<p><strong>ಹರಿಹರ</strong>: ಕ್ರಿಯಾತ್ಮಕ ಪಾಲ್ಗೊಳ್ಳುವಿಕೆ ಮತ್ತು ನಿರಂತರ ಪ್ರಯತ್ನದಿಂದಾಗಿ ವಿದ್ಯಾರ್ಥಿಗಳು ಯಶಸ್ಸು ಕಾಣಲು ಸಾಧ್ಯ ಎಂದು ಗ್ರಾಸಿಂ ಇಂಡಸ್ಟ್ರೀಸ್ ಲಿ. ಕಂಪನಿ ಉಪಾಧ್ಯಕ್ಷ ಆನಂದ ಕಾಮೋಜಿ ಹೇಳಿದರು.</p>.<p>ನಗರದ ಕಿರ್ಲೋಸ್ಕರ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ (ಕಿಮ್) ಸಂಸ್ಥೆಯಲ್ಲಿ ಶನಿವಾರ ನಡೆದ ಅಂತರ ಕಾಲೇಜು ರಾಷ್ಟ್ರಮಟ್ಟದ ಮ್ಯಾನೇಜ್ಮೆಂಟ್ ಹಬ್ಬವಾದ ಕಿಂಪೋಸಿಯಮ್–2026ನ್ನು ಉದ್ಘಾಟಿಸಿ ಮಾತನಾಡಿದರು.</p>.<p>ಯಶಸ್ಸಿನ ಹಿಂದೆ ಓಡುವುದರಿಂದ ಸಾಧಕರಾಗುವುದಿಲ್ಲ. ಇದಕ್ಕಾಗಿ ಪಾಲ್ಗೊಳ್ಳುವಿಕೆ ಮತ್ತು ನಿರಂತರತೆಯ ಅಗತ್ಯವಿದೆ. ದಿನ ದಿನಕ್ಕೂ ಬದಲಾಗುತ್ತಿರುವ ತಂತ್ರಜ್ಞಾನವನ್ನು ಕರಗತ ಮಾಡಿಕೊಳ್ಳಬೇಕು ಎಂದರು.</p>.<p>ಮ್ಯಾನೇಜ್ಮೆಂಟ್ ವಿದ್ಯಾರ್ಥಿಗಳ ನಡುವೆ ಸಂವಹನ, ಕೌಶಲ, ಅನುಭವದ ಹಂಚಿಕೆ ಮಾಡುವ ಸಲುವಾಗಿ ಈ ಸಮಾರಂಭ ಆಯೋಜಿಸಿದೆ ಎಂದು ಸಂಸ್ಥೆಯ ನಿರ್ದೇಶಕ ಶ್ರೀಧರ್ ವೈಠಿಯಾನಾಥನ್ ಹೇಳಿದರು.</p>.<p>ಬೆಂಗಳೂರಿನ ಸಿಂಬಯೋಸಿಸ್, ನಾಗಪುರದ ಐಐಎಂಬಿ, ಐಎಂಟಿ ಸೇರಿದಂತೆ ಮೈಸೂರು, ಹುಬ್ಬಳ್ಳಿ, ಧಾರವಾಡ, ದಾವಣಗೆರೆಯ ಪ್ರತಿಷ್ಠಿತ ಸಂಸ್ಥೆಗಳ 80 ಎಂಬಿಎ ವಿದ್ಯಾರ್ಥಿಗಳು, ಪ್ರಾಧ್ಯಾಪಕರು, ಕೈಗಾರಿಕೋದ್ಯಮಿಗಳು ಭಾಗವಹಿಸಿದ್ದರು.</p>.<p>ವಿದ್ಯಾರ್ಥಿ ಸಂಯೋಜಕ ಯಶ್ವಂತ್ ರಾಮ್ ಕುಮಾರ್ ಚುಕ್ಕ ಮಾತನಾಡಿದರು.</p>.<p>ವಿದ್ಯಾರ್ಥಿಗಳಾದ ಆದಿತ್ಯ ಮತ್ತು ಎನ್. ನಿಕಿತಾ ಪ್ರಾರ್ಥಿಸಿದರು. ರಿಶಾಂಕ್ ಮತ್ತು ಹರ್ಷಿತಾ ನಿರೂಪಿಸಿದರು. ಅಧ್ಯಾಪಕ ಸಂಯೋಜಕ ಗಿರೀಶ್ ವೈ.ಎಂ. ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಿಹರ</strong>: ಕ್ರಿಯಾತ್ಮಕ ಪಾಲ್ಗೊಳ್ಳುವಿಕೆ ಮತ್ತು ನಿರಂತರ ಪ್ರಯತ್ನದಿಂದಾಗಿ ವಿದ್ಯಾರ್ಥಿಗಳು ಯಶಸ್ಸು ಕಾಣಲು ಸಾಧ್ಯ ಎಂದು ಗ್ರಾಸಿಂ ಇಂಡಸ್ಟ್ರೀಸ್ ಲಿ. ಕಂಪನಿ ಉಪಾಧ್ಯಕ್ಷ ಆನಂದ ಕಾಮೋಜಿ ಹೇಳಿದರು.</p>.<p>ನಗರದ ಕಿರ್ಲೋಸ್ಕರ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ (ಕಿಮ್) ಸಂಸ್ಥೆಯಲ್ಲಿ ಶನಿವಾರ ನಡೆದ ಅಂತರ ಕಾಲೇಜು ರಾಷ್ಟ್ರಮಟ್ಟದ ಮ್ಯಾನೇಜ್ಮೆಂಟ್ ಹಬ್ಬವಾದ ಕಿಂಪೋಸಿಯಮ್–2026ನ್ನು ಉದ್ಘಾಟಿಸಿ ಮಾತನಾಡಿದರು.</p>.<p>ಯಶಸ್ಸಿನ ಹಿಂದೆ ಓಡುವುದರಿಂದ ಸಾಧಕರಾಗುವುದಿಲ್ಲ. ಇದಕ್ಕಾಗಿ ಪಾಲ್ಗೊಳ್ಳುವಿಕೆ ಮತ್ತು ನಿರಂತರತೆಯ ಅಗತ್ಯವಿದೆ. ದಿನ ದಿನಕ್ಕೂ ಬದಲಾಗುತ್ತಿರುವ ತಂತ್ರಜ್ಞಾನವನ್ನು ಕರಗತ ಮಾಡಿಕೊಳ್ಳಬೇಕು ಎಂದರು.</p>.<p>ಮ್ಯಾನೇಜ್ಮೆಂಟ್ ವಿದ್ಯಾರ್ಥಿಗಳ ನಡುವೆ ಸಂವಹನ, ಕೌಶಲ, ಅನುಭವದ ಹಂಚಿಕೆ ಮಾಡುವ ಸಲುವಾಗಿ ಈ ಸಮಾರಂಭ ಆಯೋಜಿಸಿದೆ ಎಂದು ಸಂಸ್ಥೆಯ ನಿರ್ದೇಶಕ ಶ್ರೀಧರ್ ವೈಠಿಯಾನಾಥನ್ ಹೇಳಿದರು.</p>.<p>ಬೆಂಗಳೂರಿನ ಸಿಂಬಯೋಸಿಸ್, ನಾಗಪುರದ ಐಐಎಂಬಿ, ಐಎಂಟಿ ಸೇರಿದಂತೆ ಮೈಸೂರು, ಹುಬ್ಬಳ್ಳಿ, ಧಾರವಾಡ, ದಾವಣಗೆರೆಯ ಪ್ರತಿಷ್ಠಿತ ಸಂಸ್ಥೆಗಳ 80 ಎಂಬಿಎ ವಿದ್ಯಾರ್ಥಿಗಳು, ಪ್ರಾಧ್ಯಾಪಕರು, ಕೈಗಾರಿಕೋದ್ಯಮಿಗಳು ಭಾಗವಹಿಸಿದ್ದರು.</p>.<p>ವಿದ್ಯಾರ್ಥಿ ಸಂಯೋಜಕ ಯಶ್ವಂತ್ ರಾಮ್ ಕುಮಾರ್ ಚುಕ್ಕ ಮಾತನಾಡಿದರು.</p>.<p>ವಿದ್ಯಾರ್ಥಿಗಳಾದ ಆದಿತ್ಯ ಮತ್ತು ಎನ್. ನಿಕಿತಾ ಪ್ರಾರ್ಥಿಸಿದರು. ರಿಶಾಂಕ್ ಮತ್ತು ಹರ್ಷಿತಾ ನಿರೂಪಿಸಿದರು. ಅಧ್ಯಾಪಕ ಸಂಯೋಜಕ ಗಿರೀಶ್ ವೈ.ಎಂ. ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>