ಹರಿಹರದ ಪ್ರಶಾಂತ್ ನಗರದ ಬಳಿ 50 ಎಕರೆ 23 ಗುಂಟೆ ಜಮೀನಿನಲ್ಲಿ ಮನೆ ಹಾಗೂ ನಿವೇಶನಗಳನ್ನು ಅಭಿವೃದ್ಧಿಪಡಿಸುತ್ತಿದ್ದು, ಆ್ಯಕ್ಸಿಸ್ ಬ್ಯಾಂಕ್ನ ದಾವಣಗೆರೆ ಶಾಖೆಯಲ್ಲೇ ಅರ್ಜಿಗಳನ್ನು ಪಡೆಯುವಂತೆ ಕರ್ನಾಟಕ ಗೃಹ ಮಂಡಳಿಯಿಂದ ಪತ್ರಿಕೆಗಳಲ್ಲಿ ಜಾಹೀರಾತು ನೀಡಲಾಗಿತ್ತು. ಇದನ್ನು ನೋಡಿದ ಹರಿಹರ ತಾಲ್ಲೂಕಿನ ಆಕಾಂಕ್ಷಿಗಳು ಬೆಳಿಗ್ಗೆಯೇ ದಾವಣಗೆರೆಯ ಬ್ಯಾಂಕ್ ಶಾಖೆಯಲ್ಲಿ ಕಾದು ಕುಳಿತಿದ್ದರು.