<p><strong>ದಾವಣಗೆರೆ:</strong> ಲಾಕ್ಡೌನ್ ಸಡಿಲಿಕೆ ಮಾಡಿ ಬಸ್ಗಳ ಓಡಾಟಕ್ಕೆ ಸರ್ಕಾರ ಅವಕಾಶ ಮಾಡಿಕೊಟ್ಟಿದ್ದರಿಂದ ಸೋಮವಾರ 80 ಕೆಎಸ್ಆರ್ಟಿಸಿ ಬಸ್ಗಳು ಸಂಚಾರ ನಡೆಸಿದವು. ಸುಮಾರು ಎರಡೂವರೆ ತಿಂಗಳ ಬಳಿಕ ಬಸ್ಗಳು ರಸ್ತೆಗಿಳಿದವು.</p>.<p>ದಾವಣಗೆರೆಯಿಂದ ಮೊದಲ ಬಸ್ ಬೆಂಗಳೂರಿನ ಕಡೆ ಹೊರಟಿತು. ಚಿತ್ರದುರ್ಗ, ಶಿವಮೊಗ್ಗ, ರಾಣೆಬೆನ್ನೂರು ಸಹಿತ ಜಿಲ್ಲೆಯ ಹೊರೆಗೆ ಹಲವು ಬಸ್ಗಳು ಹೋದವು. ಹರಿಹರ, ಜಗಳೂರು, ಚನ್ನಗಿರಿ, ಹೊನ್ನಾಳಿ, ನ್ಯಾಮತಿ ಮುಂತಾದ ತಾಲ್ಲೂಕು ಕೇಂದ್ರಗಳಿಗೂ ಬಸ್ಗಳು ಸಂಚರಿಸಿದವು.</p>.<p>‘ಪ್ರಮುಖ ರಸ್ತೆಗಳಲ್ಲಿ ಬಸ್ಗಳು ಓಡಾಟ ನಡೆಸಿವೆ. ಆದರೆ ಹಳ್ಳಿಗಳಿಗೆ ಒಳರಸ್ತೆಗಳಲ್ಲಿ ಹೋಗಬೇಕಾದಲ್ಲಿಗೆ ಬಸ್ ಬಿಟ್ಟಿಲ್ಲ. ಪ್ರತಿ ಬಸ್ನಲ್ಲಿ 25 ಸೀಟ್ಗಳಾಗದೇ ಬಿಟ್ಟಿಲ್ಲ. ಮಧ್ಯಾಹ್ನ 2 ಗಂಟೆಯವರೆಗೆ ಬಸ್ಗಳಿಗೆ ಜನ ಇದ್ದರು. ಆಮೇಲೆ ಜನರೇ ಇರಲಿಲ್ಲ. 2 ಗಂಟೆಯ ಬಳಿಕವೂ ಬಸ್ ಸಂಚಾರಕ್ಕೆ ಅವಕಾಶ ಇತ್ತು. ಪ್ರಯಾಣಿಕರು ಇಲ್ಲದ ಕಾರಣ ಬಸ್ಗಳ ಓಡಾಟ ನಿಲ್ಲಿಸಲಾಯಿತು’ ಎಂದು ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಸಿದ್ದೇಶ್ವರ ಹೆಬ್ಬಾಳ್ ಪ್ರಜಾವಾಣಿಗೆ ತಿಳಿಸಿದ್ದಾರೆ.</p>.<p>ಪ್ರತಿ ಬಸ್ನಲ್ಲಿ ಶೇ 50ಕ್ಕಿಂತ ಅಧಿಕ ಪ್ರಯಾಣಿಕರು ಹೋಗದಂತೆ ನೋಡಿಕೊಳ್ಳಲಾಗಿದೆ. ಒಂದುಸೀಟ್ ನಲ್ಲಿ ಒಬ್ಬರಿಗೆ ಮಾತ್ರ ಅವಕಾಶ ಕೊಡಲಾಗಿದೆ. ಲಸಿಕೆ ಹಾಕಿಕೊಂಡಿರುವ ಚಾಲಕರು, ನಿರ್ವಾಹಕರನ್ನು ಬಳಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಲಾಕ್ಡೌನ್ ಸಡಿಲಿಕೆ ಮಾಡಿ ಬಸ್ಗಳ ಓಡಾಟಕ್ಕೆ ಸರ್ಕಾರ ಅವಕಾಶ ಮಾಡಿಕೊಟ್ಟಿದ್ದರಿಂದ ಸೋಮವಾರ 80 ಕೆಎಸ್ಆರ್ಟಿಸಿ ಬಸ್ಗಳು ಸಂಚಾರ ನಡೆಸಿದವು. ಸುಮಾರು ಎರಡೂವರೆ ತಿಂಗಳ ಬಳಿಕ ಬಸ್ಗಳು ರಸ್ತೆಗಿಳಿದವು.</p>.<p>ದಾವಣಗೆರೆಯಿಂದ ಮೊದಲ ಬಸ್ ಬೆಂಗಳೂರಿನ ಕಡೆ ಹೊರಟಿತು. ಚಿತ್ರದುರ್ಗ, ಶಿವಮೊಗ್ಗ, ರಾಣೆಬೆನ್ನೂರು ಸಹಿತ ಜಿಲ್ಲೆಯ ಹೊರೆಗೆ ಹಲವು ಬಸ್ಗಳು ಹೋದವು. ಹರಿಹರ, ಜಗಳೂರು, ಚನ್ನಗಿರಿ, ಹೊನ್ನಾಳಿ, ನ್ಯಾಮತಿ ಮುಂತಾದ ತಾಲ್ಲೂಕು ