<p><strong>ಸಾಸ್ವೆಹಳ್ಳಿ:</strong> ಕಾರ್ಮಿಕರು ರಾಷ್ಟ್ರದ ಮೂಲಭೂತ ಸೌಕರ್ಯಗಳ ನಿರ್ಮಾಣದ ಬೆನ್ನೆಲುಬಾಗಿದ್ದಾರೆ. ಕಠಿಣ ಪರಿಸರದಲ್ಲಿ ಕೆಲಸ ಮಾಡುವ ಅವರ ಆರೋಗ್ಯ ರಕ್ಷಣೆ ಸರ್ಕಾರದ ಆದ್ಯತೆಯಾಗಿದೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಹೇಳಿದರು.</p>.<p>ಸಮೀಪದ ಲಿಂಗಾಪುರ ಗ್ರಾಮದಲ್ಲಿ ನೊಂದಾಯಿತ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಹಾಗೂ ಕಾರ್ಮಿಕ ಇಲಾಖೆ ವತಿಯಿಂದ ಕಾರ್ಮಿಕರಿಗಾಗಿ ಆಯೋಜಿಸಿದ್ದ ಆರೋಗ್ಯ ಉಚಿತ ತಪಾಸಣಾ ಶಿಬಿರದಲ್ಲಿ ಮಾತನಾಡಿದರು.</p>.<p>‘ಕಾರ್ಮಿಕರ ಆರೋಗ್ಯವೇ ದೇಶದ ಸಂಪತ್ತು’ ಎಂಬ ಧ್ಯೇಯವಾಕ್ಯದೊಂದಿಗೆ ಶಿಬಿರ ಆಯೋಜಿಸಿದೆ. ದೈನಂದಿನ ಕೆಲಸದಿಂದ ಉಂಟಾಗುವ ದೈಹಿಕ ಸಮಸ್ಯೆ ಹಾಗೂ ಇತರ ಕಾಯಿಲೆಗಳ ಬಗ್ಗೆ ವೈದ್ಯರು ಇಲ್ಲಿ ತಪಾಸಣೆ ನಡೆಸುತ್ತಿದ್ದಾರೆ. ನೊಂದಾಯಿತ ಕಾರ್ಮಿಕರು ಮಂಡಳಿಯ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ನಗೀನ ಬಾನು ಹೇಳಿದರು.</p>.<p>ಕಾರ್ಮಿಕರಿಗೆ ರಕ್ತದೊತ್ತಡ, ಮಧುಮೇಹ ಹಾಗೂ ಸಾಮಾನ್ಯ ಆರೋಗ್ಯ ತಪಾಸಣೆ ನಡೆಸಲಾಯಿತು. ತಜ್ಞ ವೈದ್ಯರಿಂದ ಕಣ್ಣಿನ ತಪಾಸಣೆ ನಡೆಸಿ, ದೃಷ್ಟಿ ದೋಷವಿದ್ದವರಿಗೆ ಸೂಕ್ತ ಸಲಹೆ ನೀಡಲಾಯಿತು.</p>.<p>ಶಾಲಾ ಎಸ್ಡಿಎಂಸಿ ಸದಸ್ಯ ಮಂಜುನಾಥ್, ಸತೀಶ್ ಹಾಗೂ ಸುತ್ತಮುತ್ತಲ ಗ್ರಾಮಗಳ ಕಾರ್ಮಿಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಸ್ವೆಹಳ್ಳಿ:</strong> ಕಾರ್ಮಿಕರು ರಾಷ್ಟ್ರದ ಮೂಲಭೂತ ಸೌಕರ್ಯಗಳ ನಿರ್ಮಾಣದ ಬೆನ್ನೆಲುಬಾಗಿದ್ದಾರೆ. ಕಠಿಣ ಪರಿಸರದಲ್ಲಿ ಕೆಲಸ ಮಾಡುವ ಅವರ ಆರೋಗ್ಯ ರಕ್ಷಣೆ ಸರ್ಕಾರದ ಆದ್ಯತೆಯಾಗಿದೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಹೇಳಿದರು.</p>.<p>ಸಮೀಪದ ಲಿಂಗಾಪುರ ಗ್ರಾಮದಲ್ಲಿ ನೊಂದಾಯಿತ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಹಾಗೂ ಕಾರ್ಮಿಕ ಇಲಾಖೆ ವತಿಯಿಂದ ಕಾರ್ಮಿಕರಿಗಾಗಿ ಆಯೋಜಿಸಿದ್ದ ಆರೋಗ್ಯ ಉಚಿತ ತಪಾಸಣಾ ಶಿಬಿರದಲ್ಲಿ ಮಾತನಾಡಿದರು.</p>.<p>‘ಕಾರ್ಮಿಕರ ಆರೋಗ್ಯವೇ ದೇಶದ ಸಂಪತ್ತು’ ಎಂಬ ಧ್ಯೇಯವಾಕ್ಯದೊಂದಿಗೆ ಶಿಬಿರ ಆಯೋಜಿಸಿದೆ. ದೈನಂದಿನ ಕೆಲಸದಿಂದ ಉಂಟಾಗುವ ದೈಹಿಕ ಸಮಸ್ಯೆ ಹಾಗೂ ಇತರ ಕಾಯಿಲೆಗಳ ಬಗ್ಗೆ ವೈದ್ಯರು ಇಲ್ಲಿ ತಪಾಸಣೆ ನಡೆಸುತ್ತಿದ್ದಾರೆ. ನೊಂದಾಯಿತ ಕಾರ್ಮಿಕರು ಮಂಡಳಿಯ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ನಗೀನ ಬಾನು ಹೇಳಿದರು.</p>.<p>ಕಾರ್ಮಿಕರಿಗೆ ರಕ್ತದೊತ್ತಡ, ಮಧುಮೇಹ ಹಾಗೂ ಸಾಮಾನ್ಯ ಆರೋಗ್ಯ ತಪಾಸಣೆ ನಡೆಸಲಾಯಿತು. ತಜ್ಞ ವೈದ್ಯರಿಂದ ಕಣ್ಣಿನ ತಪಾಸಣೆ ನಡೆಸಿ, ದೃಷ್ಟಿ ದೋಷವಿದ್ದವರಿಗೆ ಸೂಕ್ತ ಸಲಹೆ ನೀಡಲಾಯಿತು.</p>.<p>ಶಾಲಾ ಎಸ್ಡಿಎಂಸಿ ಸದಸ್ಯ ಮಂಜುನಾಥ್, ಸತೀಶ್ ಹಾಗೂ ಸುತ್ತಮುತ್ತಲ ಗ್ರಾಮಗಳ ಕಾರ್ಮಿಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>