<p><strong>ದಾವಣಗೆರೆ:</strong> ‘ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯ್ ಪಟೇಲರು ಭಾರತವನ್ನು ಒಂದುಗೂಡಿಸಿದ್ದಾರೆ. ಇದೀಗ ಅವರ ಕನಸುಗಳನ್ನು ಒಂದು ನನಸಾಗಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ’ ಎಂದು ಬಿಜೆಪಿ ಸಂಸದ ಗೋವಿಂದ ಕಾರಜೋಳ ಹೇಳಿದರು. </p>.<p>ಇಲ್ಲಿನ ಯುಬಿಡಿಟಿ ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಬಿಜೆಪಿ ಜಿಲ್ಲಾ ಘಟಕದಿಂದ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ 150ನೇ ಜನ್ಮ ದಿನಾಚರಣೆ ಅಂಗವಾಗಿ ಭಾನುವಾರ ಹಮ್ಮಿಕೊಂಡಿದ್ದ ಏಕತಾ ಪಾದಯಾತ್ರೆಗೆ ಚಾಲನೆ ನೀಡಿ ಮಾತನಾಡಿದರು. </p>.<p>‘ಭಾರತದ ಏಕೀಕರಣದಲ್ಲಿ ಮಹತ್ವದ ಪಾತ್ರ ವಹಿಸಿದ್ದ ವಲ್ಲಭಬಾಯ್ ಪಟೇಲರ ಜನ್ಮದಿನದ ಸ್ಮರಣಾರ್ಥವಾಗಿ ದೇಶಾದ್ಯಂತ ಕಾರ್ಯಕ್ರಮ ನಡೆಸಲಾಗುತ್ತಿದೆ’ ಎಂದು ಹೇಳಿದರು.</p>.<p>‘ಯುವ ಜನರು ದೇಶದ ಏಕತೆ, ಐಕ್ಯತೆ ಮತ್ತು ಘನತೆಯನ್ನು ಎತ್ತಿ ಹಿಡಿಯುವ ಮೂಲಕ ಭಾರತ ವಿಶ್ವದ ಹಿರಿಯಣ್ಣ ನಾಗಬೇಕು ಎಂಬ ಕನಸನ್ನು ಹೊತ್ತು ಕೆಲಸ ಮಾಡಬೇಕಿದೆ’ ಎಂದರು. </p>.<p>‘ಪಟೇಲರು ಸ್ವಾತಂತ್ರ್ಯ ನಂತರ ಹರಿದು ಹಂಚಿ ಹೋಗಿದ್ದ 565 ಸಂಸ್ಥಾನಗಳ ರಾಜ, ಮಹಾ ರಾಜರನ್ನು ಒಪ್ಪಿಸಿ ಭಾರತದೊಂದಿಗೆ ವಿಲೀನಗೊಳಿಸಿದರು. ವಿಲೀನಕ್ಕೆ ಒಪ್ಪದವರನ್ನು ಬಗ್ಗು ಬಡಿದು ದೇಶಕ್ಕೆ ಅರ್ಥಪೂರ್ಣವಾದ ಸ್ವಾತಂತ್ರ್ಯವನ್ನು ತಂದುಕೊಟ್ಟರು’ ಎಂದರು. </p>.<p>‘ಎಲ್ಲರೂ ಒಗ್ಗೂಡಿ ದೇಶವನ್ನು ಕಟ್ಟುವುದೇ ಏಕತಾ ಪಾದಯಾತ್ರೆಯ ಮೂಲ ಉದ್ದೇಶವಾಗಿದೆ. ವಿಶೇಷವಾಗಿ ಯುವಜನರು ಈ ಬಗ್ಗೆ ಹೆಚ್ಚು ತಿಳಿದುಕೊಂಡು ದೇಶದ ಅಭಿವೃದ್ಧಿಗೆ ಕಟಿ ಬದ್ಧರಾಗಬೇಕು. ದೂರ ದೃಷ್ಟಿಯೊಂದಿಗೆ ಕೇಂದ್ರ ಸರ್ಕಾರ ಈ ಕಾರ್ಯಕ್ರಮ ಆಯೋಜಿಸಿರುವುದು ಅರ್ಥಪೂರ್ಣವಾಗಿದೆ’ ಎಂದು ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಿ.ಪಿ.ನಾಗರಾಜಪ್ಪ ಹೇಳಿದರು. </p>.<p>ಮಾಜಿ ಸಚಿವರಾದ ಎಸ್.ಎ.ರವೀಂದ್ರನಾಥ್, ಎಂ.ಪಿ.ರೇಣುಕಾಚಾರ್ಯ, ವಿಧಾನ ಪರಿಷತ್ ವಿಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ರಾಜಶೇಖರ್, ಮಾಜಿ ಶಾಸಕ ಎನ್.ಬಸವರಾಜ್ ನಾಯ್ಕ ಇತರರು ಉಪಸ್ಥಿತರಿದ್ದರು. </p>.<p>ಯುಬಿಡಿಟಿ ಕಾಲೇಜಿನ 300ಕ್ಕೂ ಅಧಿಕ ವಿದ್ಯಾರ್ಥಿಗಳು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ‘ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯ್ ಪಟೇಲರು ಭಾರತವನ್ನು ಒಂದುಗೂಡಿಸಿದ್ದಾರೆ. ಇದೀಗ ಅವರ ಕನಸುಗಳನ್ನು ಒಂದು ನನಸಾಗಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ’ ಎಂದು ಬಿಜೆಪಿ ಸಂಸದ ಗೋವಿಂದ ಕಾರಜೋಳ ಹೇಳಿದರು. </p>.<p>ಇಲ್ಲಿನ ಯುಬಿಡಿಟಿ ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಬಿಜೆಪಿ ಜಿಲ್ಲಾ ಘಟಕದಿಂದ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ 150ನೇ ಜನ್ಮ ದಿನಾಚರಣೆ ಅಂಗವಾಗಿ ಭಾನುವಾರ ಹಮ್ಮಿಕೊಂಡಿದ್ದ ಏಕತಾ ಪಾದಯಾತ್ರೆಗೆ ಚಾಲನೆ ನೀಡಿ ಮಾತನಾಡಿದರು. </p>.<p>‘ಭಾರತದ ಏಕೀಕರಣದಲ್ಲಿ ಮಹತ್ವದ ಪಾತ್ರ ವಹಿಸಿದ್ದ ವಲ್ಲಭಬಾಯ್ ಪಟೇಲರ ಜನ್ಮದಿನದ ಸ್ಮರಣಾರ್ಥವಾಗಿ ದೇಶಾದ್ಯಂತ ಕಾರ್ಯಕ್ರಮ ನಡೆಸಲಾಗುತ್ತಿದೆ’ ಎಂದು ಹೇಳಿದರು.</p>.<p>‘ಯುವ ಜನರು ದೇಶದ ಏಕತೆ, ಐಕ್ಯತೆ ಮತ್ತು ಘನತೆಯನ್ನು ಎತ್ತಿ ಹಿಡಿಯುವ ಮೂಲಕ ಭಾರತ ವಿಶ್ವದ ಹಿರಿಯಣ್ಣ ನಾಗಬೇಕು ಎಂಬ ಕನಸನ್ನು ಹೊತ್ತು ಕೆಲಸ ಮಾಡಬೇಕಿದೆ’ ಎಂದರು. </p>.<p>‘ಪಟೇಲರು ಸ್ವಾತಂತ್ರ್ಯ ನಂತರ ಹರಿದು ಹಂಚಿ ಹೋಗಿದ್ದ 565 ಸಂಸ್ಥಾನಗಳ ರಾಜ, ಮಹಾ ರಾಜರನ್ನು ಒಪ್ಪಿಸಿ ಭಾರತದೊಂದಿಗೆ ವಿಲೀನಗೊಳಿಸಿದರು. ವಿಲೀನಕ್ಕೆ ಒಪ್ಪದವರನ್ನು ಬಗ್ಗು ಬಡಿದು ದೇಶಕ್ಕೆ ಅರ್ಥಪೂರ್ಣವಾದ ಸ್ವಾತಂತ್ರ್ಯವನ್ನು ತಂದುಕೊಟ್ಟರು’ ಎಂದರು. </p>.<p>‘ಎಲ್ಲರೂ ಒಗ್ಗೂಡಿ ದೇಶವನ್ನು ಕಟ್ಟುವುದೇ ಏಕತಾ ಪಾದಯಾತ್ರೆಯ ಮೂಲ ಉದ್ದೇಶವಾಗಿದೆ. ವಿಶೇಷವಾಗಿ ಯುವಜನರು ಈ ಬಗ್ಗೆ ಹೆಚ್ಚು ತಿಳಿದುಕೊಂಡು ದೇಶದ ಅಭಿವೃದ್ಧಿಗೆ ಕಟಿ ಬದ್ಧರಾಗಬೇಕು. ದೂರ ದೃಷ್ಟಿಯೊಂದಿಗೆ ಕೇಂದ್ರ ಸರ್ಕಾರ ಈ ಕಾರ್ಯಕ್ರಮ ಆಯೋಜಿಸಿರುವುದು ಅರ್ಥಪೂರ್ಣವಾಗಿದೆ’ ಎಂದು ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಿ.ಪಿ.ನಾಗರಾಜಪ್ಪ ಹೇಳಿದರು. </p>.<p>ಮಾಜಿ ಸಚಿವರಾದ ಎಸ್.ಎ.ರವೀಂದ್ರನಾಥ್, ಎಂ.ಪಿ.ರೇಣುಕಾಚಾರ್ಯ, ವಿಧಾನ ಪರಿಷತ್ ವಿಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ರಾಜಶೇಖರ್, ಮಾಜಿ ಶಾಸಕ ಎನ್.ಬಸವರಾಜ್ ನಾಯ್ಕ ಇತರರು ಉಪಸ್ಥಿತರಿದ್ದರು. </p>.<p>ಯುಬಿಡಿಟಿ ಕಾಲೇಜಿನ 300ಕ್ಕೂ ಅಧಿಕ ವಿದ್ಯಾರ್ಥಿಗಳು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>