‘ಜೆಡಿಎಸ್ ಹಾಗೂ ಬಿಜೆಪಿ ನಡುವೆ ಒಳಒಪ್ಪಂದ ಆಗಿದೆ’ ಎಂದು ಸಿದ್ದರಾಮಯ್ಯ ಆರೋಪಿಸಿದರು. ಈ ಚುನಾವಣೆಯಲ್ಲಿ ದೇವೇಗೌಡರು, ಕುಮಾರಸ್ವಾಮಿ ಅವರು ಬಿಜೆಪಿ ವಿರುದ್ಧ ತುಟಿ ಬಿಚ್ಚುತ್ತಿಲ್ಲ. ಅತ್ತ ಅಮಿತ್ ಶಾ, ನರೇಂದ್ರ ಮೋದಿ ಜೆಡಿಎಸ್ ವಿರುದ್ಧ ಮಾತನಾಡುತ್ತಿಲ್ಲ. ಆದರೆ, ಎರಡೂ ಪಕ್ಷದವರು ನನ್ನನ್ನು ಗುರಿಯಾಗಿಸಿಕೊಂಡು ಸಲ್ಲದ ಆರೋಪ ಮಾಡುತ್ತಿದ್ದಾರೆ. ಇದರಿಂದ ಎರಡೂ ಪಕ್ಷಗಳ ನಡುವೆ ಆಗಿರುವ ಒಳಒಪ್ಪಂದ ತಿಳಿಯುತ್ತದೆ ಎಂದರು.