<p><strong>ದಾವಣಗೆರೆ</strong>: ಪರಿಶಿಷ್ಟ ಜಾತಿ ಉಪಯೋಜನೆ (ಎಸ್ಸಿಎಸ್ಪಿ) ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ (ಟಿಎಸ್ಪಿ) ಅನ್ವಯ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಜಿಲ್ಲೆಗೆ ₹ 345.5 ಕೋಟಿ ಅನುದಾನ ನಿಗದಿಯಾಗಿದ್ದು, ಈ ಪೈಕಿ ₹ 125 ಕೋಟಿ ಅನುದಾನ ಬಿಡುಗಡೆಯಾಗಿದೆ.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಅನುದಾನದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಮಾಹಿತಿ ನೀಡಲಾಯಿತು.</p>.<p>‘ಕ್ರಿಯಾ ಯೋಜನೆಯ ಅನ್ವಯ ಬಿಡುಗಡೆಯಾದ ಮೊತ್ತದಲ್ಲಿ ₹ 98 ಕೋಟಿ ವೆಚ್ಚ ಮಾಡಲಾಗಿದೆ. ನಿಗದಿತ ಗುರಿಯಲ್ಲಿ ಶೇ 28ರಷ್ಟು ಸಾಧನೆ ಮಾಡಲಾಗಿದೆ. ನಿಗದಿತ ಕಾಲಮಿತಿಯಲ್ಲಿ ಅನುದಾನ ಬಳಕೆ ಮಾಡಬೇಕು’ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಎಲ್ಲ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ಅನುದಾನ ಬಳಕೆಗೆ ಇರಲಿ ಎಚ್ಚರ:</p>.<p>ಎಸ್ಸಿಎಸ್ಪಿ–ಟಿಎಸ್ಪಿ ಯೋಜನೆಯಡಿ ಮೂಲಸೌಲಭ್ಯ ಕಲ್ಪಿಸುವಾಗ ಅನುದಾನವನ್ನು ಎಚ್ಚರಿಕೆಯಿಂದ ಬಳಸಬೇಕು. ಪರಿಶಿಷ್ಟ ಸಮುದಾಯ ಹೆಚ್ಚಿರುವ ಕಡೆಗೆ ಮಾತ್ರ ಅನುದಾನ ವಿನಿಯೋಗ ಮಾಡಬೇಕು. ಜನಸಂಖ್ಯೆ ಇಲ್ಲದಿರುವ ಸ್ಥಳದಲ್ಲಿ ಅನುದಾನ ಬಳಸಿದರೆ ಸಂಬಂಧಪಟ್ಟ ಅಧಿಕಾರಿಗಳನ್ನು ಹೊಣೆ ಮಾಡಬೇಕಾಗುತ್ತದೆ’ ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದರು.</p>.<p>‘ಇಲಾಖೆಗಳು ಸಲ್ಲಿಸಿದ ಕ್ರಿಯಾ ಯೋಜನೆಯ ಅನ್ವಯ ಅನುದಾನ ಬಿಡುಗಡೆಯಾಗಿದೆ. ಸಂಬಂಧಿಸಿದ ಫಲಾನುಭವಿಗಳಿಂದ ಮೊದಲೇ ಅರ್ಜಿ ಆಹ್ವಾನಿಸಬೇಕು. ಈ ಯೋಜನೆಯನ್ವಯ ಸೃಜಿಸುವ ಆಸ್ತಿ ಹಾಗೂ ಕೈಗೊಳ್ಳುವ ಅಭಿವೃದ್ಧಿ ಕಾಮಗಾರಿಯಿಂದ ಪರಿಶಿಷ್ಟ ಸಮುದಾಯಕ್ಕೆ ಅನುಕೂಲವಾಗಬೇಕು’ ಎಂದು ಕಿವಿಮಾತು ಹೇಳಿದರು.</p>.