<p><strong>ದಾವಣಗೆರೆ:</strong> ಇಂದಿನ ಆಧುನಿಕ ಜಗತ್ತಿನಲ್ಲಿ ಶಿವಯೋಗ ರೋಗ ನಿವಾರಕವಾಗಿ ಕೆಲಸ ಮಾಡುತ್ತದೆ ಎಂದು ಚಿತ್ರದುರ್ಗ ಮುರುಘಾಮಠದ ಶಿವಮೂರ್ತಿ ಮುರುಘಾ ಶರಣರು ಅಭಿಪ್ರಾಯಪಟ್ಟರು.</p>.<p>ಜಯದೇವ ಮುರುಘರಾಜೇಂದ್ರ ಸ್ವಾಮೀಜಿಗಳ 63ನೇ ಸ್ಮರಣೋತ್ಸವದ ಪ್ರಯುಕ್ತ ಶರಣ ಶಿವಯೋಗ ಮತ್ತು ಶರಣ ಸಂಸ್ಕೃತಿ ಉತ್ಸವದಲ್ಲಿ ಅವರು ಮಾತನಾಡಿದರು.<br /><br />ಆಧುನಿಕ ಜಗತ್ತಿನಲ್ಲಿ ಹಲವು ಅಪಾಯಕಾರಿ ರೋಗಗಳು ನಮ್ಮನ್ನು ಕಾಡುತ್ತಿವೆ. ಅವುಗಳಲ್ಲಿ ಅಧಿಕ ರಕ್ತದೊತ್ತಡ ಮಹಾಮಾರಿಯಾಗಿದೆ. ಭಾರತೀಯರು ಯಾಂತ್ರಿಕ, ಕೃತಕ ಹಾಗೂ ನಾಟಕೀಯ ಜೀವನ ನಡೆಸುತ್ತಿದ್ದಾರೆ. ಇಂತಹ ಸಿನಿಕತನ ಜೀವನವನ್ನು ಸಹಜ ಶಿವಯೋಗ ತೊಲಗಿಸುತ್ತದೆ ಎಂದರು.</p>.<p>ಅಧಿಕ ರಕ್ತದೊತ್ತಡದಿಂದ ಹೃದಯಾಘಾತ, ಕಿಡ್ನಿ, ಮೂತ್ರಕೋಶ ಹಾಗೂ ಮಿದುಳಿಗೆ ಸಂಬಂಧಿಸಿದ ರೋಗಗಳು ಬರುತ್ತವೆ. ಸಿಹಿ, ಉಪ್ಪು ಹಾಗೂ ಆಲ್ಕೊಹಾಲ್, ತಂಬಾಕುಗಳ ಅತಿಯಾದ ಸೇವನೆಯಿಂದ ಅಧಿಕ ರಕ್ತದೊತ್ತಡ ಹೆಚ್ಚುತ್ತಾ ಹೋಗುತ್ತಾ ಹೋಗುತ್ತದೆ. ಜೀವನಶೈಲಿ ಬದಲಾವಣೆ ಮಾಡಿಕೊಳ್ಳುವುದರಿಂದ ರೋಗಗಳನ್ನು ದೂರವಿಡಬಹುದು ಎಂದು ಸಲಹೆ ನೀಡಿದರು.</p>.<p>ಇಂದು ಹೆಚ್ಚಿನ ಜನರು ಅತಿಯಾಗಿ ತಿಂದು ಟಿವಿಯ ಮುಂದೆ ಕುಳಿತುಕೊಳ್ಳುತ್ತಾರೆ. ತಿಂದಿದ್ದನ್ನು ಜೀರ್ಣಿಸಿಕೊಳ್ಳುವ ಆಲೋಚನೆ ಮಾಡುತ್ತಿಲ್ಲ. ಆದ್ದರಿಂದ ಶರೀರಕ್ಕೆ ಕೆಲಸ ಕೊಡಬೇಕು ಎಂದು ಕಿವಿಮಾತು ಹೇಳಿದರು.<br />ವಿರಕ್ತಮಠದ ಬಸವಪ್ರಭು ಸ್ವಾಮೀಜಿ, ಹೆಬ್ಬಾಳು ಮಹಾಂತ ರುದ್ರೇಶ್ವರ ಸ್ವಾಮೀಜಿ, ಖಜೂರಿ ಕೋರಣ್ಯೇಶ್ವರಮಠದ ಮುರುಘೇಂದ್ರ ಕೋರಣ್ಯೇಶ್ವರ ಸ್ವಾಮೀಜಿ, ಕಾಂಗ್ರಸ್ ಮುಖಂಡ ಡಿ.ಬಸವರಾಜ್, ಸೋಮೇಶ್ವರ ವಿದ್ಯಾಲಯದ ಕಾರ್ಯದರ್ಶಿ ಸುರೇಶ್ ವೇದಿಕೆಯಲ್ಲಿದ್ದರು. ಪರಿಸರವಾದಿ ವೀರಾಚಾರಿ ಬಸವತತ್ವ ಧ್ವಜಾರೋಹಣ ನೆರವೇರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಇಂದಿನ ಆಧುನಿಕ ಜಗತ್ತಿನಲ್ಲಿ ಶಿವಯೋಗ ರೋಗ ನಿವಾರಕವಾಗಿ ಕೆಲಸ ಮಾಡುತ್ತದೆ ಎಂದು ಚಿತ್ರದುರ್ಗ ಮುರುಘಾಮಠದ ಶಿವಮೂರ್ತಿ ಮುರುಘಾ ಶರಣರು ಅಭಿಪ್ರಾಯಪಟ್ಟರು.</p>.<p>ಜಯದೇವ ಮುರುಘರಾಜೇಂದ್ರ ಸ್ವಾಮೀಜಿಗಳ 63ನೇ ಸ್ಮರಣೋತ್ಸವದ ಪ್ರಯುಕ್ತ ಶರಣ ಶಿವಯೋಗ ಮತ್ತು ಶರಣ ಸಂಸ್ಕೃತಿ ಉತ್ಸವದಲ್ಲಿ ಅವರು ಮಾತನಾಡಿದರು.<br /><br />ಆಧುನಿಕ ಜಗತ್ತಿನಲ್ಲಿ ಹಲವು ಅಪಾಯಕಾರಿ ರೋಗಗಳು ನಮ್ಮನ್ನು ಕಾಡುತ್ತಿವೆ. ಅವುಗಳಲ್ಲಿ ಅಧಿಕ ರಕ್ತದೊತ್ತಡ ಮಹಾಮಾರಿಯಾಗಿದೆ. ಭಾರತೀಯರು ಯಾಂತ್ರಿಕ, ಕೃತಕ ಹಾಗೂ ನಾಟಕೀಯ ಜೀವನ ನಡೆಸುತ್ತಿದ್ದಾರೆ. ಇಂತಹ ಸಿನಿಕತನ ಜೀವನವನ್ನು ಸಹಜ ಶಿವಯೋಗ ತೊಲಗಿಸುತ್ತದೆ ಎಂದರು.</p>.<p>ಅಧಿಕ ರಕ್ತದೊತ್ತಡದಿಂದ ಹೃದಯಾಘಾತ, ಕಿಡ್ನಿ, ಮೂತ್ರಕೋಶ ಹಾಗೂ ಮಿದುಳಿಗೆ ಸಂಬಂಧಿಸಿದ ರೋಗಗಳು ಬರುತ್ತವೆ. ಸಿಹಿ, ಉಪ್ಪು ಹಾಗೂ ಆಲ್ಕೊಹಾಲ್, ತಂಬಾಕುಗಳ ಅತಿಯಾದ ಸೇವನೆಯಿಂದ ಅಧಿಕ ರಕ್ತದೊತ್ತಡ ಹೆಚ್ಚುತ್ತಾ ಹೋಗುತ್ತಾ ಹೋಗುತ್ತದೆ. ಜೀವನಶೈಲಿ ಬದಲಾವಣೆ ಮಾಡಿಕೊಳ್ಳುವುದರಿಂದ ರೋಗಗಳನ್ನು ದೂರವಿಡಬಹುದು ಎಂದು ಸಲಹೆ ನೀಡಿದರು.</p>.<p>ಇಂದು ಹೆಚ್ಚಿನ ಜನರು ಅತಿಯಾಗಿ ತಿಂದು ಟಿವಿಯ ಮುಂದೆ ಕುಳಿತುಕೊಳ್ಳುತ್ತಾರೆ. ತಿಂದಿದ್ದನ್ನು ಜೀರ್ಣಿಸಿಕೊಳ್ಳುವ ಆಲೋಚನೆ ಮಾಡುತ್ತಿಲ್ಲ. ಆದ್ದರಿಂದ ಶರೀರಕ್ಕೆ ಕೆಲಸ ಕೊಡಬೇಕು ಎಂದು ಕಿವಿಮಾತು ಹೇಳಿದರು.<br />ವಿರಕ್ತಮಠದ ಬಸವಪ್ರಭು ಸ್ವಾಮೀಜಿ, ಹೆಬ್ಬಾಳು ಮಹಾಂತ ರುದ್ರೇಶ್ವರ ಸ್ವಾಮೀಜಿ, ಖಜೂರಿ ಕೋರಣ್ಯೇಶ್ವರಮಠದ ಮುರುಘೇಂದ್ರ ಕೋರಣ್ಯೇಶ್ವರ ಸ್ವಾಮೀಜಿ, ಕಾಂಗ್ರಸ್ ಮುಖಂಡ ಡಿ.ಬಸವರಾಜ್, ಸೋಮೇಶ್ವರ ವಿದ್ಯಾಲಯದ ಕಾರ್ಯದರ್ಶಿ ಸುರೇಶ್ ವೇದಿಕೆಯಲ್ಲಿದ್ದರು. ಪರಿಸರವಾದಿ ವೀರಾಚಾರಿ ಬಸವತತ್ವ ಧ್ವಜಾರೋಹಣ ನೆರವೇರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>