<p>ಪ್ರಜಾವಾಣಿ ವಾರ್ತೆ</p>.<p>ದಾವಣಗೆರೆ: ನಗರದ ವಿವಿಧ ಬಡಾವಣೆಗಳಲ್ಲಿ ಬೈಕ್ ಕಳ್ಳತನ ಮಾಡಿದ್ದ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನನ್ನು ಪೊಲೀಸರು ಸೋಮವಾರ ಬಂಧಿಸಿದ್ದು, ಆತನಿಂದ ₹ 1.05 ಲಕ್ಷ ಮೌಲ್ಯದ ಐದು ಬೈಕ್ಗಳನ್ನು ವಶಪಡಿಸಿಕೊಂಡಿದ್ದಾರೆ.</p>.<p>ಬಡಾವಣೆ ಠಾಣೆಯ ಪಿಎಸ್ಐ ಚಿದಾನಂದಪ್ಪ ಅವರು ರೈಲ್ವೆ ಸ್ಟೇಷನ್ ಮುಂಭಾಗ ಗಸ್ತಿನಲ್ಲಿದ್ದ ವೇಳೆ ಈ ಬಾಲಕ ಬೈಕ್ನಲ್ಲಿ ಬಂದಿದ್ದ. ಆತನನ್ನು ವಿಚಾರಿಸಿದಾಗ ಸಮಂಜಸ ಉತ್ತರ ನೀಡಲಿಲ್ಲ. ಬಳಿಕ ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸಿದಾಗ ಕೆಲವು ತಿಂಗಳಿಂದ ನಗರದ ಪಿ.ಜೆ. ಬಡಾವಣೆ, ಗುಂಡಿ ಸರ್ಕಲ್ , ಎಂಸಿಸಿ ‘ಎ’ ಬ್ಲಾಕ್ , ಕೆ.ಬಿ ಬಡಾವಣೆಗಳಲ್ಲಿ ಬೈಕ್ಗಳನ್ನು ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.</p>.<p>ಬಡಾವಣೆ ಠಾಣೆಯಲ್ಲಿ 4 ಹಾಗೂ ಕೆಟಿಜೆ ನಗರ ಠಾಣೆಯಲ್ಲಿ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ 5 ಬೈಕ್ಗಳನ್ನು ವಶಕ್ಕೆ ಪಡೆಯಲಾಗಿದೆ.</p>.<p>ಡಿವೈಎಸ್ಪಿ ನಾಗೇಶ್ ಐತಾಳ್ ಮಾರ್ಗದರ್ಶನದಲ್ಲಿ ಬಡಾವಣೆ ಠಾಣೆಯ ಪಿಎಸ್ಐ ಸುರೇಶ್ ಸಗರಿ ನೇತೃತ್ವದಲ್ಲಿ ಪಿಎಸ್ಐ ಅರವಿಂದ ಬಿ.ಎಸ್, ಹರೀಶ್ ರೆಡ್ಡಿ, ಸಿದ್ದೇಶ್, ಅರುಣಕುಮಾರ್, ಸೈಯದ್ ಅಲಿ, ವಿಶಾಲಾಕ್ಷಿ, ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p>ದಾವಣಗೆರೆ: ನಗರದ ವಿವಿಧ ಬಡಾವಣೆಗಳಲ್ಲಿ ಬೈಕ್ ಕಳ್ಳತನ ಮಾಡಿದ್ದ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನನ್ನು ಪೊಲೀಸರು ಸೋಮವಾರ ಬಂಧಿಸಿದ್ದು, ಆತನಿಂದ ₹ 1.05 ಲಕ್ಷ ಮೌಲ್ಯದ ಐದು ಬೈಕ್ಗಳನ್ನು ವಶಪಡಿಸಿಕೊಂಡಿದ್ದಾರೆ.</p>.<p>ಬಡಾವಣೆ ಠಾಣೆಯ ಪಿಎಸ್ಐ ಚಿದಾನಂದಪ್ಪ ಅವರು ರೈಲ್ವೆ ಸ್ಟೇಷನ್ ಮುಂಭಾಗ ಗಸ್ತಿನಲ್ಲಿದ್ದ ವೇಳೆ ಈ ಬಾಲಕ ಬೈಕ್ನಲ್ಲಿ ಬಂದಿದ್ದ. ಆತನನ್ನು ವಿಚಾರಿಸಿದಾಗ ಸಮಂಜಸ ಉತ್ತರ ನೀಡಲಿಲ್ಲ. ಬಳಿಕ ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸಿದಾಗ ಕೆಲವು ತಿಂಗಳಿಂದ ನಗರದ ಪಿ.ಜೆ. ಬಡಾವಣೆ, ಗುಂಡಿ ಸರ್ಕಲ್ , ಎಂಸಿಸಿ ‘ಎ’ ಬ್ಲಾಕ್ , ಕೆ.ಬಿ ಬಡಾವಣೆಗಳಲ್ಲಿ ಬೈಕ್ಗಳನ್ನು ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.</p>.<p>ಬಡಾವಣೆ ಠಾಣೆಯಲ್ಲಿ 4 ಹಾಗೂ ಕೆಟಿಜೆ ನಗರ ಠಾಣೆಯಲ್ಲಿ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ 5 ಬೈಕ್ಗಳನ್ನು ವಶಕ್ಕೆ ಪಡೆಯಲಾಗಿದೆ.</p>.<p>ಡಿವೈಎಸ್ಪಿ ನಾಗೇಶ್ ಐತಾಳ್ ಮಾರ್ಗದರ್ಶನದಲ್ಲಿ ಬಡಾವಣೆ ಠಾಣೆಯ ಪಿಎಸ್ಐ ಸುರೇಶ್ ಸಗರಿ ನೇತೃತ್ವದಲ್ಲಿ ಪಿಎಸ್ಐ ಅರವಿಂದ ಬಿ.ಎಸ್, ಹರೀಶ್ ರೆಡ್ಡಿ, ಸಿದ್ದೇಶ್, ಅರುಣಕುಮಾರ್, ಸೈಯದ್ ಅಲಿ, ವಿಶಾಲಾಕ್ಷಿ, ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>