<p><strong>ದಾವಣಗೆರೆ:</strong> ಸಂತ ಸೇವಾಲಾಲ್ ಅವರ 287ನೇ ಜಯಂತ್ಯುತ್ಸವವನ್ನು ನ್ಯಾಮತಿ ತಾಲ್ಲೂಕಿನ ಸೂರಗೊಂಡನಕೊಪ್ಪದಲ್ಲಿ ಫೆ.13ರಿಂದ 15ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ ಅಧ್ಯಕ್ಷರೂ ಆಗಿರುವ ವಿಧಾನಸಭೆಯ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ತಿಳಿಸಿದರು.</p>.<p>‘ಮೂರು ದಿನ ನಡೆಯುವ ಕಾರ್ಯಕ್ರಮದಲ್ಲಿ ಲಕ್ಷಕ್ಕೂ ಅಧಿಕ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಮಹಾಮಠ ಸಮಿತಿ, ಸಂತ ಸೇವಾಲಾಲ್ ಕ್ಷೇತ್ರಾಭಿವೃದ್ಧಿ ಮತ್ತು ನಿರ್ವಹಣಾ ಪ್ರತಿಷ್ಠಾನ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ ಮತ್ತು ಜಿಲ್ಲಾಡಳಿತದ ವತಿಯಿಂದ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಭಕ್ತರಿಗೆ ಕುಡಿಯುವ ನೀರು, ಊಟ ಸೇರಿ ಮೂಲಸೌಲಭ್ಯ ಕಲ್ಪಿಸಲಾಗುತ್ತಿದೆ’ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>‘ಉತ್ಸವ ಹಾಗೂ ಧಾರ್ಮಿಕ ಕೈಂಕರ್ಯಗಳು ಫೆ.13ರಿಂದ ಆರಂಭವಾಗಲಿವೆ. ಸಾಂಪ್ರದಾಯಿಕ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆ, ಕಾಟಿ ಆರೋಹಣ, ಸತ್ಸಂಗ, ಭಜನೆ ಸೇರಿ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪೂರ್ಣಕುಂಭ ಮೆರವಣಿಗೆ, ಮರಿಯಮ್ಮ ದೇವಿ ಮತ್ತು ಸೇವಾಲಾಲ್ ಮೂರ್ತಿಗಳಿಗೆ ಅಭಿಷೇಕ ಮತ್ತು ಸಾಮೂಹಿಕ ಪ್ರಾರ್ಥನೆ, ಪಲ್ಲಕ್ಕಿ ಉತ್ಸವ, ಮಾಲಾಧಾರಿಗಳಿಂದ ಮಾಲೆ ಇರಿಮುಡಿಗಳ ಸಮರ್ಪಣೆಗಳು ಫೆ.14ರಂದು ಬೆಳಿಗ್ಗೆ ನಡೆಯಲಿವೆ’ ಎಂದರು.</p>.<p>‘ಅಂದು ಮಧ್ಯಾಹ್ನ 2.30ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೇವಾಲಾಲ್ ಜಯಂತಿ ಉದ್ಘಾಟಿಸಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ, ವಿ. ಸೋಮಣ್ಣ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್, ಬಿ.ವೈ. ರಾಘವೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸೇರಿ ಗಣ್ಯರು ಆಗಮಿಸಲಿದ್ದಾರೆ’ ಎಂದು ವಿವರಿಸಿದರು.</p>.<p>‘ಫೆ.15ರಂದು ಮಹಾಭೋಗ್, ಪೂಜೆ, ದರ್ಶನ, ತೀಜ್ ವಿಸರ್ಜನೆ ಮೂಲಕ ಜಯಂತ್ಯುತ್ಸವಕ್ಕೆ ತೆರೆ ಬೀಳಲಿದೆ. ಬಂಜಾರ ಸಮುದಾಯದ ಜನರು ಜಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು. ಸಂತ ಸೇವಾಲಾಲ್ ಅವರ ಜನ್ಮಸ್ಥಳವನ್ನು ಶೈಕ್ಷಣಿಕ ಕೇಂದ್ರವಾಗಿಯೂ ಅಭಿವೃದ್ಧಿಪಡಿಸುವ ಪ್ರಯತ್ನ ನಡೆಯುತ್ತಿದೆ. ವಲಸೆ ಕಾರ್ಮಿಕರ ಮಕ್ಕಳಿಗೆ ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜು ಹಂತದವರೆಗೆ ವಸತಿಯುತ ಶಿಕ್ಷಣ ನೀಡಲಾಗುವುದು’ ಎಂದರು.</p>.