<p><strong>ಸಾಸ್ವೆಹಳ್ಳಿ:</strong> ಕಲುಷಿತ ನೀರು ಕುಡಿದು ಏಳು ಜನರಲ್ಲಿ ವಾಂತಿ-ಭೇದಿ, ಜ್ವರದ ಲಕ್ಷಣ ಕಾಣಿಸಿಕೊಂಡ ಹುಣಸಘಟ್ಟ ಗ್ರಾಮದಲ್ಲಿ ₹14 ಲಕ್ಷ ವೆಚ್ಚದಲ್ಲಿ ಎರಡು ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲು ಅನುದಾನ ಮಂಜೂರು ಮಾಡಲಾಗಿದೆ ಎಂದು ಶಾಸಕ ಡಿ.ಜಿ ಶಾಂತನಗೌಡ ಹೇಳಿದರು.</p>.<p>ಗ್ರಾಮದ ನೈರ್ಮಲ್ಯ ಕಾಪಾಡುವುದು ಗ್ರಾಮ ಪಂಚಾಯಿತಿಯ ಕೆಲಸವಾಗಿದ್ದು, ಸ್ಥಳೀಯ ಅಧಿಕಾರಿಗಳು ಜನರಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಸ್ಥಳೀಯ ಸಮಸ್ಯೆಗಳನ್ನು ಗ್ರಾಮಾಡಳಿತ ಗಮನಿಸಿ ಪರಿಹರಿಸಬೇಕು ಎಂದು ಸಭೆಯಲ್ಲಿ ಅವರು ಸೂಚಿಸಿದರು.</p>.<p>ಹೊನ್ನಾಳಿ ಉಪವಿಭಾಗಾಧಿಕಾರಿ ವಿ.ಅಭಿಷೇಕ್, ತಹಶೀಲ್ದಾರ್ ಸುರೇಶ್ ನಾಯ್ಕ, ಗ್ರಾಮೀಣ ನೀರು ಸರಬರಾಜು ಇಲಾಖೆಯ ಎಇಇ ಸೋಮ್ಲಾನಾಯ್ಕ, ಕ್ಯಾಸಿನಕೆರೆ ಡಾ.ಜಿ.ಬಿ.ಚಂದ್ರಪ್ಪ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್, ಹೊನ್ನಾಳಿ ಪೊಲೀಸ್ ಠಾಣೆಯ ಪಿಐ ಸುನಿಲ್ ಕುಮಾರ್, ಗ್ರಾಮದ ಮುಖಂಡ ಎಚ್.ಎ ಗದ್ದಿಗೇಶ್ ಇದ್ದರು.</p>.<p>ಅಸ್ವಸ್ಥಗೊಂಡ ಏಳು ಜನರ ಪೈಕಿ ಮಹಿಳೆಯೊಬ್ಬರು ಮೃತಪಟ್ಟಿದ್ದು, ಆರು ಜನ ಗುಣಮುಖರಾಗಿದ್ದಾರೆ. ಶನಿವಾರ ಅಸ್ವಸ್ಥಗೊಂಡಿದ್ದ ಗ್ರಾಮದ ವ್ಯಕ್ತಿಯೊಬ್ಬರು ಕ್ಯಾಸಿನಕೆರೆ ಸರ್ಕಾರಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಸ್ವೆಹಳ್ಳಿ:</strong> ಕಲುಷಿತ ನೀರು ಕುಡಿದು ಏಳು ಜನರಲ್ಲಿ ವಾಂತಿ-ಭೇದಿ, ಜ್ವರದ ಲಕ್ಷಣ ಕಾಣಿಸಿಕೊಂಡ ಹುಣಸಘಟ್ಟ ಗ್ರಾಮದಲ್ಲಿ ₹14 ಲಕ್ಷ ವೆಚ್ಚದಲ್ಲಿ ಎರಡು ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲು ಅನುದಾನ ಮಂಜೂರು ಮಾಡಲಾಗಿದೆ ಎಂದು ಶಾಸಕ ಡಿ.ಜಿ ಶಾಂತನಗೌಡ ಹೇಳಿದರು.</p>.<p>ಗ್ರಾಮದ ನೈರ್ಮಲ್ಯ ಕಾಪಾಡುವುದು ಗ್ರಾಮ ಪಂಚಾಯಿತಿಯ ಕೆಲಸವಾಗಿದ್ದು, ಸ್ಥಳೀಯ ಅಧಿಕಾರಿಗಳು ಜನರಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಸ್ಥಳೀಯ ಸಮಸ್ಯೆಗಳನ್ನು ಗ್ರಾಮಾಡಳಿತ ಗಮನಿಸಿ ಪರಿಹರಿಸಬೇಕು ಎಂದು ಸಭೆಯಲ್ಲಿ ಅವರು ಸೂಚಿಸಿದರು.</p>.<p>ಹೊನ್ನಾಳಿ ಉಪವಿಭಾಗಾಧಿಕಾರಿ ವಿ.ಅಭಿಷೇಕ್, ತಹಶೀಲ್ದಾರ್ ಸುರೇಶ್ ನಾಯ್ಕ, ಗ್ರಾಮೀಣ ನೀರು ಸರಬರಾಜು ಇಲಾಖೆಯ ಎಇಇ ಸೋಮ್ಲಾನಾಯ್ಕ, ಕ್ಯಾಸಿನಕೆರೆ ಡಾ.ಜಿ.ಬಿ.ಚಂದ್ರಪ್ಪ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್, ಹೊನ್ನಾಳಿ ಪೊಲೀಸ್ ಠಾಣೆಯ ಪಿಐ ಸುನಿಲ್ ಕುಮಾರ್, ಗ್ರಾಮದ ಮುಖಂಡ ಎಚ್.ಎ ಗದ್ದಿಗೇಶ್ ಇದ್ದರು.</p>.<p>ಅಸ್ವಸ್ಥಗೊಂಡ ಏಳು ಜನರ ಪೈಕಿ ಮಹಿಳೆಯೊಬ್ಬರು ಮೃತಪಟ್ಟಿದ್ದು, ಆರು ಜನ ಗುಣಮುಖರಾಗಿದ್ದಾರೆ. ಶನಿವಾರ ಅಸ್ವಸ್ಥಗೊಂಡಿದ್ದ ಗ್ರಾಮದ ವ್ಯಕ್ತಿಯೊಬ್ಬರು ಕ್ಯಾಸಿನಕೆರೆ ಸರ್ಕಾರಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>