<p><strong>ಸಾಸ್ವೆಹಳ್ಳಿ</strong>: ಗ್ರಾಮದಲ್ಲಿ ಕಬ್ಬಿನ ಹಾಲು ಸೇವಿಸಿದ ಒಂದೇ ಕುಟುಂಬದ ಮೂವರು ಅಸ್ವಸ್ಥಗೊಂಡಿದ್ದ ಘಟನೆಯ ಬಳಿಕ ಆರೋಗ್ಯ ಅಧಿಕಾರಿಗಳ ತಂಡವು ವಿವಿಧ ಆಹಾರ ಮಳಿಗೆಗಳಿಗೆ ಭೇಟಿ ನೀಡಿ ಪರಿಶೀಲಿಸಿತು.</p>.<p>ಈ ತಪಾಸಣೆಯ ವೇಳೆ ಬಹಳಷ್ಟು ಬಹುತೇಕ ಕಬ್ಬಿನ ಹಾಲಿನ ಅಂಗಡಿ, ಹೋಟೆಲ್ ಮತ್ತು ಬೀದಿಬದಿ ಆಹಾರ ಮಳಿಗೆಗಳ ಮಾಲೀಕರು ಪರವಾನಗಿ ಪಡೆಯದೇ ವ್ಯಾಪಾರ ನಡೆಸುತ್ತಿರುವುದು ಕಂಡುಬಂದಿದೆ.</p>.<p>ನಿಯಮ ಉಲ್ಲಂಘಿಸಿದ ಎಲ್ಲ ಅಂಗಡಿಗಳಿಗೂ ನೋಟಿಸ್ ನೀಡುವಂತೆ ಜಿಲ್ಲಾ ಅಂಕಿತ ಅಧಿಕಾರಿ ನಾಗರಾಜ್ ಜೆ.ಎಸ್. ಅವರು ಸ್ಥಳೀಯ ವೈದ್ಯಾಧಿಕಾರಿಗಳಿಗೆ ಸೂಚಿಸಿದರು.</p>.<p>‘14 ದಿನಗಳ ಒಳಗಾಗಿ ಆಹಾರ ಸುರಕ್ಷತಾ ಇಲಾಖೆಗೆ ಸ್ಥಳೀಯ ವೈದ್ಯಾಧಿಕಾರಿ ಮೂಲಕ ಅರ್ಜಿ ಸಲ್ಲಿಸಿ ಕಡ್ಡಾಯವಾಗಿ ಪರವಾನಗಿ ಪಡೆದುಕೊಳ್ಳಬೇಕು. ಅವರಿಗೆ ಆಹಾರ ಸುರಕ್ಷತೆಯ ಬಗ್ಗೆ ತರಬೇತಿ ನೀಡಲಾಗುವುದು. ನಿಯಮ ಪಾಲನೆಯಾಗದಿದ್ದರೆ ಕ್ರಮ ಜರುಗಿಸಲಾಗುವುದು’ ಎಂದು ಅವರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಮಾದರಿ ರವಾನೆ: ಕಬ್ಬಿನ ಹಾಲಿನ ಮಾದರಿಯನ್ನು ಹೆಚ್ಚಿನ ಪರೀಕ್ಷೆಗಾಗಿ ಬೆಂಗಳೂರಿಗೆ ಕಳುಹಿಸಲಾಯಿತು. ಸಾಸ್ವೆಹಳ್ಳಿಯ ಓವರ್ಹೆಡ್ ಟ್ಯಾಂಕ್ನ ನೀರನ್ನು ಪರೀಕ್ಷೆಗಾಗಿ ಜಿಲ್ಲಾ ಸರ್ವೇಕ್ಷಣ ಘಟಕಕ್ಕೆ ರವಾನಿಸಲಾಯಿತು.</p>.<p>ಹೊನ್ನಾಳಿ ಆಹಾರ ಸುರಕ್ಷತಾ ಅಧಿಕಾರಿ ನವೀನ್ ಕುಮಾರ್, ಸಾಸ್ವೆಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಮಂಜುನಾಥ್ ಹಾಗೂ ಹಿರಿಯ ಆರೋಗ್ಯ ನಿರೀಕ್ಷಣಾ ಅಧಿಕಾರಿ ನಾಗರಾಜಪ್ಪ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-43-1352664631</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಸ್ವೆಹಳ್ಳಿ</strong>: ಗ್ರಾಮದಲ್ಲಿ ಕಬ್ಬಿನ ಹಾಲು ಸೇವಿಸಿದ ಒಂದೇ ಕುಟುಂಬದ ಮೂವರು ಅಸ್ವಸ್ಥಗೊಂಡಿದ್ದ ಘಟನೆಯ ಬಳಿಕ ಆರೋಗ್ಯ ಅಧಿಕಾರಿಗಳ ತಂಡವು ವಿವಿಧ ಆಹಾರ ಮಳಿಗೆಗಳಿಗೆ ಭೇಟಿ ನೀಡಿ ಪರಿಶೀಲಿಸಿತು.