<p><strong>ತ್ಯಾವಣಿಗೆ:</strong> ‘ಬ್ರಿಟಿಷರ ಕಾಲದಿಂದ ಈಗಿನವರೆಗೆ ಗ್ರಾಮ ಠಾಣಾ ವ್ಯಾಪ್ತಿ ವಿಸ್ತರಣೆ ಆಗಿಲ್ಲ. ಇದರಿಂದ ಸಾರ್ವಜನಿಕರಿಗೆ ಸಾಕಷ್ಟು ಸಮಸ್ಯೆ ಆಗುತ್ತಿದೆ. ಆದ್ದರಿಂದ ಗ್ರಾಮ ಠಾಣಾ ವಿಸ್ತರಣೆಗಾಗಿ ಹೋರಾಟ ಮಾಡುವುದು ಅನಿವಾರ್ಯ’ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ತೇಜಸ್ವಿ ಪಟೇಲ್ ಹೇಳಿದರು.<br><br> ಸಮೀಪದ ಕಾರಿಗನೂರಿನಲ್ಲಿ ಗ್ರಾಮ ಪಂಚಾಯಿತಿ ಅಯೋಜಿಸಿದ್ದ ಗ್ರಾಮ ಸಭೆಯಲ್ಲಿ ಶುಕ್ರವಾರ ಮಾತನಾಡಿದರು.</p>.<p>‘ಇ–ಸ್ವತ್ತು ಪದ್ಧತಿ ಬರುವವರೆಗೂ ತೊಂದರೆ ಇರಲಿಲ್ಲ. ಗ್ರಾಮ ಪಂಚಾಯಿತಿಯಲ್ಲಿ ಈಗ ಇ–ಸ್ವತ್ತು ಅಗತ್ಯ ದಾಖಲೆ ಆಗುತ್ತಿದೆ. ಮನವಿ ನೀಡಿದರೆ ಗ್ರಾಮ ಠಾಣಾ ವ್ಯಾಪ್ತಿ ವಿಸ್ತರಿಸುವುದಾಗಿ ಹೇಳುತ್ತಾರೆ. ಆದರೆ ಕಾರ್ಯರೂಪಕ್ಕೆ ಬರುತ್ತಿಲ್ಲ’ ಎಂದರು.<br><br>‘ಆಡಳಿತ ಯಂತ್ರಕ್ಕೆ ಹೋರಾಟದ ಮೂಲಕ ಬಿಸಿ ಮುಟ್ಟಿಸಬೇಕು. ಜಡ ವ್ಯವಸ್ಥೆಯಲ್ಲಿ ಸೌಲಭ್ಯ ಪಡೆಯುವುದು ಕಷ್ಟದ ಸಂಗತಿ’ ಎಂದು ಬೇಸರ ವ್ಯಕ್ತಪಡಿಸಿದರು.<br><br>‘2016ರಲ್ಲಿ ರಾಜ್ಯ ಸರ್ಕಾರ ಗ್ರಾಮ ಠಾಣಾ ವಿಸ್ತರಣೆಗೆ ಸುತ್ತೋಲೆ ಹೊರಡಿಸಿದೆ’ ಎಂದು ಗ್ರಾಮ ಪಂಚಾಯಿತಿ ಪಿಡಿಒ ಗೋಪಾಲ್ ಕೃಷ್ಣ ಹೇಳಿದರು.</p>.<p>‘ಗ್ರಾಮೀಣ ಜನರು ಮನೆ ಕಟ್ಟಿಕೊಳ್ಳಲು ಇ–ಸ್ವತ್ತು ಸಹಕಾರಿ. ಆದ್ದರಿಂದ ಗ್ರಾಮ ಠಾಣಾ ವಿಸ್ತರಣೆ ಸೂಕ್ತ’ ಎಂದು ಗ್ರಾಮ ಪಂಚಾಯಿತಿ ಸದಸ್ಯ ಬಸವರಾಜ್ ಪಟೇಲ್ ತಿಳಿಸಿದರು. <br><br>ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರಿಯಾಂಕ, ಉಪಾಧ್ಯಕ್ಷೆ ಹೇಮಾವತಿ, ಸದಸ್ಯರಾದ ಚೇತನ್ ಕುಮಾರ್, ಶರತ್, ಸಂದೀಪ್, ಪ್ರವೀಣ್, ಕಿರಣ್, ಮಾಜಿ ಸದಸ್ಯರಾದ ಮುರುಗೇಶ್, ಜಯಪ್ಪ ಗೌಡ್ರು, ಕಂದಾಯ ನಿರೀಕ್ಷಕ ಬಸಣ್ಣ, ವಿಎ ಬಸವರಾಜ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತ್ಯಾವಣಿಗೆ:</strong> ‘ಬ್ರಿಟಿಷರ ಕಾಲದಿಂದ ಈಗಿನವರೆಗೆ ಗ್ರಾಮ ಠಾಣಾ ವ್ಯಾಪ್ತಿ ವಿಸ್ತರಣೆ ಆಗಿಲ್ಲ. ಇದರಿಂದ ಸಾರ್ವಜನಿಕರಿಗೆ ಸಾಕಷ್ಟು ಸಮಸ್ಯೆ ಆಗುತ್ತಿದೆ. ಆದ್ದರಿಂದ ಗ್ರಾಮ ಠಾಣಾ ವಿಸ್ತರಣೆಗಾಗಿ ಹೋರಾಟ ಮಾಡುವುದು ಅನಿವಾರ್ಯ’ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ತೇಜಸ್ವಿ ಪಟೇಲ್ ಹೇಳಿದರು.<br><br> ಸಮೀಪದ ಕಾರಿಗನೂರಿನಲ್ಲಿ ಗ್ರಾಮ ಪಂಚಾಯಿತಿ ಅಯೋಜಿಸಿದ್ದ ಗ್ರಾಮ ಸಭೆಯಲ್ಲಿ ಶುಕ್ರವಾರ ಮಾತನಾಡಿದರು.</p>.<p>‘ಇ–ಸ್ವತ್ತು ಪದ್ಧತಿ ಬರುವವರೆಗೂ ತೊಂದರೆ ಇರಲಿಲ್ಲ. ಗ್ರಾಮ ಪಂಚಾಯಿತಿಯಲ್ಲಿ ಈಗ ಇ–ಸ್ವತ್ತು ಅಗತ್ಯ ದಾಖಲೆ ಆಗುತ್ತಿದೆ. ಮನವಿ ನೀಡಿದರೆ ಗ್ರಾಮ ಠಾಣಾ ವ್ಯಾಪ್ತಿ ವಿಸ್ತರಿಸುವುದಾಗಿ ಹೇಳುತ್ತಾರೆ. ಆದರೆ ಕಾರ್ಯರೂಪಕ್ಕೆ ಬರುತ್ತಿಲ್ಲ’ ಎಂದರು.<br><br>‘ಆಡಳಿತ ಯಂತ್ರಕ್ಕೆ ಹೋರಾಟದ ಮೂಲಕ ಬಿಸಿ ಮುಟ್ಟಿಸಬೇಕು. ಜಡ ವ್ಯವಸ್ಥೆಯಲ್ಲಿ ಸೌಲಭ್ಯ ಪಡೆಯುವುದು ಕಷ್ಟದ ಸಂಗತಿ’ ಎಂದು ಬೇಸರ ವ್ಯಕ್ತಪಡಿಸಿದರು.<br><br>‘2016ರಲ್ಲಿ ರಾಜ್ಯ ಸರ್ಕಾರ ಗ್ರಾಮ ಠಾಣಾ ವಿಸ್ತರಣೆಗೆ ಸುತ್ತೋಲೆ ಹೊರಡಿಸಿದೆ’ ಎಂದು ಗ್ರಾಮ ಪಂಚಾಯಿತಿ ಪಿಡಿಒ ಗೋಪಾಲ್ ಕೃಷ್ಣ ಹೇಳಿದರು.</p>.<p>‘ಗ್ರಾಮೀಣ ಜನರು ಮನೆ ಕಟ್ಟಿಕೊಳ್ಳಲು ಇ–ಸ್ವತ್ತು ಸಹಕಾರಿ. ಆದ್ದರಿಂದ ಗ್ರಾಮ ಠಾಣಾ ವಿಸ್ತರಣೆ ಸೂಕ್ತ’ ಎಂದು ಗ್ರಾಮ ಪಂಚಾಯಿತಿ ಸದಸ್ಯ ಬಸವರಾಜ್ ಪಟೇಲ್ ತಿಳಿಸಿದರು. <br><br>ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರಿಯಾಂಕ, ಉಪಾಧ್ಯಕ್ಷೆ ಹೇಮಾವತಿ, ಸದಸ್ಯರಾದ ಚೇತನ್ ಕುಮಾರ್, ಶರತ್, ಸಂದೀಪ್, ಪ್ರವೀಣ್, ಕಿರಣ್, ಮಾಜಿ ಸದಸ್ಯರಾದ ಮುರುಗೇಶ್, ಜಯಪ್ಪ ಗೌಡ್ರು, ಕಂದಾಯ ನಿರೀಕ್ಷಕ ಬಸಣ್ಣ, ವಿಎ ಬಸವರಾಜ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>