<p><strong>ಜಗಳೂರು</strong>: ದಮನಿತ ಮಹಿಳಾ ಸಮುದಾಯಕ್ಕೆ ಶಿಕ್ಷಣ ಕಲ್ಪಿಸುವ ಮೂಲಕ ಸಮಾಜ ಪರಿವರ್ತನೆಗೆ ಶ್ರಮಿಸಿದ ದೇಶದ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಮಹಿಳಾ ಶಿಕ್ಷಣ ಪ್ರಗತಿಗೆ ಪ್ರೇರಣೆಯಾಗಿದ್ದಾರೆ ಎಂದು ವಕೀಲರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಮರೇನಹಳ್ಳಿ ಟಿ. ಬಸವರಾಜ್ ಅಭಿಪ್ರಾಯ ವ್ಯಕ್ತಪಡಿಸಿದರು.</p>.<p>ತಾಲ್ಲೂಕಿನ ದೊಣೆಹಳ್ಳಿ ಹೊಸಹಟ್ಟಿ ಸಮೀಪದ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಲ್ಲಿ ಮಾನವ ಬಂಧುತ್ವ ವೇದಿಕೆ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ ಸಾವಿತ್ರಿಬಾಯಿ ಫುಲೆ ಅವರ ಜಯಂತ್ಯುತ್ಸವ ಉದ್ಘಾಟಿಸಿ ಮಾತನಾಡಿದರು.</p>.<p>ಶತಮಾನಗಳಿಂದ ಮನುಸ್ಮೃತಿಯ ಸುಳಿಯಲ್ಲಿ ಸಿಲುಕಿ ಶೋಷಣೆಗೆ ಒಳಗಾಗಿದ್ದ ಮಹಿಳೆಯರಿಗೆ ಅಕ್ಷರ ಉಣಬಡಿಸಿ, ಸತಿಸಹಗಮನ ಪದ್ದತಿಯನ್ನು ಧಿಕ್ಕರಿಸಿ, ಅಸಮಾನತೆ, ಅಸ್ಪೃಶ್ಯತೆಗಳೆಲ್ಲವನ್ನು ತೊಡೆದುಹಾಕಿ ಸಾಮಾಜಿಕ ಸಮಾನತೆ ಸಾರಿದ್ದಾರೆ ಎಂದು ತಿಳಿಸಿದರು.</p>.<p>ವಿದ್ಯಾಭ್ಯಾಸದ ಹಂತದಲ್ಲಿ ವಿದ್ಯಾರ್ಥಿಗಳು ಮೂಢ ನಂಬಿಕೆ, ಮೌಡ್ಯಾಚರಣೆಗಳಿಗೆ ಒಳಗಾಗದೆ ವೈಚಾರಿಕ ಮತ್ತು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಪ್ರಗತಿಪರ ಒಕ್ಕೂಟದ ಅಧ್ಯಕ್ಷ ಸಣ್ಣೋಬಯ್ಯ ಸಲಹೆ ನೀಡಿದರು</p>.<p>ಮಹಿಳೆಯರ ಶಿಕ್ಷಣದ ಪರಿಕಲ್ಪನೆಗೆ ಫುಲೆ ದಂಪತಿ ಮುನ್ನುಡಿ ಬರೆದರೆ, ಅಂಬೇಡ್ಕರ್ ಅವರು ನೀರೆರೆದು ಪೋಷಿಸಿದರು ಎಂದು ಮಾನವ ಬಂದುತ್ವ ವೇದಿಕೆ ಜಿಲ್ಲಾ ಸಮಿತಿ ಸದಸ್ಯ ಧನ್ಯಕುಮಾರ್ ಹೇಳಿದರು.</p>.<p>ರಾಜ್ಯದ ಅತ್ಯಂತ ಸರಳ ಸಜ್ಜನಿಕೆ ರಾಜಕಾರಣಿ ಸತೀಶ್ ಜಾರಕಿಹೊಳಿ ಮಾನವ ಬಂಧುತ್ವ ವೇದಿಕೆ ಚಳುವಳಿ ಮೂಲಕ ಸಂವಿಧಾನ ಆಶಯಗಳನ್ನು ಎತ್ತಿ ಹಿಡಿಯುತ್ತಿದ್ದಾರೆ ಎಂದು ಪತ್ರಕರ್ತ ಅಣಬೂರು ಕೊಟ್ರೇಶ್ ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಪ್ರಾಂಶುಪಾಲ ಅಮರೇಶ್, ಉಪ ಪ್ರಾಂಶುಪಾಲ ತಿಪ್ಪೇಸ್ವಾಮಿ, ವಕೀಲರಾದ ಮರೇನಹಳ್ಳಿ ತಿಪ್ಪೇಸ್ವಾಮಿ , ನಾಗೇಶ್, ಗೋಗುದ್ದು ತಿಪ್ಪೇಸ್ವಾಮಿ, ಮುಖಂಡ ಎಚ್. ಮಹಬೂಬ್ ಆಲಿ, ಶಿಕ್ಷಕರಾದ ದಿಲೀಪ್ ಕುಮಾರ್ , ರವಿಕುಮಾರ್, ರವೀಂದ್ರ ಪತ್ತಾರ್, ಉದಯಕುಮಾರ್, ಪ್ರಿಯಾಂಕಾ, ಸಂತೋಷ್, ಕವಿತಾ ಇದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಗಳೂರು</strong>: ದಮನಿತ ಮಹಿಳಾ ಸಮುದಾಯಕ್ಕೆ ಶಿಕ್ಷಣ ಕಲ್ಪಿಸುವ ಮೂಲಕ ಸಮಾಜ ಪರಿವರ್ತನೆಗೆ ಶ್ರಮಿಸಿದ ದೇಶದ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಮಹಿಳಾ ಶಿಕ್ಷಣ ಪ್ರಗತಿಗೆ ಪ್ರೇರಣೆಯಾಗಿದ್ದಾರೆ ಎಂದು ವಕೀಲರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಮರೇನಹಳ್ಳಿ ಟಿ. ಬಸವರಾಜ್ ಅಭಿಪ್ರಾಯ ವ್ಯಕ್ತಪಡಿಸಿದರು.</p>.<p>ತಾಲ್ಲೂಕಿನ ದೊಣೆಹಳ್ಳಿ ಹೊಸಹಟ್ಟಿ ಸಮೀಪದ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಲ್ಲಿ ಮಾನವ ಬಂಧುತ್ವ ವೇದಿಕೆ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ ಸಾವಿತ್ರಿಬಾಯಿ ಫುಲೆ ಅವರ ಜಯಂತ್ಯುತ್ಸವ ಉದ್ಘಾಟಿಸಿ ಮಾತನಾಡಿದರು.</p>.<p>ಶತಮಾನಗಳಿಂದ ಮನುಸ್ಮೃತಿಯ ಸುಳಿಯಲ್ಲಿ ಸಿಲುಕಿ ಶೋಷಣೆಗೆ ಒಳಗಾಗಿದ್ದ ಮಹಿಳೆಯರಿಗೆ ಅಕ್ಷರ ಉಣಬಡಿಸಿ, ಸತಿಸಹಗಮನ ಪದ್ದತಿಯನ್ನು ಧಿಕ್ಕರಿಸಿ, ಅಸಮಾನತೆ, ಅಸ್ಪೃಶ್ಯತೆಗಳೆಲ್ಲವನ್ನು ತೊಡೆದುಹಾಕಿ ಸಾಮಾಜಿಕ ಸಮಾನತೆ ಸಾರಿದ್ದಾರೆ ಎಂದು ತಿಳಿಸಿದರು.</p>.<p>ವಿದ್ಯಾಭ್ಯಾಸದ ಹಂತದಲ್ಲಿ ವಿದ್ಯಾರ್ಥಿಗಳು ಮೂಢ ನಂಬಿಕೆ, ಮೌಡ್ಯಾಚರಣೆಗಳಿಗೆ ಒಳಗಾಗದೆ ವೈಚಾರಿಕ ಮತ್ತು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಪ್ರಗತಿಪರ ಒಕ್ಕೂಟದ ಅಧ್ಯಕ್ಷ ಸಣ್ಣೋಬಯ್ಯ ಸಲಹೆ ನೀಡಿದರು</p>.<p>ಮಹಿಳೆಯರ ಶಿಕ್ಷಣದ ಪರಿಕಲ್ಪನೆಗೆ ಫುಲೆ ದಂಪತಿ ಮುನ್ನುಡಿ ಬರೆದರೆ, ಅಂಬೇಡ್ಕರ್ ಅವರು ನೀರೆರೆದು ಪೋಷಿಸಿದರು ಎಂದು ಮಾನವ ಬಂದುತ್ವ ವೇದಿಕೆ ಜಿಲ್ಲಾ ಸಮಿತಿ ಸದಸ್ಯ ಧನ್ಯಕುಮಾರ್ ಹೇಳಿದರು.</p>.<p>ರಾಜ್ಯದ ಅತ್ಯಂತ ಸರಳ ಸಜ್ಜನಿಕೆ ರಾಜಕಾರಣಿ ಸತೀಶ್ ಜಾರಕಿಹೊಳಿ ಮಾನವ ಬಂಧುತ್ವ ವೇದಿಕೆ ಚಳುವಳಿ ಮೂಲಕ ಸಂವಿಧಾನ ಆಶಯಗಳನ್ನು ಎತ್ತಿ ಹಿಡಿಯುತ್ತಿದ್ದಾರೆ ಎಂದು ಪತ್ರಕರ್ತ ಅಣಬೂರು ಕೊಟ್ರೇಶ್ ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಪ್ರಾಂಶುಪಾಲ ಅಮರೇಶ್, ಉಪ ಪ್ರಾಂಶುಪಾಲ ತಿಪ್ಪೇಸ್ವಾಮಿ, ವಕೀಲರಾದ ಮರೇನಹಳ್ಳಿ ತಿಪ್ಪೇಸ್ವಾಮಿ , ನಾಗೇಶ್, ಗೋಗುದ್ದು ತಿಪ್ಪೇಸ್ವಾಮಿ, ಮುಖಂಡ ಎಚ್. ಮಹಬೂಬ್ ಆಲಿ, ಶಿಕ್ಷಕರಾದ ದಿಲೀಪ್ ಕುಮಾರ್ , ರವಿಕುಮಾರ್, ರವೀಂದ್ರ ಪತ್ತಾರ್, ಉದಯಕುಮಾರ್, ಪ್ರಿಯಾಂಕಾ, ಸಂತೋಷ್, ಕವಿತಾ ಇದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>