ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಸ್ಟೂರೇಶ್ವರ ದೇವಸ್ಥಾನದ ಶಿಲ್ಪ ಭಗ್ನಗೊಳಿಸಿದ ಕಿಡಿಗೇಡಿಗಳು

Last Updated 12 ಮೇ 2019, 6:37 IST
ಅಕ್ಷರ ಗಾತ್ರ

ಜಗಳೂರು: ತಾಲ್ಲೂಕಿನ ಮುಸ್ಟೂರು ಗ್ರಾಮದ ಮುಸ್ಟೂರೇಶ್ವರ ದೇವಸ್ಥಾನದ ಹೊರ ಮಠದಲ್ಲಿರುವ ಶಿಲ್ಪಗಳನ್ನು ಕಿಡಿಗೇಡಿಗಳು ಶುಕ್ರವಾರ ರಾತ್ರಿ ಭಗ್ನಗೊಳಿಸಿದ್ದಾರೆ.

ಮುಸ್ಟೂರೇಶ್ವರ ಸ್ವಾಮಿ ಹಾಗೂ ಇತರ ದೇವರ ಶಿಲ್ಪಗಳ ಅಂಗಾಂಗಗಳನ್ನು ತುಂಡರಿಸಿ ವಿರೂಪಗೊಳಿಸಲಾಗಿದೆ. ಈ ಹಿಂದೆಯೂ ಹಲವು ಬಾರಿ ಕಿಡಿಗೇಡಿಗಳು ಇದೇ ರೀತಿ ಶಿಲ್ಪಗಳನ್ನು ವಿರೂಪಗೊಳಿಸಿದ್ದರು ಎಂದು ಗ್ರಾಮಸ್ಥರು ದೂರಿದ್ದಾರೆ.

ಆರೋಪಿಗಳನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಗ್ರಾಮದ ಮುಖಂಡರು ಜಗಳೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT