<p><strong>ಸಾಸ್ವೆಹಳ್ಳಿ:</strong> ಗ್ರಾಮದ ತುಂಗಾಭದ್ರಾ ನದಿ ದಡದಲ್ಲಿ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ.</p>.<p>ಬೈರನಹಳ್ಳಿಯ ಚೇತನ್ ಸ್ವಾಮಿ (31) ಮೃತರು.</p>.<p>ಬುಧವಾರ ಮಧ್ಯಾಹ್ನ ವಿನಯ ಕುಮಾರ್ ಎಂಬವರು ತಮ್ಮ ಅಡಿಕೆ ತೋಟಕ್ಕೆ ತೆರಳಿದ್ದಾಗ ದುರ್ವಾಸನೆ ಬಂದಿದೆ. ಹಳ್ಳದ ದಡದ ಬಳಿ ಪರಿಶೀಲಿಸಿದಾಗ ವ್ಯಕ್ತಿಯ ಮೃತದೇಹ ಭಾಗಶಃ ಸುಟ್ಟ ಸ್ಥಿತಿಯಲ್ಲಿ ಕಂಡುಬಂದಿದೆ. </p>.<p>‘ದುಷ್ಕರ್ಮಿಗಳು ಬೇರೆಡೆ ಕೊಲೆ ಮಾಡಿ, ಇಲ್ಲಿ ತಂದುಹಾಕಿ ಸಾಕ್ಷ್ಯ ನಾಶಕ್ಕೆ ಯತ್ನಿಸಿದ್ದಾರೆ’ ಎಂದು ಆರೋಪಿಸಿ ಮೃತರ ತಂದೆ ಹಾಲೇಶಯ್ಯ ಮಠದ್ ಅವರು ಹೊನ್ನಾಳಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.</p>.<p>ಇನ್ಸ್ಪೆಕ್ಟರ್ ಸುನೀಲ್ ಕುಮಾರ್ ಎಚ್. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಸ್ವೆಹಳ್ಳಿ:</strong> ಗ್ರಾಮದ ತುಂಗಾಭದ್ರಾ ನದಿ ದಡದಲ್ಲಿ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ.</p>.<p>ಬೈರನಹಳ್ಳಿಯ ಚೇತನ್ ಸ್ವಾಮಿ (31) ಮೃತರು.</p>.<p>ಬುಧವಾರ ಮಧ್ಯಾಹ್ನ ವಿನಯ ಕುಮಾರ್ ಎಂಬವರು ತಮ್ಮ ಅಡಿಕೆ ತೋಟಕ್ಕೆ ತೆರಳಿದ್ದಾಗ ದುರ್ವಾಸನೆ ಬಂದಿದೆ. ಹಳ್ಳದ ದಡದ ಬಳಿ ಪರಿಶೀಲಿಸಿದಾಗ ವ್ಯಕ್ತಿಯ ಮೃತದೇಹ ಭಾಗಶಃ ಸುಟ್ಟ ಸ್ಥಿತಿಯಲ್ಲಿ ಕಂಡುಬಂದಿದೆ. </p>.<p>‘ದುಷ್ಕರ್ಮಿಗಳು ಬೇರೆಡೆ ಕೊಲೆ ಮಾಡಿ, ಇಲ್ಲಿ ತಂದುಹಾಕಿ ಸಾಕ್ಷ್ಯ ನಾಶಕ್ಕೆ ಯತ್ನಿಸಿದ್ದಾರೆ’ ಎಂದು ಆರೋಪಿಸಿ ಮೃತರ ತಂದೆ ಹಾಲೇಶಯ್ಯ ಮಠದ್ ಅವರು ಹೊನ್ನಾಳಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.</p>.<p>ಇನ್ಸ್ಪೆಕ್ಟರ್ ಸುನೀಲ್ ಕುಮಾರ್ ಎಚ್. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>