<p>ಸಾಸ್ವೆಹಳ್ಳಿ: ಇಲ್ಲಿನ ಚೌಡೇಶ್ವರಿ ಬೀದಿಯ ಜನರ ಪಾಲಿಗೆ ದೊಡ್ಡ ತಲೆನೋವಾಗಿದ್ದ ಚರಂಡಿ ಸಮಸ್ಯೆಗೆ ಕೊನೆಗೂ ಮುಕ್ತಿ ದೊರೆತಿದೆ. </p>.<p>ಇಲ್ಲಿ ದಶಕದ ಹಿಂದೆ ನಿರ್ಮಾಣವಾಗಿದ್ದ ಚರಂಡಿಗಳ ಕಾಮಗಾರಿ ಅವೈಜ್ಞಾನಿಕವಾಗಿತ್ತು. ಇದರಿಂದ ನೀರು ಸರಾಗವಾಗಿ ಹರಿದು ಹೋಗುತ್ತಿರಲಿಲ್ಲ. ಕೊಳಚೆ ನೀರು ನಿಂತು ಗಬ್ಬು ನಾರುತ್ತಿತ್ತು. ಸಾಂಕ್ರಾಮಿಕ ರೋಗಕ್ಕೂ ಇದು ಎಡೆಮಾಡಿಕೊಟ್ಟಿತ್ತು. ಈ ಬಗ್ಗೆ ‘ಪ್ರಜಾವಾಣಿ’ಯ ಆಗಸ್ಟ್ 2ರ ಸಂಚಿಕೆಯಲ್ಲಿ ‘ಸಾಸ್ವೆಹಳ್ಳಿ: ಚರಂಡಿಯೇ ಇಲ್ಲಿ ದೊಡ್ಡ ಸಮಸ್ಯೆ!’ ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟವಾಗಿತ್ತು.</p>.<p>ಈ ವರದಿಯು ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗಮನ ಸೆಳೆದಿತ್ತು. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದ ಇಲಾಖೆಯ ಅಧಿಕಾರಿಗಳು ₹ 4 ಲಕ್ಷ ಮೊತ್ತದ ಕ್ರಿಯಾ ಯೋಜನೆ ಸಿದ್ಧಪಡಿಸಿ ಹೊಸದಾಗಿ ಚರಂಡಿ ನಿರ್ಮಾಣ ಮಾಡಿದ್ದಾರೆ. </p>.<p>‘ಅಧಿಕಾರಿಗಳು ‘ಪ್ರಜಾವಾಣಿ’ ಪತ್ರಿಕೆಯ ವರದಿಯಿಂದ ಎಚ್ಚೆತ್ತು ಚೌಡೇಶ್ವರಿ ಬೀದಿಯ ಜನರ 15 ವರ್ಷಗಳ ಸಮಸ್ಯೆಯನ್ನು ಪರಿಹರಿಸಿದ್ದಾರೆ. ಇದು ಸಂತಸ ನೀಡಿದೆ’ ಎಂದು ಗ್ರಾಮ ಪಂಚಾಯಿತಿ ಸದಸ್ಯೆ ಸವಿತಾ ರಮೇಶ್ ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಾಸ್ವೆಹಳ್ಳಿ: ಇಲ್ಲಿನ ಚೌಡೇಶ್ವರಿ ಬೀದಿಯ ಜನರ ಪಾಲಿಗೆ ದೊಡ್ಡ ತಲೆನೋವಾಗಿದ್ದ ಚರಂಡಿ ಸಮಸ್ಯೆಗೆ ಕೊನೆಗೂ ಮುಕ್ತಿ ದೊರೆತಿದೆ. </p>.<p>ಇಲ್ಲಿ ದಶಕದ ಹಿಂದೆ ನಿರ್ಮಾಣವಾಗಿದ್ದ ಚರಂಡಿಗಳ ಕಾಮಗಾರಿ ಅವೈಜ್ಞಾನಿಕವಾಗಿತ್ತು. ಇದರಿಂದ ನೀರು ಸರಾಗವಾಗಿ ಹರಿದು ಹೋಗುತ್ತಿರಲಿಲ್ಲ. ಕೊಳಚೆ ನೀರು ನಿಂತು ಗಬ್ಬು ನಾರುತ್ತಿತ್ತು. ಸಾಂಕ್ರಾಮಿಕ ರೋಗಕ್ಕೂ ಇದು ಎಡೆಮಾಡಿಕೊಟ್ಟಿತ್ತು. ಈ ಬಗ್ಗೆ ‘ಪ್ರಜಾವಾಣಿ’ಯ ಆಗಸ್ಟ್ 2ರ ಸಂಚಿಕೆಯಲ್ಲಿ ‘ಸಾಸ್ವೆಹಳ್ಳಿ: ಚರಂಡಿಯೇ ಇಲ್ಲಿ ದೊಡ್ಡ ಸಮಸ್ಯೆ!’ ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟವಾಗಿತ್ತು.</p>.<p>ಈ ವರದಿಯು ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗಮನ ಸೆಳೆದಿತ್ತು. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದ ಇಲಾಖೆಯ ಅಧಿಕಾರಿಗಳು ₹ 4 ಲಕ್ಷ ಮೊತ್ತದ ಕ್ರಿಯಾ ಯೋಜನೆ ಸಿದ್ಧಪಡಿಸಿ ಹೊಸದಾಗಿ ಚರಂಡಿ ನಿರ್ಮಾಣ ಮಾಡಿದ್ದಾರೆ. </p>.<p>‘ಅಧಿಕಾರಿಗಳು ‘ಪ್ರಜಾವಾಣಿ’ ಪತ್ರಿಕೆಯ ವರದಿಯಿಂದ ಎಚ್ಚೆತ್ತು ಚೌಡೇಶ್ವರಿ ಬೀದಿಯ ಜನರ 15 ವರ್ಷಗಳ ಸಮಸ್ಯೆಯನ್ನು ಪರಿಹರಿಸಿದ್ದಾರೆ. ಇದು ಸಂತಸ ನೀಡಿದೆ’ ಎಂದು ಗ್ರಾಮ ಪಂಚಾಯಿತಿ ಸದಸ್ಯೆ ಸವಿತಾ ರಮೇಶ್ ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>