ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ಸಯದರ ಕಲ್ಲಳ್ಳಿ ಗ್ರಾಮದ ರಾಜಪ್ಪ ಆರೋಪಿ. 2015ರ ಡಿಸೆಂಬರ್ನಲ್ಲಿ ಹೊನ್ನಾಳಿ ತಾಲ್ಲೂಕು ಸಾಸ್ವೆಹಳ್ಳಿ ಗ್ರಾಮದ ಇಂಡಿಯನ್ ಪೆಟ್ರೋಲ್ ಬಂಕ್ ಬಳಿಕ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದ. ಆವಾಗ 800 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿತ್ತು. ಬಳಿಕ ವಿಚಾರಣೆ ನಡೆಸಿದಾಗ ಆರೋಪಿ ತನ್ನ ಅಡಿಕೆ ತೋಟದಲ್ಲಿಯೇ ಗಾಂಜಾ ಬೆಳೆದಿರುವ ಬಗ್ಗೆ ಬಾಯಿ ಬಿಟ್ಟಿದ್ದ. ಆತನ ತೋಟದ ಮನೆಯಲ್ಲಿ 51 ಕೆ.ಜಿ. ಗಾಂಜಾ ಪತ್ತೆಯಾಗಿತ್ತು. ಆಗಿನ ಎಸ್ಐ ಅಶ್ವಿನ್ ಕುಮಾರ್ ವಶಪಡಿಸಿಕೊಂಡಿದ್ದರು. ಆಗಿನ್ ಸರ್ಕಲ್ ಇನ್ಸ್ಪೆಕ್ಟರ್ ಜೆ.ರಮೇಶ್ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.