<p><strong>ಸಾಸ್ವೆಹಳ್ಳಿ:</strong> ಯಾವ ವಿದೇಶಿ ದಾಳಿಗಳಿಗೂ ಅಂಜದೆ ತನ್ನ ಅಸ್ತಿತ್ವವನ್ನು ಗಟ್ಟಿಯಾಗಿ ಉಳಿಸಿಕೊಂಡಿರುವ ಜಗತ್ತಿನ ಏಕೈಕ ಮೃತ್ಯುಂಜಯ ರಾಷ್ಟ್ರ ಭಾರತ ದೇವಾಲಯ ಸಂವರ್ಧನಾ ಸಮಿತಿಯ ರಾಜ್ಯ ಸಂಯೋಜಕ ಮನೋಹರ್ ಮಠದ್ ಅಭಿಪ್ರಾಯಪಟ್ಟರು.</p>.<p>ಬೆನಕನಹಳ್ಳಿಯಲ್ಲಿ ಹಿಂದೂ ಸಂಗಮ ಆಯೋಜನಾ ಸಮಿತಿ ಹಮ್ಮಿಕೊಂಡಿದ್ದ 'ಹಿಂದೂ ಸಂಗಮ' ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಭಾರತ ಹಲವು ಜನಾಂಗದವರನ್ನು ತನ್ನೊಳಗೆ ಮೈಗೂಡಿಸಿಕೊಂಡು ತನ್ನದೇ ಸಂಸ್ಕೃತಿಯೊಂದಿಗೆ ಬೆಳೆಯುತ್ತಿರುವ ರಾಷ್ಟ್ರ. ನಾವೆಲ್ಲರೂ ದೇಶವನ್ನು ಸಂಘಟಿಸಿ ಒಗ್ಗೂಡಿಸುವ ಕಾರ್ಯ ಮಾಡಬೇಕಿದೆ. ಯಾವುದೇ ತಾರತಮ್ಯವಿಲ್ಲದೆ ದೇಶದ ರಕ್ಷಣೆ ಮಾಡುವುದೇ ಸಂಘಟನೆಯ ಮೂಲ ಉದ್ದೇಶವಾಗಿದೆ ಎಂದು ತಿಳಿಸಿದರು.</p>.<p>ಕಾರ್ಯಕ್ರಮಕ್ಕೂ ಮುನ್ನ ಗ್ರಾಮದಲ್ಲಿ ಭಾರತಮಾತೆಯ ಭಾವಚಿತ್ರದೊಂದಿಗೆ ಅದ್ಧೂರಿ ಶೋಭಾಯಾತ್ರೆ ನಡೆಯಿತು.</p>.<p>ಸಮಿತಿಯ ಉಪಾಧ್ಯಕ್ಷ ಎಚ್.ಎಂ. ಅರುಣ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಕೋಶಾಧ್ಯಕ್ಷ ಪ್ರವೀಣ್ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ಬೀರಗೊಂಡನಹಳ್ಳಿ, ಬೆನಕನಹಳ್ಳಿ ಹಾಗೂ ಸುತ್ತಮುತ್ತಲ ಗ್ರಾಮಗಳ ಆರ್ಎಸ್ಎಸ್ ಕಾರ್ಯಕರ್ತರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಸ್ವೆಹಳ್ಳಿ:</strong> ಯಾವ ವಿದೇಶಿ ದಾಳಿಗಳಿಗೂ ಅಂಜದೆ ತನ್ನ ಅಸ್ತಿತ್ವವನ್ನು ಗಟ್ಟಿಯಾಗಿ ಉಳಿಸಿಕೊಂಡಿರುವ ಜಗತ್ತಿನ ಏಕೈಕ ಮೃತ್ಯುಂಜಯ ರಾಷ್ಟ್ರ ಭಾರತ ದೇವಾಲಯ ಸಂವರ್ಧನಾ ಸಮಿತಿಯ ರಾಜ್ಯ ಸಂಯೋಜಕ ಮನೋಹರ್ ಮಠದ್ ಅಭಿಪ್ರಾಯಪಟ್ಟರು.</p>.<p>ಬೆನಕನಹಳ್ಳಿಯಲ್ಲಿ ಹಿಂದೂ ಸಂಗಮ ಆಯೋಜನಾ ಸಮಿತಿ ಹಮ್ಮಿಕೊಂಡಿದ್ದ 'ಹಿಂದೂ ಸಂಗಮ' ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಭಾರತ ಹಲವು ಜನಾಂಗದವರನ್ನು ತನ್ನೊಳಗೆ ಮೈಗೂಡಿಸಿಕೊಂಡು ತನ್ನದೇ ಸಂಸ್ಕೃತಿಯೊಂದಿಗೆ ಬೆಳೆಯುತ್ತಿರುವ ರಾಷ್ಟ್ರ. ನಾವೆಲ್ಲರೂ ದೇಶವನ್ನು ಸಂಘಟಿಸಿ ಒಗ್ಗೂಡಿಸುವ ಕಾರ್ಯ ಮಾಡಬೇಕಿದೆ. ಯಾವುದೇ ತಾರತಮ್ಯವಿಲ್ಲದೆ ದೇಶದ ರಕ್ಷಣೆ ಮಾಡುವುದೇ ಸಂಘಟನೆಯ ಮೂಲ ಉದ್ದೇಶವಾಗಿದೆ ಎಂದು ತಿಳಿಸಿದರು.</p>.<p>ಕಾರ್ಯಕ್ರಮಕ್ಕೂ ಮುನ್ನ ಗ್ರಾಮದಲ್ಲಿ ಭಾರತಮಾತೆಯ ಭಾವಚಿತ್ರದೊಂದಿಗೆ ಅದ್ಧೂರಿ ಶೋಭಾಯಾತ್ರೆ ನಡೆಯಿತು.</p>.<p>ಸಮಿತಿಯ ಉಪಾಧ್ಯಕ್ಷ ಎಚ್.ಎಂ. ಅರುಣ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಕೋಶಾಧ್ಯಕ್ಷ ಪ್ರವೀಣ್ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ಬೀರಗೊಂಡನಹಳ್ಳಿ, ಬೆನಕನಹಳ್ಳಿ ಹಾಗೂ ಸುತ್ತಮುತ್ತಲ ಗ್ರಾಮಗಳ ಆರ್ಎಸ್ಎಸ್ ಕಾರ್ಯಕರ್ತರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>