<p><strong>ದಾವಣಗೆರೆ</strong>: ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಶ್ರೀಗಂಧದ ಮರ ಕಡಿಯುತ್ತಿದ್ದ ಆರೋಪಿಯನ್ನು ಉಪ ಅರಣ್ಯ ಸಂರಕ್ಷಣಾಧಿಕಾರಿ ಎನ್.ಎಚ್ ಜಗನ್ನಾಥ ಹಾಗೂ ತಂಡದವರು ಬಂಧಿಸಿದ್ದಾರೆ.</p><p>ಪ್ರಾದೇಶಿಕ ಅರಣ್ಯ ವ್ಯಾಪ್ತಿಯ ದಾವಣಗೆರೆ ವಲಯದ ಹೆಬ್ಬಾಳು ಶಾಖೆಯ ಆನಗೋಡು ಗಸ್ತಿನಲ್ಲಿ ಜೂನ್ 26 ರಂದು ಹೆಬ್ಬಾಳು ಶಾಖೆಯ ಸಿಬ್ಬಂದಿಯು ರಾತ್ರಿ ಗಸ್ತು ತಿರುಗುತ್ತಿದ್ದಾಗ ಆರೋಪಿಯನ್ನು ಬಂಧಿಸಿದ್ದಾರೆ.</p><p>ಒಬ್ಬ ಆರೋಪಿಯನ್ನು ಬಂಧಿಸಿ ಅಂದಾಜು ₹1 ಲಕ್ಷ ಮೌಲ್ಯದ 15 ಕೆ.ಜಿ ಶ್ರೀಗಂಧವನ್ನು ಜಪ್ತಿ ಮಾಡಿ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಮತ್ತೊಬ್ಬ ಆರೋಪಿ ತಪ್ಪಿಸಿಕೊಂಡಿದ್ದು, ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ.</p><p>ನಿಮ್ಮ ಹತ್ತಿರದ ಅರಣ್ಯ ಪ್ರದೇಶಗಳ ಸುತ್ತಮುತ್ತ ವನ್ಯಜೀವಿ, ಅರಣ್ಯ ಸಂಪತ್ತಿಗೆ ಮಾರಕವಾಗುವಂತಹ ಕಾರ್ಯಚಟುವಟಿಕೆ ಕಂಡುಬಂದರೆ ಇಲಾಖೆಯ ಉಚಿತ ಸಹಾಯವಾಣಿ 1926ಗೆ ಕರೆ ಮಾಡಲು ಅರಣ್ಯ ಇಲಾಖೆ ಕೋರಿದೆ.</p>.<p><strong>ಬಸ್ ಚಾಲಕನ ಮೇಲೆ ಹಲ್ಲೆ; ದೂರು</strong></p><p><strong>ದಾವಣಗೆರೆ</strong>: ನಗರದ ಅರುಣಾ ಟಾಕೀಸ್ ಬಳಿ ಖಾಸಗಿ ಬಸ್ಗಳ ಸಿಬ್ಬಂದಿ ಹೊಡೆದಾಡಿಕೊಂಡಿದ್ದು, ಹಲ್ಲೆಗೊಳಗಾದ ಚಾಲಕರೊಬ್ಬರು ದಾವಣಗೆರೆ ಬಡಾವಣೆ ಠಾಣೆಯಲ್ಲಿ ದೂರು ನೀಡಿದ್ದಾರೆ.</p><p>ಹಲ್ಲೆಗೊಳಗಾದ ರಾಘವೇಂದ್ರ ಟ್ರಾವೆಲ್ಸ್ನ ಚಾಲಕ ನಿಂಗಪ್ಪ ಅವರು ಎಸ್ಆರ್ಇ ಬಸ್ನ ಚಾಲಕ ಹಾಗೂ ಮಾಲೀಕ ಯೂನೂಸ್, ಸಂತೋಷ ಹಾಗೂ ಇತರರ ವಿರುದ್ಧ ದೂರು ಸಲ್ಲಿಸಿದ್ದಾರೆ.</p><p>‘ಜೂನ್ 28ರಂದು ಬಸ್ನೊಳಗೆ ಬಂದು ಗಲಾಟೆ ಮಾಡಿದ್ದಕ್ಕೆ ಸಂತೋಷ್ಗೆ ಒಮ್ಮೆ ಹೊಡೆದಿದ್ದೆ, ಅದಕ್ಕೆ ಸಂತೋಷ; ಅವರ ಬಸ್ ಮಾಲೀಕ ಯೂನೂಸ್ಗೆ ಕರೆ ಮಾಡಿ 8 ಜನರನ್ನು ಕರೆಸಿ ಹಲ್ಲೆ ಮಾಡಿದ್ದಾರೆ. ಕೊಲೆ ಮಾಡುವ ಉದ್ದೇಶದಿಂದ ಚಾಕು ಇರಿಯಲು ಯತ್ನಿಸಿದ್ದಾರೆ’ ಎಂದು ದೂರಿದ್ದಾರೆ.</p><p>ದಾವಣಗೆರೆ ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><strong>ಅಕ್ರಮ ಮದ್ಯ ಮಾರಾಟ; ಬಂಧನ</strong></p><p><strong>ದಾವಣಗೆರೆ</strong>: ತಾಲ್ಲೂಕಿನ ಮಾಗನಹಳ್ಳಿ ಬಸ್ ನಿಲ್ದಾಣದ ಮುಂಭಾಗ ಪರವಾನಗಿ ಇಲ್ಲದೆ, ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಸಿಂಗ್ರಿಹಳ್ಳಿ ಗ್ರಾಮದ ಮಂಜುನಾಥ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.</p><p>ಜೂನ್ 29ರಂದು ಸಂಜೆ ಪೊಲೀಸರು ಗಸ್ತಿನಲ್ಲಿದ್ದಾಗ ಆರೋಪಿಯನ್ನು ಬಂಧಿಸಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><strong>ಜಮೀನು ವಿವಾದ; ಸಹೋದರನ ಮೇಲೆ ಹಲ್ಲೆ </strong></p><p><strong>ನ್ಯಾಮತಿ:</strong> ತಾಲ್ಲೂಕಿನ ಚಿನ್ನಿಕಟ್ಟೆ ಗ್ರಾಮದ ಸಹೋದರರು ಜಮೀನು ವಿಚಾರದಲ್ಲಿ ಪರಸ್ಪರ ಹಲ್ಲೆ ಮಾಡಿಕೊಂಡಿರುವ ಘಟನೆ ಗುರುವಾರ ನಡೆದಿದೆ.</p><p>ಗ್ರಾಮದ ತೀರ್ಥಲಿಂಗಪ್ಪ ಎಂಬುವರು ಈ ಬಗ್ಗೆ ನ್ಯಾಮತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.</p><p>‘ನಮ್ಮ ತಂದೆ ಸ್ವಯಾರ್ಜಿತ ಆಸ್ತಿಯನ್ನು ನನ್ನ ಪತ್ನಿ ಮತ್ತು ಮಗನಿಗೆ ವಿಲ್ ಮಾಡಿದ್ದು, ಆ ಪ್ರಕಾರ ನಾವು ಜಮೀನು ಉಳುಮೆ ಮಾಡುತ್ತಿರುವ ವೇಳೆ, ನನ್ನ ತಮ್ಮ ಮಲ್ಲಿಕಾರ್ಜುನ ಅವರ ಮಗ ಹೇಮರಾಜ ಅವರು ತಕಾರಾರು ಮಾಡಿ ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾರೆ’ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಶ್ರೀಗಂಧದ ಮರ ಕಡಿಯುತ್ತಿದ್ದ ಆರೋಪಿಯನ್ನು ಉಪ ಅರಣ್ಯ ಸಂರಕ್ಷಣಾಧಿಕಾರಿ ಎನ್.ಎಚ್ ಜಗನ್ನಾಥ ಹಾಗೂ ತಂಡದವರು ಬಂಧಿಸಿದ್ದಾರೆ.</p><p>ಪ್ರಾದೇಶಿಕ ಅರಣ್ಯ ವ್ಯಾಪ್ತಿಯ ದಾವಣಗೆರೆ ವಲಯದ ಹೆಬ್ಬಾಳು ಶಾಖೆಯ ಆನಗೋಡು ಗಸ್ತಿನಲ್ಲಿ ಜೂನ್ 26 ರಂದು ಹೆಬ್ಬಾಳು ಶಾಖೆಯ ಸಿಬ್ಬಂದಿಯು ರಾತ್ರಿ ಗಸ್ತು ತಿರುಗುತ್ತಿದ್ದಾಗ ಆರೋಪಿಯನ್ನು ಬಂಧಿಸಿದ್ದಾರೆ.</p><p>ಒಬ್ಬ ಆರೋಪಿಯನ್ನು ಬಂಧಿಸಿ ಅಂದಾಜು ₹1 ಲಕ್ಷ ಮೌಲ್ಯದ 15 ಕೆ.ಜಿ ಶ್ರೀಗಂಧವನ್ನು ಜಪ್ತಿ ಮಾಡಿ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಮತ್ತೊಬ್ಬ ಆರೋಪಿ ತಪ್ಪಿಸಿಕೊಂಡಿದ್ದು, ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ.</p><p>ನಿಮ್ಮ ಹತ್ತಿರದ ಅರಣ್ಯ ಪ್ರದೇಶಗಳ ಸುತ್ತಮುತ್ತ ವನ್ಯಜೀವಿ, ಅರಣ್ಯ ಸಂಪತ್ತಿಗೆ ಮಾರಕವಾಗುವಂತಹ ಕಾರ್ಯಚಟುವಟಿಕೆ ಕಂಡುಬಂದರೆ ಇಲಾಖೆಯ ಉಚಿತ ಸಹಾಯವಾಣಿ 1926ಗೆ ಕರೆ ಮಾಡಲು ಅರಣ್ಯ ಇಲಾಖೆ ಕೋರಿದೆ.</p>.<p><strong>ಬಸ್ ಚಾಲಕನ ಮೇಲೆ ಹಲ್ಲೆ; ದೂರು</strong></p><p><strong>ದಾವಣಗೆರೆ</strong>: ನಗರದ ಅರುಣಾ ಟಾಕೀಸ್ ಬಳಿ ಖಾಸಗಿ ಬಸ್ಗಳ ಸಿಬ್ಬಂದಿ ಹೊಡೆದಾಡಿಕೊಂಡಿದ್ದು, ಹಲ್ಲೆಗೊಳಗಾದ ಚಾಲಕರೊಬ್ಬರು ದಾವಣಗೆರೆ ಬಡಾವಣೆ ಠಾಣೆಯಲ್ಲಿ ದೂರು ನೀಡಿದ್ದಾರೆ.</p><p>ಹಲ್ಲೆಗೊಳಗಾದ ರಾಘವೇಂದ್ರ ಟ್ರಾವೆಲ್ಸ್ನ ಚಾಲಕ ನಿಂಗಪ್ಪ ಅವರು ಎಸ್ಆರ್ಇ ಬಸ್ನ ಚಾಲಕ ಹಾಗೂ ಮಾಲೀಕ ಯೂನೂಸ್, ಸಂತೋಷ ಹಾಗೂ ಇತರರ ವಿರುದ್ಧ ದೂರು ಸಲ್ಲಿಸಿದ್ದಾರೆ.</p><p>‘ಜೂನ್ 28ರಂದು ಬಸ್ನೊಳಗೆ ಬಂದು ಗಲಾಟೆ ಮಾಡಿದ್ದಕ್ಕೆ ಸಂತೋಷ್ಗೆ ಒಮ್ಮೆ ಹೊಡೆದಿದ್ದೆ, ಅದಕ್ಕೆ ಸಂತೋಷ; ಅವರ ಬಸ್ ಮಾಲೀಕ ಯೂನೂಸ್ಗೆ ಕರೆ ಮಾಡಿ 8 ಜನರನ್ನು ಕರೆಸಿ ಹಲ್ಲೆ ಮಾಡಿದ್ದಾರೆ. ಕೊಲೆ ಮಾಡುವ ಉದ್ದೇಶದಿಂದ ಚಾಕು ಇರಿಯಲು ಯತ್ನಿಸಿದ್ದಾರೆ’ ಎಂದು ದೂರಿದ್ದಾರೆ.</p><p>ದಾವಣಗೆರೆ ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><strong>ಅಕ್ರಮ ಮದ್ಯ ಮಾರಾಟ; ಬಂಧನ</strong></p><p><strong>ದಾವಣಗೆರೆ</strong>: ತಾಲ್ಲೂಕಿನ ಮಾಗನಹಳ್ಳಿ ಬಸ್ ನಿಲ್ದಾಣದ ಮುಂಭಾಗ ಪರವಾನಗಿ ಇಲ್ಲದೆ, ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಸಿಂಗ್ರಿಹಳ್ಳಿ ಗ್ರಾಮದ ಮಂಜುನಾಥ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.</p><p>ಜೂನ್ 29ರಂದು ಸಂಜೆ ಪೊಲೀಸರು ಗಸ್ತಿನಲ್ಲಿದ್ದಾಗ ಆರೋಪಿಯನ್ನು ಬಂಧಿಸಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><strong>ಜಮೀನು ವಿವಾದ; ಸಹೋದರನ ಮೇಲೆ ಹಲ್ಲೆ </strong></p><p><strong>ನ್ಯಾಮತಿ:</strong> ತಾಲ್ಲೂಕಿನ ಚಿನ್ನಿಕಟ್ಟೆ ಗ್ರಾಮದ ಸಹೋದರರು ಜಮೀನು ವಿಚಾರದಲ್ಲಿ ಪರಸ್ಪರ ಹಲ್ಲೆ ಮಾಡಿಕೊಂಡಿರುವ ಘಟನೆ ಗುರುವಾರ ನಡೆದಿದೆ.</p><p>ಗ್ರಾಮದ ತೀರ್ಥಲಿಂಗಪ್ಪ ಎಂಬುವರು ಈ ಬಗ್ಗೆ ನ್ಯಾಮತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.</p><p>‘ನಮ್ಮ ತಂದೆ ಸ್ವಯಾರ್ಜಿತ ಆಸ್ತಿಯನ್ನು ನನ್ನ ಪತ್ನಿ ಮತ್ತು ಮಗನಿಗೆ ವಿಲ್ ಮಾಡಿದ್ದು, ಆ ಪ್ರಕಾರ ನಾವು ಜಮೀನು ಉಳುಮೆ ಮಾಡುತ್ತಿರುವ ವೇಳೆ, ನನ್ನ ತಮ್ಮ ಮಲ್ಲಿಕಾರ್ಜುನ ಅವರ ಮಗ ಹೇಮರಾಜ ಅವರು ತಕಾರಾರು ಮಾಡಿ ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾರೆ’ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>