<p><strong>ನ್ಯಾಮತಿ:</strong> ‘ಗ್ರಾಮೀಣ ಭಾಗದ ಕಲಾವಿದರು ಸರ್ಕಾರದಿಂದ ಸಿಗುವ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ದಾವಣಗೆರೆ ಜಿಲ್ಲಾ ಹವ್ಯಾಸಿ ಗ್ರಾಮೀಣ ಕಲಾವಿದರ ಒಕ್ಕೂಟದ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಎಸ್.ರಾಜು ಹೇಳಿದರು. </p>.<p>ಪಟ್ಟಣದ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಕಚೇರಿಯಲ್ಲಿ ಭಾನುವಾರ ತಾಲ್ಲೂಕಿನ ಗ್ರಾಮೀಣ ಭಾಗದ ಕಲಾವಿದರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ಮತ್ತು ಸಂಘದ ಸದಸ್ಯತ್ವ ಪಡೆಯುವ ಬಗ್ಗೆ ಮಾಹಿತಿ ನೀಡಿದರು. </p>.<p>ಭಜನೆ ತಂಡದ ಸದಸ್ಯರು, ಡೊಳ್ಳು ತಂಡದವರು, ಪುರುವಂತಿಕೆ, ಜಾನಪದ ಗಾಯಕರು, ಕೋಲಾಟ ಕಲಾವಿದರು ಸೇರಿದಂತೆ ವಿವಿಧ ಕಲಾವಿದರು ತಮ್ಮ ಸಂಘಗಳನ್ನು ನೋಂದಣಿ ಮಾಡಿಸಿಕೊಳ್ಳಬೇಕು. ಎರಡು ಮೂರು ವರ್ಷಗಳ ತಮ್ಮ ಕಾರ್ಯಕ್ರಮಗಳ ದಾಖಲೆಗಳನ್ನು ಸರ್ಕಾರಕ್ಕೆ ಸಲ್ಲಿಸಿದರೆ ಅನುದಾನ ಪಡೆಯಲು ಅನುಕೂಲವಾಗುತ್ತದೆ ಎಂದರು. </p>.<p>ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಡಿ.ಎಂ.ಹಾಲಾರಾಧ್ಯ, ತಾಲ್ಲೂಕಿನ ಕಲಾವಿದರಿಗೆ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು. </p>.<p>ಸುರಹೊನ್ನೆ ವಿರೂಪಾಕ್ಷಚಾರ್ ಅವರನ್ನು ಪ್ರಭಾರವಾಗಿ ತಾಲ್ಲೂಕು ಸಂಚಾಲಕರನ್ನಾಗಿ ನೇಮಿಸಲಾಯಿತು. </p>.<p>ನಿಕಟಪೂರ್ವ ಅಧ್ಯಕ್ಷ ಗಡೆಕಟ್ಟೆರ ನಿಜಲಿಂಗಪ್ಪ, ಕೋಶಾಧ್ಯಕ್ಷ ಎಂ.ಎಸ್.ಜಗದೀಶ, ಕಲಾವಿದ ಸಿ.ಕೆ.ಬೋಜರಾಜ, ಆರುಂಡಿ ಮಂಜಪ್ಪ, ರೇವಣಸಿದ್ದಪ್ಪ, ಸಿದ್ದಪ್ಪ, ವೀಣಾ ಆಚಾರ್ ಮಾತನಾಡಿದರು. </p>.<p>ಕಲಾವಿದರಾದ ಹನುಮಂತಾಚಾರ್, ಮಾರ್ತಾಂಡಪ್ಪ, ನಿರ್ಥಡಿ ಬಸವರಾಜಪ್ಪ, ನಿವೃತ್ತ ಅಧಿಕಾರಿ ಜಯಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನ್ಯಾಮತಿ:</strong> ‘ಗ್ರಾಮೀಣ ಭಾಗದ ಕಲಾವಿದರು ಸರ್ಕಾರದಿಂದ ಸಿಗುವ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ದಾವಣಗೆರೆ ಜಿಲ್ಲಾ ಹವ್ಯಾಸಿ ಗ್ರಾಮೀಣ ಕಲಾವಿದರ ಒಕ್ಕೂಟದ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಎಸ್.ರಾಜು ಹೇಳಿದರು. </p>.<p>ಪಟ್ಟಣದ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಕಚೇರಿಯಲ್ಲಿ ಭಾನುವಾರ ತಾಲ್ಲೂಕಿನ ಗ್ರಾಮೀಣ ಭಾಗದ ಕಲಾವಿದರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ಮತ್ತು ಸಂಘದ ಸದಸ್ಯತ್ವ ಪಡೆಯುವ ಬಗ್ಗೆ ಮಾಹಿತಿ ನೀಡಿದರು. </p>.<p>ಭಜನೆ ತಂಡದ ಸದಸ್ಯರು, ಡೊಳ್ಳು ತಂಡದವರು, ಪುರುವಂತಿಕೆ, ಜಾನಪದ ಗಾಯಕರು, ಕೋಲಾಟ ಕಲಾವಿದರು ಸೇರಿದಂತೆ ವಿವಿಧ ಕಲಾವಿದರು ತಮ್ಮ ಸಂಘಗಳನ್ನು ನೋಂದಣಿ ಮಾಡಿಸಿಕೊಳ್ಳಬೇಕು. ಎರಡು ಮೂರು ವರ್ಷಗಳ ತಮ್ಮ ಕಾರ್ಯಕ್ರಮಗಳ ದಾಖಲೆಗಳನ್ನು ಸರ್ಕಾರಕ್ಕೆ ಸಲ್ಲಿಸಿದರೆ ಅನುದಾನ ಪಡೆಯಲು ಅನುಕೂಲವಾಗುತ್ತದೆ ಎಂದರು. </p>.<p>ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಡಿ.ಎಂ.ಹಾಲಾರಾಧ್ಯ, ತಾಲ್ಲೂಕಿನ ಕಲಾವಿದರಿಗೆ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು. </p>.<p>ಸುರಹೊನ್ನೆ ವಿರೂಪಾಕ್ಷಚಾರ್ ಅವರನ್ನು ಪ್ರಭಾರವಾಗಿ ತಾಲ್ಲೂಕು ಸಂಚಾಲಕರನ್ನಾಗಿ ನೇಮಿಸಲಾಯಿತು. </p>.<p>ನಿಕಟಪೂರ್ವ ಅಧ್ಯಕ್ಷ ಗಡೆಕಟ್ಟೆರ ನಿಜಲಿಂಗಪ್ಪ, ಕೋಶಾಧ್ಯಕ್ಷ ಎಂ.ಎಸ್.ಜಗದೀಶ, ಕಲಾವಿದ ಸಿ.ಕೆ.ಬೋಜರಾಜ, ಆರುಂಡಿ ಮಂಜಪ್ಪ, ರೇವಣಸಿದ್ದಪ್ಪ, ಸಿದ್ದಪ್ಪ, ವೀಣಾ ಆಚಾರ್ ಮಾತನಾಡಿದರು. </p>.<p>ಕಲಾವಿದರಾದ ಹನುಮಂತಾಚಾರ್, ಮಾರ್ತಾಂಡಪ್ಪ, ನಿರ್ಥಡಿ ಬಸವರಾಜಪ್ಪ, ನಿವೃತ್ತ ಅಧಿಕಾರಿ ಜಯಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>