<p><strong>ಹೊನ್ನನಾಯಕನಹಳ್ಳಿ (ಚನ್ನಗಿರಿ):</strong> ‘ಕೇವಲ ಸರ್ಕಾರದಿಂದ ಬಿಡುಗಡೆಯಾಗುವ ಅನುದಾನದಲ್ಲಿ ಶಾಲೆಯ ಅಭಿವೃದ್ಧಿ ಸಾಧ್ಯವಿಲ್ಲ. ದಾನಿಗಳ ಸಹಾಯ ಕೂಡಾ ಶಾಲೆಯ ಅಭಿವೃದ್ಧಿಗೆ ಸಹಕಾರಿ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಲ್. ಜಯಪ್ಪ ಹೇಳಿದರು.</p>.<p>ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಟೇಬಲ್, ಕುರ್ಚಿ ದೇಣಿಗೆ ನೀಡಿದ ಟಿ.ಎಸ್.ಸುವರ್ಣ ಅವರನ್ನು ಸನ್ಮಾನಿಸಿ ಮಾತನಾಡಿದರು.</p>.<p>‘ಇದೇ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ ಸುವರ್ಣ ಅವರು ಜೂನ್ 30ರಂದು ನಿವೃತ್ತಿ ಹೊಂದಿದ್ದು, ಈ ಶಾಲೆಯಲ್ಲಿ ಸೇವೆ ಸಲ್ಲಿಸಿದ ನೆನಪಿಗಾಗಿ ನಲಿ–ಕಲಿ ಕೊಠಡಿಗೆ ಅಗತ್ಯವಾದ ಟೇಬಲ್ ಹಾಗೂ ಕುರ್ಚಿಗಳನ್ನು ದೇಣಿಗೆ ನೀಡಿರುವುದು ಸ್ವಾಗತಾರ್ಹ’ ಎಂದರು.</p>.<p>ಹೆಬ್ಬಳಗೆರೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಚಿ.ಕೆಂಚಪ್ಪ, ಮಣ್ಣಮ್ಮ ಪ್ರೌಢಶಾಲೆ ಮುಖ್ಯಶಿಕ್ಷಕ ಪಿ.ವಿ. ಸ್ವಾಮಿ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಎಸ್. ಗಣೇಶ್, ಎಸ್ಡಿಎಂಸಿ ಅಧ್ಯಕ್ಷ ಮಹೇಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊನ್ನನಾಯಕನಹಳ್ಳಿ (ಚನ್ನಗಿರಿ):</strong> ‘ಕೇವಲ ಸರ್ಕಾರದಿಂದ ಬಿಡುಗಡೆಯಾಗುವ ಅನುದಾನದಲ್ಲಿ ಶಾಲೆಯ ಅಭಿವೃದ್ಧಿ ಸಾಧ್ಯವಿಲ್ಲ. ದಾನಿಗಳ ಸಹಾಯ ಕೂಡಾ ಶಾಲೆಯ ಅಭಿವೃದ್ಧಿಗೆ ಸಹಕಾರಿ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಲ್. ಜಯಪ್ಪ ಹೇಳಿದರು.</p>.<p>ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಟೇಬಲ್, ಕುರ್ಚಿ ದೇಣಿಗೆ ನೀಡಿದ ಟಿ.ಎಸ್.ಸುವರ್ಣ ಅವರನ್ನು ಸನ್ಮಾನಿಸಿ ಮಾತನಾಡಿದರು.</p>.<p>‘ಇದೇ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ ಸುವರ್ಣ ಅವರು ಜೂನ್ 30ರಂದು ನಿವೃತ್ತಿ ಹೊಂದಿದ್ದು, ಈ ಶಾಲೆಯಲ್ಲಿ ಸೇವೆ ಸಲ್ಲಿಸಿದ ನೆನಪಿಗಾಗಿ ನಲಿ–ಕಲಿ ಕೊಠಡಿಗೆ ಅಗತ್ಯವಾದ ಟೇಬಲ್ ಹಾಗೂ ಕುರ್ಚಿಗಳನ್ನು ದೇಣಿಗೆ ನೀಡಿರುವುದು ಸ್ವಾಗತಾರ್ಹ’ ಎಂದರು.</p>.<p>ಹೆಬ್ಬಳಗೆರೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಚಿ.ಕೆಂಚಪ್ಪ, ಮಣ್ಣಮ್ಮ ಪ್ರೌಢಶಾಲೆ ಮುಖ್ಯಶಿಕ್ಷಕ ಪಿ.ವಿ. ಸ್ವಾಮಿ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಎಸ್. ಗಣೇಶ್, ಎಸ್ಡಿಎಂಸಿ ಅಧ್ಯಕ್ಷ ಮಹೇಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>