<p><strong>ಹರಿಹರ:</strong> ಜಿಂದಾಲ್ ಉಕ್ಕು ಕಂಪೆನಿಗೆ ಕಡಿಮೆ ದರದಲ್ಲಿ 3,677 ಎಕರೆ ಜಮೀನು ಮಾರಿರುವ ಪ್ರಕರಣದಲ್ಲಿ ಅಧಿಕಾರಿಗಳ ಜತೆಗೆ ರಾಜ್ಯ ಸಚಿವ ಸಂಪುಟವೇ ಶಾಮೀಲಾಗಿದೆ ಎಂದು ಹಾವೇರಿ– ಗದಗ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.</p>.<p>ಶುಕ್ರವಾರ ತುಂಗಭದ್ರಾ ನದಿಗೆ ಬಾಗಿನ ಅರ್ಪಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ಎಸ್.ಯಡಿಯೂರಪ್ಪ ನೇತೃತ್ವದ ಆಡಳಿತದ ಅವಧಿಯಲ್ಲಿ ಈ ಪ್ರಸ್ತಾವನೆಗೆ ತಡೆ ನೀಡಲಾಗಿತ್ತು. ಕಾಂಗ್ರೆಸ್ ನೇತೃತ್ವದ ಸರ್ಕಾರ ತರಾತುರಿಯಲ್ಲಿ ಹಸಿರು ನಿಶಾನೆ ತೋರಿದೆ ಎಂದು ದೂರಿದರು.</p>.<p>‘ಅದಿರಿನ ನಿಕ್ಷೇಪ ಇರುವ ಬೆಲೆಬಾಳುವ ಜಮೀನನ್ನು ಅತ್ಯಂತ ಕಡಿಮೆ ದರದಲ್ಲಿ ‘ಲೀಸ್ ಕಂ ಸೇಲ್’ ಆಧಾರದಲ್ಲಿ ನೀಡುವಲ್ಲಿ ಷಡ್ಯಂತ್ರ ನಡೆದಿದೆ. ಅಧಿಕಾರಕ್ಕೆ ಬಂದ ಬಳಿಕ ಪ್ರಸ್ತಾವನೆಗೆ ಕಾಂಗ್ರೆಸ್ ಸುಲಭವಾಗಿ ಅನುಮೋದನೆ ನೀಡಿದ್ದು ಹೇಗೆ?’ ಎಂದು ಪ್ರಶ್ನಿಸಿದರು.</p>.<p>ಸರ್ಕಾರಕ್ಕೆ ಆಗುತ್ತಿರುವ ದೊಡ್ಡ ನಷ್ಟವನ್ನು ತಡೆಯಲು ಈಗಿನ ಮಾರುಕಟ್ಟೆ ದರಕ್ಕೆ ಜಮೀನು ಮಾರಾಟ ಆಗಬೇಕು. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಅದಾನಿ, ಅಂಬಾನಿ ಹೆಸರು ಹೇಳಿ ಟೀಕಿಸುವ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಏನು ಮಾಡುತ್ತಿದೆ? ಎಂದು ಅವರು ಪ್ರಶ್ನಿಸಿದರು.</p>.<p>ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಆರೋಪಿತ ರಾಜಕಾರಣಿಗಳನ್ನು ಕೈಬಿಡುವ ಉದ್ದೇಶದಿಂದ ಎಸ್ಐಟಿಯಿಂದ ತರಾತುರಿಯಲ್ಲಿ ರಾಜ್ಯ ಸರ್ಕಾರ ವಿಚಾರಣೆ ಆರಂಭಿಸಿತ್ತು. ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿಯ ಮರಣಪತ್ರ ಆಧರಿಸಿ ಕೇಂದ್ರ ಸರ್ಕಾರ ತನಿಖೆಗೆ ಮುಂದಾಗಲಿದೆ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಿಹರ:</strong> ಜಿಂದಾಲ್ ಉಕ್ಕು ಕಂಪೆನಿಗೆ ಕಡಿಮೆ ದರದಲ್ಲಿ 3,677 ಎಕರೆ ಜಮೀನು ಮಾರಿರುವ ಪ್ರಕರಣದಲ್ಲಿ ಅಧಿಕಾರಿಗಳ ಜತೆಗೆ ರಾಜ್ಯ ಸಚಿವ ಸಂಪುಟವೇ ಶಾಮೀಲಾಗಿದೆ ಎಂದು ಹಾವೇರಿ– ಗದಗ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.</p>.<p>ಶುಕ್ರವಾರ ತುಂಗಭದ್ರಾ ನದಿಗೆ ಬಾಗಿನ ಅರ್ಪಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ಎಸ್.ಯಡಿಯೂರಪ್ಪ ನೇತೃತ್ವದ ಆಡಳಿತದ ಅವಧಿಯಲ್ಲಿ ಈ ಪ್ರಸ್ತಾವನೆಗೆ ತಡೆ ನೀಡಲಾಗಿತ್ತು. ಕಾಂಗ್ರೆಸ್ ನೇತೃತ್ವದ ಸರ್ಕಾರ ತರಾತುರಿಯಲ್ಲಿ ಹಸಿರು ನಿಶಾನೆ ತೋರಿದೆ ಎಂದು ದೂರಿದರು.</p>.<p>‘ಅದಿರಿನ ನಿಕ್ಷೇಪ ಇರುವ ಬೆಲೆಬಾಳುವ ಜಮೀನನ್ನು ಅತ್ಯಂತ ಕಡಿಮೆ ದರದಲ್ಲಿ ‘ಲೀಸ್ ಕಂ ಸೇಲ್’ ಆಧಾರದಲ್ಲಿ ನೀಡುವಲ್ಲಿ ಷಡ್ಯಂತ್ರ ನಡೆದಿದೆ. ಅಧಿಕಾರಕ್ಕೆ ಬಂದ ಬಳಿಕ ಪ್ರಸ್ತಾವನೆಗೆ ಕಾಂಗ್ರೆಸ್ ಸುಲಭವಾಗಿ ಅನುಮೋದನೆ ನೀಡಿದ್ದು ಹೇಗೆ?’ ಎಂದು ಪ್ರಶ್ನಿಸಿದರು.</p>.<p>ಸರ್ಕಾರಕ್ಕೆ ಆಗುತ್ತಿರುವ ದೊಡ್ಡ ನಷ್ಟವನ್ನು ತಡೆಯಲು ಈಗಿನ ಮಾರುಕಟ್ಟೆ ದರಕ್ಕೆ ಜಮೀನು ಮಾರಾಟ ಆಗಬೇಕು. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಅದಾನಿ, ಅಂಬಾನಿ ಹೆಸರು ಹೇಳಿ ಟೀಕಿಸುವ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಏನು ಮಾಡುತ್ತಿದೆ? ಎಂದು ಅವರು ಪ್ರಶ್ನಿಸಿದರು.</p>.<p>ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಆರೋಪಿತ ರಾಜಕಾರಣಿಗಳನ್ನು ಕೈಬಿಡುವ ಉದ್ದೇಶದಿಂದ ಎಸ್ಐಟಿಯಿಂದ ತರಾತುರಿಯಲ್ಲಿ ರಾಜ್ಯ ಸರ್ಕಾರ ವಿಚಾರಣೆ ಆರಂಭಿಸಿತ್ತು. ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿಯ ಮರಣಪತ್ರ ಆಧರಿಸಿ ಕೇಂದ್ರ ಸರ್ಕಾರ ತನಿಖೆಗೆ ಮುಂದಾಗಲಿದೆ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>