ಆಸ್ಪತ್ರೆಯಲ್ಲಿ ಪ್ರತಿದಿನ ಚೆಕ್ಅಪ್ ಮಾಡುತ್ತಿದ್ದರು. ಯಾವುದೇ ಸಮಸ್ಯೆ ಇಲ್ಲದೇ ಸೋಂಕುಮುಕ್ತರಾಗಿ ಬಿಡುಗಡೆಗೊಂಡಿದ್ದೇವೆ. ಜಿಲ್ಲಾಧಿಕಾರಿ, ಎಸ್ಪಿ ಕಾಳಜಿ ವಹಿಸಿದರು. ಅವರಿಗೆ ಕೃತಜ್ಞತೆಗಳು. ಕೊರೊನಾ ಬಂದವರನ್ನು ಕೀಳಾಗಿ ನೋಡಬೇಡಿ. ಇವತ್ತು ಕೀಳಾಗಿ ನೋಡಿದವರಿಗೇ ನಾಳೆ ಕೊರೊನಾ ಬರಬಹುದು. ಬಂದರೆ ಗುಣಮುಖರಾಗುವುದರಲ್ಲಿ ಅನುಮಾನವಿಲ್ಲ. ಬೇಕೆಂದೇ ಯಾರೂ ಕೊರೊನಾ ಸೋಂಕಿಗೆ ಒಳಗಾಗುವುದಿಲ್ಲ ಎಂದು ಹೇಳಿದರು.