<p>‘ವಿದ್ಯುತ್ ಮೂಲಸೌಲಭ್ಯ ಕಲ್ಪಿಸಲು ಹರಿಹರದ ಬೆಸ್ಕಾಂ ವಿಭಾಗಕ್ಕೆ ಪರಿಶಿಷ್ಟ ಜಾತಿ ಉಪಯೋಜನೆಯಡಿ ₹ 70 ಲಕ್ಷ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯಡಿ ₹ 35 ಲಕ್ಷ ಬಿಡುಗಡೆಯಾಗಿದೆ’ ಎಂಬ ಮಾಹಿತಿಯನ್ನು ‘ಬೆಸ್ಕಾಂ’ ಅಧಿಕಾರಿ ಸಭೆಗೆ ನೀಡಿದರು.</p>.<p>ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೆ.ನಾಗರಾಜ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹಂತೇಶ್ ಇದ್ದರು.</p>.<p>Highlights - ಜನಸಂಖ್ಯೆ ಹೆಚ್ಚಿರುವೆಡೆ ಅನುದಾನ ಬಳಸಿ ಕಾಲಮಿತಿಯಲ್ಲಿ ಬಳಕೆಯಾಗಬೇಕು ಅನುದಾನ ಅರ್ಜಿ ಆಹ್ವಾನಿಸಿ ಫಲಾನುಭವಿ ಆಯ್ಕೆ ಮಾಡಿ</p>.<p>Quote - ಫಲಾನುಭವಿಗಳ ಆಯ್ಕೆಯನ್ನು ‘ಬೆಸ್ಕಾಂ’ ಕಾಲಮಿತಿಯಲ್ಲಿ ಪೂರ್ಣಗೊಳ್ಳಬೇಕು. ಅಧಿಕ ಮಳೆಯಿಂದ ಹಾಳಾಗಿರುವ ಹೊನ್ನಾಳಿ ಆಸ್ಪತ್ರೆಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಪರಿಶೀಲಿಸಿ ವರದಿ ನೀಡಬೇಕು. ಜಿ.ಎಂ.ಗಂಗಾಧರಸ್ವಾಮಿ ಜಿಲ್ಲಾಧಿಕಾರಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಪರಿಶಿಷ್ಟ ಜಾತಿ ಉಪಯೋಜನೆ (ಎಸ್ಸಿಎಸ್ಪಿ) ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ (ಟಿಎಸ್ಪಿ) ಅನ್ವಯ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಜಿಲ್ಲೆಗೆ ₹ 345.5 ಕೋಟಿ ಅನುದಾನ ನಿಗದಿಯಾಗಿದ್ದು, ಈ ಪೈಕಿ ₹ 125 ಕೋಟಿ ಅನುದಾನ ಬಿಡುಗಡೆಯಾಗಿದೆ.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಅನುದಾನದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಮಾಹಿತಿ ನೀಡಲಾಯಿತು.</p>.<p>‘ಕ್ರಿಯಾ ಯೋಜನೆಯ ಅನ್ವಯ ಬಿಡುಗಡೆಯಾದ ಮೊತ್ತದಲ್ಲಿ ₹ 98 ಕೋಟಿ ವೆಚ್ಚ ಮಾಡಲಾಗಿದೆ. ನಿಗದಿತ ಗುರಿಯಲ್ಲಿ ಶೇ 28ರಷ್ಟು ಸಾಧನೆ ಮಾಡಲಾಗಿದೆ. ನಿಗದಿತ ಕಾಲಮಿತಿಯಲ್ಲಿ ಅನುದಾನ ಬಳಕೆ ಮಾಡಬೇಕು’ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಎಲ್ಲ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ಅನುದಾನ ಬಳಕೆಗೆ ಇರಲಿ ಎಚ್ಚರ:</p>.<p>ಎಸ್ಸಿಎಸ್ಪಿ–ಟಿಎಸ್ಪಿ ಯೋಜನೆಯಡಿ ಮೂಲಸೌಲಭ್ಯ ಕಲ್ಪಿಸುವಾಗ ಅನುದಾನವನ್ನು ಎಚ್ಚರಿಕೆಯಿಂದ ಬಳಸಬೇಕು. ಪರಿಶಿಷ್ಟ ಸಮುದಾಯ ಹೆಚ್ಚಿರುವ ಕಡೆಗೆ ಮಾತ್ರ ಅನುದಾನ ವಿನಿಯೋಗ ಮಾಡಬೇಕು. ಜನಸಂಖ್ಯೆ ಇಲ್ಲದಿರುವ ಸ್ಥಳದಲ್ಲಿ ಅನುದಾನ ಬಳಸಿದರೆ ಸಂಬಂಧಪಟ್ಟ ಅಧಿಕಾರಿಗಳನ್ನು ಹೊಣೆ ಮಾಡಬೇಕಾಗುತ್ತದೆ’ ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದರು.</p>.<p>‘ಇಲಾಖೆಗಳು ಸಲ್ಲಿಸಿದ ಕ್ರಿಯಾ ಯೋಜನೆಯ ಅನ್ವಯ ಅನುದಾನ ಬಿಡುಗಡೆಯಾಗಿದೆ. ಸಂಬಂಧಿಸಿದ ಫಲಾನುಭವಿಗಳಿಂದ ಮೊದಲೇ ಅರ್ಜಿ ಆಹ್ವಾನಿಸಬೇಕು. ಈ ಯೋಜನೆಯನ್ವಯ ಸೃಜಿಸುವ ಆಸ್ತಿ ಹಾಗೂ ಕೈಗೊಳ್ಳುವ ಅಭಿವೃದ್ಧಿ ಕಾಮಗಾರಿಯಿಂದ ಪರಿಶಿಷ್ಟ ಸಮುದಾಯಕ್ಕೆ ಅನುಕೂಲವಾಗಬೇಕು’ ಎಂದು ಕಿವಿಮಾತು ಹೇಳಿದರು.</p>.<p>‘ವಿದ್ಯುತ್ ಮೂಲಸೌಲಭ್ಯ ಕಲ್ಪಿಸಲು ಹರಿಹರದ ಬೆಸ್ಕಾಂ ವಿಭಾಗಕ್ಕೆ ಪರಿಶಿಷ್ಟ ಜಾತಿ ಉಪಯೋಜನೆಯಡಿ ₹ 70 ಲಕ್ಷ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯಡಿ ₹ 35 ಲಕ್ಷ ಬಿಡುಗಡೆಯಾಗಿದೆ’ ಎಂಬ ಮಾಹಿತಿಯನ್ನು ‘ಬೆಸ್ಕಾಂ’ ಅಧಿಕಾರಿ ಸಭೆಗೆ ನೀಡಿದರು.</p>.<p>ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೆ.ನಾಗರಾಜ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹಂತೇಶ್ ಇದ್ದರು.</p>.<p>Highlights - ಜನಸಂಖ್ಯೆ ಹೆಚ್ಚಿರುವೆಡೆ ಅನುದಾನ ಬಳಸಿ ಕಾಲಮಿತಿಯಲ್ಲಿ ಬಳಕೆಯಾಗಬೇಕು ಅನುದಾನ ಅರ್ಜಿ ಆಹ್ವಾನಿಸಿ ಫಲಾನುಭವಿ ಆಯ್ಕೆ ಮಾಡಿ</p>.<p>Quote - ಫಲಾನುಭವಿಗಳ ಆಯ್ಕೆಯನ್ನು ‘ಬೆಸ್ಕಾಂ’ ಕಾಲಮಿತಿಯಲ್ಲಿ ಪೂರ್ಣಗೊಳ್ಳಬೇಕು. ಅಧಿಕ ಮಳೆಯಿಂದ ಹಾಳಾಗಿರುವ ಹೊನ್ನಾಳಿ ಆಸ್ಪತ್ರೆಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಪರಿಶೀಲಿಸಿ ವರದಿ ನೀಡಬೇಕು. ಜಿ.ಎಂ.ಗಂಗಾಧರಸ್ವಾಮಿ ಜಿಲ್ಲಾಧಿಕಾರಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>