ಸುಂದರ ಶಿಲ್ಪ ಕಲೆಯನ್ನು ಹೊಂದಿರುವ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯವನ್ನು ಮಾಡಲು 2008ನೇ ಸಾಲಿನಲ್ಲಿಯೇ ₹ 94 ಲಕ್ಷ ಅನುದಾನವನ್ನು ಬಿಡುಗಡೆಗೊಳಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ, ಇನ್ನೂ ಅನುದಾನ ಬಿಡುಗಡೆಯಾಗಿಲ್ಲ. ಈ ದೇವಸ್ಥಾನದ ಸುತ್ತಮುತ್ತ ಇರುವ 2 ಎಕರೆ ಪ್ರದೇಶದಲ್ಲಿ ಸುಂದರವಾದ ಉದ್ಯಾನ ನಿರ್ಮಿಸಬೇಕಿದೆ. ಅನುದಾನ ಬಿಡುಗಡೆಗಾಗಿ ಮತ್ತೆ ಪ್ರಯತ್ನ ಮಾಡಲಾಗುವುದು ಎಂದು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ತಿಳಿಸಿದರು.