<p><strong>ಬುಳುಸಾಗರ (ಚನ್ನಗಿರಿ):</strong> ತಾಲ್ಲೂಕಿನ ಬುಳುಸಾಗರದ ಬಳಿ ಹಾದು ಹೋಗಿರುವ ಸಾಸ್ವೆಹಳ್ಳಿ ಏತ ನೀರಾವರಿ ಯೋಜನೆಯಡಿ ಕೆರೆಗಳಿಗೆ ನೀರು ತುಂಬಿಸುವ ಅಳವಡಿಸಿರುವ ಪೈಪ್ ಒಡೆದು ಅಪಾರ ಪ್ರಮಾಣದ ನೀರು ಪೋಲಾಗುತ್ತಿದೆ.</p>.<p>ಪೈಪ್ ಒಡೆದು ಮೂರು ದಿನವಾಗಿದ್ದು ನಿರಂತರವಾಗಿ ನೀರು ಕಾರಂಜಿಯಂತೆ ಹೊರಹೊಮ್ಮಿ ಅಕ್ಕಪಕ್ಕದ ತೋಟಗಳಿಗೆ ಹೋಗುತ್ತಿದೆ. ಸಂಜೆಯವರೆಗೂ ಕೂಡಾ ಸಂಬಂಧಪಟ್ಟ ಇಲಾಖೆಯವರು ಒಡೆದು ಹೋಗಿರುವ ಪೈಪ್ನ್ನು ದುರಸ್ತಿ ಮಾಡದ್ದರಿಂದ ಯಥೇಚ್ಛ ಪ್ರಮಾಣದಲ್ಲಿ ನೀರು ಹರಿದು ಹೋಗುತ್ತಿದೆ.</p>.<p>80ಕ್ಕೂ ಹೆಚ್ಚು ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಇದಾಗಿದ್ದು, 2018ರಲ್ಲಿ ಆರಂಭವಾದ ಕಾಮಗಾರಿ ಈ ಮುಗಿದು ಪ್ರಾಯೋಗಿಕ ಪರೀಕ್ಷೆ ಕಾರ್ಯ ನಡೆದಿದ್ದು, ಮೊದಲ ಹಂತದಲ್ಲಿಯೇ ಪೈಪ್ ಒಡೆದು ಹೋಗಿದ್ದು ರೈತರ ಆತಂಕಕ್ಕೆ ಕಾರಣವಾಗಿದೆ.</p>.<p>2018ರಲ್ಲಿ ಶಾಸಕ ವಡ್ನಾಳ್ ರಾಜಣ್ಣ ಅವರು ₹ 461 ಕೋಟಿ ಅನುದಾನವನ್ನು ಬಿಡುಗಡೆ ಮಾಡಿಸಿದ್ದರು. ನಂತರ 2022ರಲ್ಲಿ ಸಾಲಿನಲ್ಲಿ ಅಂದಿನ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹೆಚ್ಚುವರಿ ಕಾಮಗಾರಿಗೆ ₹ 165 ಕೋಟಿ ಬಿಡುಗಡೆ ಮಾಡಿಸಿದ್ದರು. ಈಗಿನ ಶಾಸಕ ಬಸವರಾಜು ವಿ. ಶಿವಗಂಗಾ ಕ್ಷೇತ್ರದಲ್ಲಿ ಬಾಕಿ ಉಳಿದಿರುವ 50ಕ್ಕಿಂತ ಹೆಚ್ಚು ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಗೆ ₹ 365 ಕೋಟಿ ಅನುದಾನವನ್ನು ಬಿಡುಗಡೆ ಮಾಡಿಸಿದ್ದಾರೆ. ಇಷ್ಟು ಹಣ ಖರ್ಚಾದರೂ ಕೆರೆಗಳಿಗೆ ಸಮರ್ಪಕವಾಗಿ ಇನ್ನೂ ನೀರು ತುಂಬುತ್ತಿಲ್ಲ ಎಂದು ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದಾರೆ.</p>.<p>ಜಲ ಸಂಪನ್ಮೂಲ ಇಲಾಖೆಯ ಕಚೇರಿ ದಾವಣಗೆರೆಯಲ್ಲಿದ್ದು, ಅಧಿಕಾರಿಗಳಿಗೆ ಕರೆ ಮಾಡಿ ಮಾಹಿತಿ ತಿಳಿಸಲು ಅಧಿಕಾರಿಗಳ ಮೊಬೈಲ್ ನಂಬರು ಕೂಡಾ ಇರುವುದಿಲ್ಲ. ಆದ್ದರಿಂದ ಕೂಡಲೇ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಪೈಪ್ನ್ನು ದುರಸ್ತಿ ಮಾಡಿ ನೀರು ಹರಿಯುವುದನ್ನು ನಿಲ್ಲಿಸಬೇಕು ಎಂದು ಬುಳುಸಾಗರದ ಸಿದ್ಧರಾಮಪ್ಪ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬುಳುಸಾಗರ (ಚನ್ನಗಿರಿ):</strong> ತಾಲ್ಲೂಕಿನ ಬುಳುಸಾಗರದ ಬಳಿ ಹಾದು ಹೋಗಿರುವ ಸಾಸ್ವೆಹಳ್ಳಿ ಏತ ನೀರಾವರಿ ಯೋಜನೆಯಡಿ ಕೆರೆಗಳಿಗೆ ನೀರು ತುಂಬಿಸುವ ಅಳವಡಿಸಿರುವ ಪೈಪ್ ಒಡೆದು ಅಪಾರ ಪ್ರಮಾಣದ ನೀರು ಪೋಲಾಗುತ್ತಿದೆ.</p>.<p>ಪೈಪ್ ಒಡೆದು ಮೂರು ದಿನವಾಗಿದ್ದು ನಿರಂತರವಾಗಿ ನೀರು ಕಾರಂಜಿಯಂತೆ ಹೊರಹೊಮ್ಮಿ ಅಕ್ಕಪಕ್ಕದ ತೋಟಗಳಿಗೆ ಹೋಗುತ್ತಿದೆ. ಸಂಜೆಯವರೆಗೂ ಕೂಡಾ ಸಂಬಂಧಪಟ್ಟ ಇಲಾಖೆಯವರು ಒಡೆದು ಹೋಗಿರುವ ಪೈಪ್ನ್ನು ದುರಸ್ತಿ ಮಾಡದ್ದರಿಂದ ಯಥೇಚ್ಛ ಪ್ರಮಾಣದಲ್ಲಿ ನೀರು ಹರಿದು ಹೋಗುತ್ತಿದೆ.</p>.<p>80ಕ್ಕೂ ಹೆಚ್ಚು ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಇದಾಗಿದ್ದು, 2018ರಲ್ಲಿ ಆರಂಭವಾದ ಕಾಮಗಾರಿ ಈ ಮುಗಿದು ಪ್ರಾಯೋಗಿಕ ಪರೀಕ್ಷೆ ಕಾರ್ಯ ನಡೆದಿದ್ದು, ಮೊದಲ ಹಂತದಲ್ಲಿಯೇ ಪೈಪ್ ಒಡೆದು ಹೋಗಿದ್ದು ರೈತರ ಆತಂಕಕ್ಕೆ ಕಾರಣವಾಗಿದೆ.</p>.<p>2018ರಲ್ಲಿ ಶಾಸಕ ವಡ್ನಾಳ್ ರಾಜಣ್ಣ ಅವರು ₹ 461 ಕೋಟಿ ಅನುದಾನವನ್ನು ಬಿಡುಗಡೆ ಮಾಡಿಸಿದ್ದರು. ನಂತರ 2022ರಲ್ಲಿ ಸಾಲಿನಲ್ಲಿ ಅಂದಿನ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹೆಚ್ಚುವರಿ ಕಾಮಗಾರಿಗೆ ₹ 165 ಕೋಟಿ ಬಿಡುಗಡೆ ಮಾಡಿಸಿದ್ದರು. ಈಗಿನ ಶಾಸಕ ಬಸವರಾಜು ವಿ. ಶಿವಗಂಗಾ ಕ್ಷೇತ್ರದಲ್ಲಿ ಬಾಕಿ ಉಳಿದಿರುವ 50ಕ್ಕಿಂತ ಹೆಚ್ಚು ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಗೆ ₹ 365 ಕೋಟಿ ಅನುದಾನವನ್ನು ಬಿಡುಗಡೆ ಮಾಡಿಸಿದ್ದಾರೆ. ಇಷ್ಟು ಹಣ ಖರ್ಚಾದರೂ ಕೆರೆಗಳಿಗೆ ಸಮರ್ಪಕವಾಗಿ ಇನ್ನೂ ನೀರು ತುಂಬುತ್ತಿಲ್ಲ ಎಂದು ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದಾರೆ.</p>.<p>ಜಲ ಸಂಪನ್ಮೂಲ ಇಲಾಖೆಯ ಕಚೇರಿ ದಾವಣಗೆರೆಯಲ್ಲಿದ್ದು, ಅಧಿಕಾರಿಗಳಿಗೆ ಕರೆ ಮಾಡಿ ಮಾಹಿತಿ ತಿಳಿಸಲು ಅಧಿಕಾರಿಗಳ ಮೊಬೈಲ್ ನಂಬರು ಕೂಡಾ ಇರುವುದಿಲ್ಲ. ಆದ್ದರಿಂದ ಕೂಡಲೇ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಪೈಪ್ನ್ನು ದುರಸ್ತಿ ಮಾಡಿ ನೀರು ಹರಿಯುವುದನ್ನು ನಿಲ್ಲಿಸಬೇಕು ಎಂದು ಬುಳುಸಾಗರದ ಸಿದ್ಧರಾಮಪ್ಪ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>