‘ಸದಾಶಿವ ಆಯೋಗದ ವರದಿಯನ್ನು ಜಾರಿಗೆ ತಂದರೆ ಒಳಮೀಸಲಾತಿಯ ಪ್ರಮಾಣ ಕಡಿಮೆಯಾಗುತ್ತದೆ. ಈ ವರದಿ ಅವೈಜ್ಞಾನಿಕವಾಗಿದ್ದು, ಸಮಾಜದವರಿಗೆ ಅನ್ಯಾಯವಾಗುತ್ತದೆ. ಹೀಗಾಗಿ ಈ ವರದಿ ಜಾರಿಯಾಗಬಾರದು. ನಮ್ಮಲ್ಲಿ ಕೆಲವರು ವಲಸೆ ಹೋಗಿದ್ದು, ಅವರ ಸ್ಥಿತಿಗತಿಗಳನ್ನು ಅಧ್ಯಯನ ಮಾಡಿ, ಅವರ ಸಾಮಾಜಿಕ, ಶೈಕ್ಷಣಿಕ ಸ್ಥಿತಿಗಳನ್ನು ಅರ್ಥ ಮಾಡಿಕೊಂಡು, ಸರ್ಕಾರ ನ್ಯಾಯಸಮ್ಮತವಾಗಿ ನಡೆದುಕೊಳ್ಳಬೇಕು’ ಎಂದು ಒತ್ತಾಯಿಸಿದರು.