<p><strong>ದಾವಣಗೆರೆ:</strong> ಅಂಗಳದಲ್ಲಿ ರಾಶಿ ಹಾಕಿದ್ದ ರಾಗಿ, ಭತ್ತ ಪೂಜೆಗೆ ಸಿದ್ಧವಾಗಿದ್ದವು. ಸೀರೆ, ಪಂಚೆಯುಟ್ಟು ಗ್ರಾಮೀಣ ಸೊಗಡಿನಲ್ಲಿ ಕಂಗೊಳಿಸುತ್ತಿದ್ದ ವಿದ್ಯಾರ್ಥಿಗಳು ಭತ್ತ ಕುಟ್ಟುತ್ತಿದ್ದರು. ರಾಗಿ ಬೀಸಿ ಮುದ್ದೆಗೆ ಹಿಟ್ಟು ಸಿದ್ಧಪಡಿಸುವಲ್ಲಿ ತಲ್ಲೀನರಾಗಿದ್ದರು. ಮೊಸರು ಕಡೆದು ಬೆಣ್ಣೆ ತೆಗೆಯುತ್ತಿದ್ದರು..</p>.<p>ಇಂತಹದೊಂದು ಅಪರೂಪದ ದೃಶ್ಯ ನಗರದ ಬನಶಂಕರಿ ಶಾಮನೂರು ಬಡಾವಣೆಯ ಮಯೂರ್ ಗ್ಲೋಬಲ್ ಶಾಲೆಯಲ್ಲಿ ಮಂಗಳವಾರ ಕಂಡುಬಂದಿತು. ಅಪ್ಪಟ ಹಳ್ಳಿ ಪರಿಸರದಲ್ಲಿ ಸಂಕ್ರಾಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ಗೋ ಪೂಜೆಗೆ ಮಲೆನಾಡು ಗಿಡ್ಡ ತಳಿಯ ಹಸುಗಳು ಸಾಕ್ಷಿಯಾದವು.</p>.<p>ಸಂಕ್ರಾಂತಿಯ ಅಂಗವಾಗಿ ಶಾಲೆಯನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ರಂಗೋಲಿ ಬಿಡಿಸಿ ಚಿತ್ತಾರ ಮೂಡಿಸಲಾಗಿತ್ತು. ಬಾಳೆಕಂದು, ಮಾವಿನ ತೋರಣ, ಕಬ್ಬಿನ ಜಲ್ಲೆ, ತೆಂಗಿನ ಗರಿಗಳು ಹಬ್ಬವನ್ನು ಕಳೆಗಟ್ಟುವಂತೆ ಮಾಡಿದ್ದವು. ಗೋ ಪೂಜೆ, ಆಹಾರ ತಯಾರಿಕೆ, ರಾಶಿ ಪೂಜೆಯಂತಹ ಸುಗ್ಗಿ ಹಬ್ಬಗಳು ಸಡಗರವನ್ನು ಹೆಚ್ಚಿಸಿದವು.</p>.<p>ಸಾಂಪ್ರದಾಯಿಕ ಉಡುಪು ತೊಟ್ಟು ಬಂದಿದ್ದ ವಿದ್ಯಾರ್ಥಿಗಳು ಲಗುಬಗೆಯಿಂದ ಓಡಾಡುತ್ತಿದ್ದರು. ಬಳಿ ಪಂಚೆ, ಬಿಳಿ ಜುಬ್ಬಾ ಧರಿಸಿ ಪರಂಪರೆಯ ಹಿರಿಮೆಯನ್ನು ಸಾರಿದರು. ನೇಗಿಲ ನೊಗಕ್ಕೆ ಎತ್ತುಗಳು ಹೂಡಿ ಉಳಿಮೆ ಮಾಡಿದ ಪರಿ ಮೆಚ್ಚುವಂತಿತ್ತು. ಗುಡಿಸಲು, ಎತ್ತಿನ ಗಾಡಿ ಆಕರ್ಷಕವಾಗಿದ್ದವು.</p>.<p>ಶಾಲೆಯ ಪ್ರವೇಶ ದ್ವಾರದ ಬಳಿ ಗೋ ಪೂಜೆ ನೆರವೇರಿಸುವ ಮೂಲಕ ಸಂಕ್ರಾಂತಿಯ ಸುಗ್ಗಿ ಸಂಭ್ರಮಕ್ಕೆ ಚಾಲನೆ ನೀಡಲಾಯಿತು. ಮೆಕ್ಕೇಜೋಳ, ಭತ್ತ, ಕಡೆಲೆಕಾಳು, ಹೆಸರು ಕಾಳು, ಗೋಧಿ, ಬೆಲ್ಲ, ಅಡಿಕೆ, ಸಬ್ಬಕ್ಕಿ, ಸಿರಿಧಾನ್ಯ, ಕೆಂಪಕ್ಕಿ ಸೇರಿ ಹಲವು ಧಾನ್ಯಗಳ ರಾಶಿಗೆ ನಮಿಸಲಾಯಿತು.