</p>.<p>ಈ ತಪಾಸಣೆಯ ವೇಳೆ ಬಹಳಷ್ಟು ಬಹುತೇಕ ಕಬ್ಬಿನ ಹಾಲಿನ ಅಂಗಡಿ, ಹೋಟೆಲ್ ಮತ್ತು ಬೀದಿಬದಿ ಆಹಾರ ಮಳಿಗೆಗಳ ಮಾಲೀಕರು ಪರವಾನಗಿ ಪಡೆಯದೇ ವ್ಯಾಪಾರ ನಡೆಸುತ್ತಿರುವುದು ಕಂಡುಬಂದಿದೆ.</p>.<p>ನಿಯಮ ಉಲ್ಲಂಘಿಸಿದ ಎಲ್ಲ ಅಂಗಡಿಗಳಿಗೂ ನೋಟಿಸ್ ನೀಡುವಂತೆ ಜಿಲ್ಲಾ ಅಂಕಿತ ಅಧಿಕಾರಿ ನಾಗರಾಜ್ ಜೆ.ಎಸ್. ಅವರು ಸ್ಥಳೀಯ ವೈದ್ಯಾಧಿಕಾರಿಗಳಿಗೆ ಸೂಚಿಸಿದರು.</p>.<p>‘14 ದಿನಗಳ ಒಳಗಾಗಿ ಆಹಾರ ಸುರಕ್ಷತಾ ಇಲಾಖೆಗೆ ಸ್ಥಳೀಯ ವೈದ್ಯಾಧಿಕಾರಿ ಮೂಲಕ ಅರ್ಜಿ ಸಲ್ಲಿಸಿ ಕಡ್ಡಾಯವಾಗಿ ಪರವಾನಗಿ ಪಡೆದುಕೊಳ್ಳಬೇಕು. ಅವರಿಗೆ ಆಹಾರ ಸುರಕ್ಷತೆಯ ಬಗ್ಗೆ ತರಬೇತಿ ನೀಡಲಾಗುವುದು. ನಿಯಮ ಪಾಲನೆಯಾಗದಿದ್ದರೆ ಕ್ರಮ ಜರುಗಿಸಲಾಗುವುದು’ ಎಂದು ಅವರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಮಾದರಿ ರವಾನೆ: ಕಬ್ಬಿನ ಹಾಲಿನ ಮಾದರಿಯನ್ನು ಹೆಚ್ಚಿನ ಪರೀಕ್ಷೆಗಾಗಿ ಬೆಂಗಳೂರಿಗೆ ಕಳುಹಿಸಲಾಯಿತು. ಸಾಸ್ವೆಹಳ್ಳಿಯ ಓವರ್ಹೆಡ್ ಟ್ಯಾಂಕ್ನ ನೀರನ್ನು ಪರೀಕ್ಷೆಗಾಗಿ ಜಿಲ್ಲಾ ಸರ್ವೇಕ್ಷಣ ಘಟಕಕ್ಕೆ ರವಾನಿಸಲಾಯಿತು.</p>.<p>ಹೊನ್ನಾಳಿ ಆಹಾರ ಸುರಕ್ಷತಾ ಅಧಿಕಾರಿ ನವೀನ್ ಕುಮಾರ್, ಸಾಸ್ವೆಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಮಂಜುನಾಥ್ ಹಾಗೂ ಹಿರಿಯ ಆರೋಗ್ಯ ನಿರೀಕ್ಷಣಾ ಅಧಿಕಾರಿ ನಾಗರಾಜಪ್ಪ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-43-1352664631</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>