<p>ಕರ್ನಾಟಕ ರಾಜ್ಯ ತಾಂಡ ಅಭಿವೃದ್ಧಿ ನಿಗಮದ ಅಧ್ಯಕ್ಷ ಎನ್. ಜಯದೇವ ನಾಯ್ಕ, ಸಮಿತಿಯ ಅಧ್ಯಕ್ಷ ಎನ್. ಹನುಮಂತ ನಾಯ್ಕ, ಪ್ರಧಾನ ಕಾರ್ಯದರ್ಶಿ ನರೇನಹಳ್ಳಿ ಅರುಣ್ಕುಮಾರ್, ಮುಖಂಡರಾದ ರಾಘವೇಂದ್ರ ನಾಯ್ಕ, ಥಾರ್ಯ ನಾಯ್ಕ, ಎಸ್. ನಂಜಾ ನಾಯ್ಕ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಸಂತ ಸೇವಾಲಾಲ್ ಅವರ 287ನೇ ಜಯಂತ್ಯುತ್ಸವವನ್ನು ನ್ಯಾಮತಿ ತಾಲ್ಲೂಕಿನ ಸೂರಗೊಂಡನಕೊಪ್ಪದಲ್ಲಿ ಫೆ.13ರಿಂದ 15ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ ಅಧ್ಯಕ್ಷರೂ ಆಗಿರುವ ವಿಧಾನಸಭೆಯ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ತಿಳಿಸಿದರು.</p>.<p>‘ಮೂರು ದಿನ ನಡೆಯುವ ಕಾರ್ಯಕ್ರಮದಲ್ಲಿ ಲಕ್ಷಕ್ಕೂ ಅಧಿಕ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಮಹಾಮಠ ಸಮಿತಿ, ಸಂತ ಸೇವಾಲಾಲ್ ಕ್ಷೇತ್ರಾಭಿವೃದ್ಧಿ ಮತ್ತು ನಿರ್ವಹಣಾ ಪ್ರತಿಷ್ಠಾನ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ ಮತ್ತು ಜಿಲ್ಲಾಡಳಿತದ ವತಿಯಿಂದ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಭಕ್ತರಿಗೆ ಕುಡಿಯುವ ನೀರು, ಊಟ ಸೇರಿ ಮೂಲಸೌಲಭ್ಯ ಕಲ್ಪಿಸಲಾಗುತ್ತಿದೆ’ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>‘ಉತ್ಸವ ಹಾಗೂ ಧಾರ್ಮಿಕ ಕೈಂಕರ್ಯಗಳು ಫೆ.13ರಿಂದ ಆರಂಭವಾಗಲಿವೆ. ಸಾಂಪ್ರದಾಯಿಕ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆ, ಕಾಟಿ ಆರೋಹಣ, ಸತ್ಸಂಗ, ಭಜನೆ ಸೇರಿ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪೂರ್ಣಕುಂಭ ಮೆರವಣಿಗೆ, ಮರಿಯಮ್ಮ ದೇವಿ ಮತ್ತು ಸೇವಾಲಾಲ್ ಮೂರ್ತಿಗಳಿಗೆ ಅಭಿಷೇಕ ಮತ್ತು ಸಾಮೂಹಿಕ ಪ್ರಾರ್ಥನೆ, ಪಲ್ಲಕ್ಕಿ ಉತ್ಸವ, ಮಾಲಾಧಾರಿಗಳಿಂದ ಮಾಲೆ ಇರಿಮುಡಿಗಳ ಸಮರ್ಪಣೆಗಳು ಫೆ.14ರಂದು ಬೆಳಿಗ್ಗೆ ನಡೆಯಲಿವೆ’ ಎಂದರು.</p>.<p>‘ಅಂದು ಮಧ್ಯಾಹ್ನ 2.30ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೇವಾಲಾಲ್ ಜಯಂತಿ ಉದ್ಘಾಟಿಸಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ, ವಿ. ಸೋಮಣ್ಣ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್, ಬಿ.ವೈ. ರಾಘವೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸೇರಿ ಗಣ್ಯರು ಆಗಮಿಸಲಿದ್ದಾರೆ’ ಎಂದು ವಿವರಿಸಿದರು.</p>.<p>‘ಫೆ.15ರಂದು ಮಹಾಭೋಗ್, ಪೂಜೆ, ದರ್ಶನ, ತೀಜ್ ವಿಸರ್ಜನೆ ಮೂಲಕ ಜಯಂತ್ಯುತ್ಸವಕ್ಕೆ ತೆರೆ ಬೀಳಲಿದೆ. ಬಂಜಾರ ಸಮುದಾಯದ ಜನರು ಜಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು. ಸಂತ ಸೇವಾಲಾಲ್ ಅವರ ಜನ್ಮಸ್ಥಳವನ್ನು ಶೈಕ್ಷಣಿಕ ಕೇಂದ್ರವಾಗಿಯೂ ಅಭಿವೃದ್ಧಿಪಡಿಸುವ ಪ್ರಯತ್ನ ನಡೆಯುತ್ತಿದೆ. ವಲಸೆ ಕಾರ್ಮಿಕರ ಮಕ್ಕಳಿಗೆ ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜು ಹಂತದವರೆಗೆ ವಸತಿಯುತ ಶಿಕ್ಷಣ ನೀಡಲಾಗುವುದು’ ಎಂದರು.</p>.<p>ಕರ್ನಾಟಕ ರಾಜ್ಯ ತಾಂಡ ಅಭಿವೃದ್ಧಿ ನಿಗಮದ ಅಧ್ಯಕ್ಷ ಎನ್. ಜಯದೇವ ನಾಯ್ಕ, ಸಮಿತಿಯ ಅಧ್ಯಕ್ಷ ಎನ್. ಹನುಮಂತ ನಾಯ್ಕ, ಪ್ರಧಾನ ಕಾರ್ಯದರ್ಶಿ ನರೇನಹಳ್ಳಿ ಅರುಣ್ಕುಮಾರ್, ಮುಖಂಡರಾದ ರಾಘವೇಂದ್ರ ನಾಯ್ಕ, ಥಾರ್ಯ ನಾಯ್ಕ, ಎಸ್. ನಂಜಾ ನಾಯ್ಕ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>