</p>.<p>ಹಸುಗಳಿಗೆ ಅಕ್ಕಿ, ಬೆಲ್ಲ ಮತ್ತು ಬಾಳೆಹಣ್ಣು ತಿನ್ನಿಸಲಾಯಿತು. ಪಂಚಾಯಿತಿ ಕಟ್ಟೆ, ನೇಗಿಲಯೋಗಿ, ಬಳೆಗಾರ ವೇಷಧಾರಿಗಳು ಕಣ್ಮನ ಸೆಳೆದರು. ಪೂಜೆಯ ನಂತರ ಎಲ್ಲರಿಗೂ ಎಳ್ಳು, ಬೆಲ್ಲ, ಕಬ್ಬು ವಿತರಿಸಿ ಶುಭಾಶಯ ವಿನಿಮಯ ಮಾಡಿಕೊಳ್ಳಲಾಯಿತು. ಮಕ್ಕಳು ಗಾಳಿಪಟ ಹಾರಿಸಿ ಸಂಭ್ರಮಿಸಿದರು.</p>.<div><blockquote>ಗ್ರಾಮೀಣ ಆಚರಣೆಗಳು ಆಧುನಿಕತೆಯ ಭರಾಟೆಯಲ್ಲಿ ಕಣ್ಮರೆಯಾಗುತ್ತಿವೆ. ಇವುಗಳನ್ನು ಮುಂದಿನ ತಲೆಮಾರಿಗೆ ದಾಟಿಸಬೇಕು. ಇದಕ್ಕೆ ಸಂಕ್ರಾಂತಿಯನ್ನು ಶಾಲಾ ಆವರಣದಲ್ಲಿ ಆಚರಿಸಲಾಗಿದೆ</blockquote><span class="attribution"> ಬಿ.ಎನ್. ಮಲ್ಲೇಶ್ ಆಡಳಿತಾಧಿಕಾರಿ ಮಯೂರ್ ಗ್ಲೋಬಲ್ ಶಾಲೆ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಅಂಗಳದಲ್ಲಿ ರಾಶಿ ಹಾಕಿದ್ದ ರಾಗಿ, ಭತ್ತ ಪೂಜೆಗೆ ಸಿದ್ಧವಾಗಿದ್ದವು. ಸೀರೆ, ಪಂಚೆಯುಟ್ಟು ಗ್ರಾಮೀಣ ಸೊಗಡಿನಲ್ಲಿ ಕಂಗೊಳಿಸುತ್ತಿದ್ದ ವಿದ್ಯಾರ್ಥಿಗಳು ಭತ್ತ ಕುಟ್ಟುತ್ತಿದ್ದರು. ರಾಗಿ ಬೀಸಿ ಮುದ್ದೆಗೆ ಹಿಟ್ಟು ಸಿದ್ಧಪಡಿಸುವಲ್ಲಿ ತಲ್ಲೀನರಾಗಿದ್ದರು. ಮೊಸರು ಕಡೆದು ಬೆಣ್ಣೆ ತೆಗೆಯುತ್ತಿದ್ದರು..</p>.<p>ಇಂತಹದೊಂದು ಅಪರೂಪದ ದೃಶ್ಯ ನಗರದ ಬನಶಂಕರಿ ಶಾಮನೂರು ಬಡಾವಣೆಯ ಮಯೂರ್ ಗ್ಲೋಬಲ್ ಶಾಲೆಯಲ್ಲಿ ಮಂಗಳವಾರ ಕಂಡುಬಂದಿತು. ಅಪ್ಪಟ ಹಳ್ಳಿ ಪರಿಸರದಲ್ಲಿ ಸಂಕ್ರಾಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ಗೋ ಪೂಜೆಗೆ ಮಲೆನಾಡು ಗಿಡ್ಡ ತಳಿಯ ಹಸುಗಳು ಸಾಕ್ಷಿಯಾದವು.</p>.<p>ಸಂಕ್ರಾಂತಿಯ ಅಂಗವಾಗಿ ಶಾಲೆಯನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ರಂಗೋಲಿ ಬಿಡಿಸಿ ಚಿತ್ತಾರ ಮೂಡಿಸಲಾಗಿತ್ತು. ಬಾಳೆಕಂದು, ಮಾವಿನ ತೋರಣ, ಕಬ್ಬಿನ ಜಲ್ಲೆ, ತೆಂಗಿನ ಗರಿಗಳು ಹಬ್ಬವನ್ನು ಕಳೆಗಟ್ಟುವಂತೆ ಮಾಡಿದ್ದವು. ಗೋ ಪೂಜೆ, ಆಹಾರ ತಯಾರಿಕೆ, ರಾಶಿ ಪೂಜೆಯಂತಹ ಸುಗ್ಗಿ ಹಬ್ಬಗಳು ಸಡಗರವನ್ನು ಹೆಚ್ಚಿಸಿದವು.</p>.<p>ಸಾಂಪ್ರದಾಯಿಕ ಉಡುಪು ತೊಟ್ಟು ಬಂದಿದ್ದ ವಿದ್ಯಾರ್ಥಿಗಳು ಲಗುಬಗೆಯಿಂದ ಓಡಾಡುತ್ತಿದ್ದರು. ಬಳಿ ಪಂಚೆ, ಬಿಳಿ ಜುಬ್ಬಾ ಧರಿಸಿ ಪರಂಪರೆಯ ಹಿರಿಮೆಯನ್ನು ಸಾರಿದರು. ನೇಗಿಲ ನೊಗಕ್ಕೆ ಎತ್ತುಗಳು ಹೂಡಿ ಉಳಿಮೆ ಮಾಡಿದ ಪರಿ ಮೆಚ್ಚುವಂತಿತ್ತು. ಗುಡಿಸಲು, ಎತ್ತಿನ ಗಾಡಿ ಆಕರ್ಷಕವಾಗಿದ್ದವು.</p>.<p>ಶಾಲೆಯ ಪ್ರವೇಶ ದ್ವಾರದ ಬಳಿ ಗೋ ಪೂಜೆ ನೆರವೇರಿಸುವ ಮೂಲಕ ಸಂಕ್ರಾಂತಿಯ ಸುಗ್ಗಿ ಸಂಭ್ರಮಕ್ಕೆ ಚಾಲನೆ ನೀಡಲಾಯಿತು. ಮೆಕ್ಕೇಜೋಳ, ಭತ್ತ, ಕಡೆಲೆಕಾಳು, ಹೆಸರು ಕಾಳು, ಗೋಧಿ, ಬೆಲ್ಲ, ಅಡಿಕೆ, ಸಬ್ಬಕ್ಕಿ, ಸಿರಿಧಾನ್ಯ, ಕೆಂಪಕ್ಕಿ ಸೇರಿ ಹಲವು ಧಾನ್ಯಗಳ ರಾಶಿಗೆ ನಮಿಸಲಾಯಿತು.</p>.<p>ಹಸುಗಳಿಗೆ ಅಕ್ಕಿ, ಬೆಲ್ಲ ಮತ್ತು ಬಾಳೆಹಣ್ಣು ತಿನ್ನಿಸಲಾಯಿತು. ಪಂಚಾಯಿತಿ ಕಟ್ಟೆ, ನೇಗಿಲಯೋಗಿ, ಬಳೆಗಾರ ವೇಷಧಾರಿಗಳು ಕಣ್ಮನ ಸೆಳೆದರು. ಪೂಜೆಯ ನಂತರ ಎಲ್ಲರಿಗೂ ಎಳ್ಳು, ಬೆಲ್ಲ, ಕಬ್ಬು ವಿತರಿಸಿ ಶುಭಾಶಯ ವಿನಿಮಯ ಮಾಡಿಕೊಳ್ಳಲಾಯಿತು. ಮಕ್ಕಳು ಗಾಳಿಪಟ ಹಾರಿಸಿ ಸಂಭ್ರಮಿಸಿದರು.</p>.<div><blockquote>ಗ್ರಾಮೀಣ ಆಚರಣೆಗಳು ಆಧುನಿಕತೆಯ ಭರಾಟೆಯಲ್ಲಿ ಕಣ್ಮರೆಯಾಗುತ್ತಿವೆ. ಇವುಗಳನ್ನು ಮುಂದಿನ ತಲೆಮಾರಿಗೆ ದಾಟಿಸಬೇಕು. ಇದಕ್ಕೆ ಸಂಕ್ರಾಂತಿಯನ್ನು ಶಾಲಾ ಆವರಣದಲ್ಲಿ ಆಚರಿಸಲಾಗಿದೆ</blockquote><span class="attribution"> ಬಿ.ಎನ್. ಮಲ್ಲೇಶ್ ಆಡಳಿತಾಧಿಕಾರಿ ಮಯೂರ್ ಗ್ಲೋಬಲ್ ಶಾಲೆ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>