿದೆ. ಈ ಬಗ್ಗೆ ಗಮನಹರಿಸಿ, ಸ್ವಚ್ಛತೆ ಮಾಡಿಸುವಂತೆ ಮುಖಂಡರಾದ ಎಚ್.ಎನ್.ವಿರೂಪಾಕ್ಷಪ್ಪ, ಹವಳದ ಲಿಂಗರಾಜ, ಜೋಗದ ಕಾಂತರಾಜ, ವಿಜಯಕುಮಾರ, ಅಕ್ಕಸಾಲಿ ರಾಜು, ಎಂ.ಎಸ್.ಜಗದೀಶ ಮನವಿ ಮಾಡಿದರು.</p>.<p>ಮನವಿಗೆ ಸ್ಪಂದಿಸಿದ ತಹಶೀಲ್ದಾರ್ ಕವಿರಾಜ ಅವರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಪಿ.ಗಣೇಶರಾವ್ ಅವರ ಜೊತೆಗೂಡಿ ಸ್ಥಳ ಪರಿಶೀಲನೆ ನಡೆಸಿದರು.</p>.<p>ರುದ್ರಭೂಮಿ ಜಾಗ ಒತ್ತುವರಿ ಮಾಡಿ ಮನೆ ನಿರ್ಮಾಣ ಮಾಡಿರುವುದು ಕಂಡು ಬಂದಿದ್ದರಿಂದ, ಕೂಡಲೇ ಜಾಗವನ್ನು ಅಳತೆ ಮಾಡಿ ಹದ್ದುಬಸ್ತು ಮಾಡುವಂತೆ ಮುಖ್ಯಾಧಿಕಾರಿಗೆ ಸೂಚಿಸಿದರು. ಅಳತೆ ನಂತರ ಒತ್ತುವರಿ ಮಾಡಿರುವುದು ಕಂಡು ಬಂದರೆ ತೆರವುಗೊಳಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>