ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂತೇಬೆನ್ನೂರು: ಮಹಿಳೆಯ ಚಿನ್ನದ ಸರ ಕಸಿದು ಪರಾರಿ

Published 12 ಜೂನ್ 2023, 12:58 IST
Last Updated 12 ಜೂನ್ 2023, 12:58 IST
ಅಕ್ಷರ ಗಾತ್ರ

ಸಂತೇಬೆನ್ನೂರು: ಸಮೀಪದ ತಣಿಗೆರೆ ಗ್ರಾಮದ ಮಹಿಳೆ ಸೋಮವಾರ ಮುಂಜಾನೆ ವಾಯುವಿಹಾರಕ್ಕೆ ತೆರಳಿದ್ದ ವೇಳೆ ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ.

ರತ್ನಮ್ಮ ಅವರು ಸಹೋದರಿ ಯಶೋಧಮ್ಮ ಅವರೊಂದಿಗೆ ಬೆಳಿಗ್ಗೆ 6ಕ್ಕೆ ವಾಯುವಿಹಾರಕ್ಕೆ ಹೋದಾಗ ಈ ಘಟನೆ ನಡೆದಿದೆ. ತಣಿಗೆರೆ– ಬಾಡ ರಸ್ತೆಯ ಉಪನಾಯಕನಹಳ್ಳಿ ಕ್ರಾಸ್ ಬಳಿ ಪಲ್ಸರ್ ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ.

ಸ್ವಲ್ಪ ಮುಂದಕ್ಕೆ ಚಲಿಸಿ ಹಿಂತಿರುಗಿ ಬಂದವರೇ ಕುತ್ತಿಗೆ ಹಿಸುಕಿ ಸರ ಕಿತ್ತುಕೊಂಡು ಉಪನಾಯಕನಹಳ್ಳಿ ದಾರಿಯಲ್ಲಿ ಸಾಗಿದರು. ಅಂದಾಜು ₹ 2.30 ಲಕ್ಷ ಬೆಲೆ ಬಾಳುತ್ತದೆ. ಕೃತ್ಯ ಎಸಗಿದವರು 25ರಿಂದ 30 ವರ್ಷದ ಯುವಕರಾಗಿದ್ದರು’ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. 

ಸಂತೇಬೆನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT