<p><strong>ಹೊನ್ನಾಳಿ: ‘</strong>ಶೈಕ್ಷಣಿಕ ಕ್ಷೇತ್ರದಲ್ಲಿ ಸರ್ಕಾರದಿಂದ ದೊರೆಯುವ ಎಲ್ಲ ಸೌಲಭ್ಯಗಳನ್ನು ಸದುಪಯೋಗ ಮಾಡಿಕೊಳ್ಳಬೇಕು. ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಬೇಕು’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿದೇಶಕ ಜಿ. ಕೊಟ್ರೇಶ್ ಹೇಳಿದರು. </p>.<p>ಪಟ್ಟಣದ ಟಿಬಿ ವೃತ್ತದ ಬಳಿ ಇರುವ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ಹಾಗೂ ಸಮವಸ್ತ್ರ ವಿತರಿಸಿ ಅವರು ಮಾತನಾಡಿದರು. </p>.<p>‘ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ, ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ, ಉಚಿತ ಪಠ್ಯಪುಸ್ತಕಗಳು ಸೇರಿದಂತೆ ಅನೇಕ ಸೌಲಭ್ಯಗಳಿವೆ’ ಎಂದರು. </p>.<p>ಮುಖ್ಯ ಶಿಕ್ಷಕರಿಗೆ ತರಾಟೆ: </p>.<p>ಶಾಲಾ ಪ್ರಾರಂಭೋತ್ಸವ ಎಂದು ತಿಳಿದಿದ್ದರೂ ಶಾಲಾ ಕಟ್ಟಡ, ಕೊಠಡಿಗಳಿಗೆ ತಳಿರು ತೋರಣ ಕಟ್ಟದೇ ಯಾವುದೇ ಅಲಂಕಾರ ಮಾಡದೇ ಇರುವುದನ್ನು ಕಂಡ ಉಪ ನಿರ್ದೇಶಕರು ಮುಖ್ಯ ಶಿಕ್ಷಕರ ವಿರುದ್ಧ ಕೆಂಡಾಮಂಡಲವಾದರು.</p>.<p>‘ಬೇಸಿಗೆ ರಜೆ ಕಳೆದು ಶಾಲೆಗಳು ಪುನರ್ ಆರಂಭಂಗೊಳ್ಳುವ ಈ ಹೊತ್ತಿನಲ್ಲೂ ಶಾಲೆಯನ್ನು ಮಕ್ಕಳ ಸ್ವಾಗತಕ್ಕೆ ಸಜ್ಜು ಮಾಡಿಲ್ಲ, ಗ್ರಾಮಾಂತರ ಪ್ರದೇಶಗಳ ಸರ್ಕಾರಿ ಶಾಲೆಗಳಲ್ಲಿ ಮಾವಿನ ಎಲೆ, ಬಾಳೆಕಂಬ ಹಾಗೂ ಹೂವುಗಳಿಂದ ಶೃಂಗರಿಸಿದ್ದಾರೆ. ಪಟ್ಟಣದಲ್ಲಿದ್ದುಕೊಂಡು ನೀವು ತಳಿರುತೋರಣ ಕಟ್ಟಿಲ್ಲ ಏಕೆ’ ಎಂದು ಪ್ರಶ್ನಿಸಿದರು.</p>.<p>ಬಿಇಒ ಕಚೇರಿ ಪಕ್ಕದ ಆವರಣದಲ್ಲಿಯೇ ಇರುವ ಈ ಶಾಲೆಗೆ ಈ ಸ್ಥಿತಿ ಉಂಟಾದರೆ ಹೇಗೆ ಎಂದು ಪ್ರಶ್ನಿಸಿದ ಅವರು, ದೀಪದ ಬುಡದಲ್ಲಿ ಕತ್ತಲು ಎನ್ನುವಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. </p>.<p>ಈ ನಿರ್ಲಕ್ಷ್ಯದ ಬಗ್ಗೆ ನೋಟಿಸ್ ನೀಡಿ ಕ್ರಮಕೈಗೊಳ್ಳುವಂತೆ ಸ್ಥಳದಲ್ಲಿದ್ದ ಬಿಇಒಗೆ ಸೂಚನೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊನ್ನಾಳಿ: ‘</strong>ಶೈಕ್ಷಣಿಕ ಕ್ಷೇತ್ರದಲ್ಲಿ ಸರ್ಕಾರದಿಂದ ದೊರೆಯುವ ಎಲ್ಲ ಸೌಲಭ್ಯಗಳನ್ನು ಸದುಪಯೋಗ ಮಾಡಿಕೊಳ್ಳಬೇಕು. ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಬೇಕು’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿದೇಶಕ ಜಿ. ಕೊಟ್ರೇಶ್ ಹೇಳಿದರು. </p>.<p>ಪಟ್ಟಣದ ಟಿಬಿ ವೃತ್ತದ ಬಳಿ ಇರುವ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ಹಾಗೂ ಸಮವಸ್ತ್ರ ವಿತರಿಸಿ ಅವರು ಮಾತನಾಡಿದರು. </p>.<p>‘ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ, ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ, ಉಚಿತ ಪಠ್ಯಪುಸ್ತಕಗಳು ಸೇರಿದಂತೆ ಅನೇಕ ಸೌಲಭ್ಯಗಳಿವೆ’ ಎಂದರು. </p>.<p>ಮುಖ್ಯ ಶಿಕ್ಷಕರಿಗೆ ತರಾಟೆ: </p>.<p>ಶಾಲಾ ಪ್ರಾರಂಭೋತ್ಸವ ಎಂದು ತಿಳಿದಿದ್ದರೂ ಶಾಲಾ ಕಟ್ಟಡ, ಕೊಠಡಿಗಳಿಗೆ ತಳಿರು ತೋರಣ ಕಟ್ಟದೇ ಯಾವುದೇ ಅಲಂಕಾರ ಮಾಡದೇ ಇರುವುದನ್ನು ಕಂಡ ಉಪ ನಿರ್ದೇಶಕರು ಮುಖ್ಯ ಶಿಕ್ಷಕರ ವಿರುದ್ಧ ಕೆಂಡಾಮಂಡಲವಾದರು.</p>.<p>‘ಬೇಸಿಗೆ ರಜೆ ಕಳೆದು ಶಾಲೆಗಳು ಪುನರ್ ಆರಂಭಂಗೊಳ್ಳುವ ಈ ಹೊತ್ತಿನಲ್ಲೂ ಶಾಲೆಯನ್ನು ಮಕ್ಕಳ ಸ್ವಾಗತಕ್ಕೆ ಸಜ್ಜು ಮಾಡಿಲ್ಲ, ಗ್ರಾಮಾಂತರ ಪ್ರದೇಶಗಳ ಸರ್ಕಾರಿ ಶಾಲೆಗಳಲ್ಲಿ ಮಾವಿನ ಎಲೆ, ಬಾಳೆಕಂಬ ಹಾಗೂ ಹೂವುಗಳಿಂದ ಶೃಂಗರಿಸಿದ್ದಾರೆ. ಪಟ್ಟಣದಲ್ಲಿದ್ದುಕೊಂಡು ನೀವು ತಳಿರುತೋರಣ ಕಟ್ಟಿಲ್ಲ ಏಕೆ’ ಎಂದು ಪ್ರಶ್ನಿಸಿದರು.</p>.<p>ಬಿಇಒ ಕಚೇರಿ ಪಕ್ಕದ ಆವರಣದಲ್ಲಿಯೇ ಇರುವ ಈ ಶಾಲೆಗೆ ಈ ಸ್ಥಿತಿ ಉಂಟಾದರೆ ಹೇಗೆ ಎಂದು ಪ್ರಶ್ನಿಸಿದ ಅವರು, ದೀಪದ ಬುಡದಲ್ಲಿ ಕತ್ತಲು ಎನ್ನುವಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. </p>.<p>ಈ ನಿರ್ಲಕ್ಷ್ಯದ ಬಗ್ಗೆ ನೋಟಿಸ್ ನೀಡಿ ಕ್ರಮಕೈಗೊಳ್ಳುವಂತೆ ಸ್ಥಳದಲ್ಲಿದ್ದ ಬಿಇಒಗೆ ಸೂಚನೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>