ಚನ್ನಗಿರಿ ತಾಲ್ಲೂಕು ಪಾಂಡೋಮಟ್ಟಿ ವಿರಕ್ತ ಮಠದಲ್ಲಿ ಭಾನುವಾರ ನಡೆದ ಬಸವತತ್ವ ಸಮ್ಮೇಳನದಲ್ಲಿ ನಾಡೋಜ ಡಾ. ವುಡೇ ಪಿ. ಕೃಷ್ಣ ಅವರಿಗೆ ವಿಶ್ವಗುರು ಬಸವ ಶ್ರೀಪ್ರಶಸ್ತಿ ನೀಡಿ ಗೌರವಿಸಲಾಯಿತು. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಗುರುಬಸವ ಸ್ವಾಮೀಜಿ ಇದ್ದರು.
ಗುರುಗಳ ಮಾರ್ಗದರ್ಶನ ಅಗತ್ಯ
ಸಮಾಜಕ್ಕೆ ಪೂರಕವಾಗಿ ಜಾತಿ ಧರ್ಮಗಳನ್ನು ಬದಿಗಿಟ್ಟು ಕಾರ್ಯನಿರ್ವಹಿಸಬೇಕು. ಸಂವಿಧಾನದ ಅಡಿಯಲ್ಲಿ ನಾವೆಲ್ಲಾ ಸೌಹಾರ್ದಯುತವಾಗಿ ಜೀವನ ನಡೆಸಬೇಕು. ಧರ್ಮ ಜಾತಿಯಲ್ಲಿ ಯಾವುದೇ ತಾರತಮ್ಯ ಮಾಡಲು ಹೋಗಬಾರದು. ಸಮಾಜಕ್ಕೆ ಗುರುಗಳ ಮಾರ್ಗದರ್ಶನ ಅಗತ್ಯವಾಗಿದ್ದು ಇಡೀ ಸಮಾಜಕ್ಕೆ ಗುರುಗಳು ದಿಕ್ಸೂಚಿಯಾಗಿರುತ್ತಾರೆ. ಸೋದರ ಸಮಾಜ ನಿರ್ಮಾಣ ಮಾಡುವ ಕಡೆಗೆ ನಾವೆಲ್ಲಾ ಹೆಜ್ಜೆ ಹಾಕೋಣ ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಹೇಳಿದರು.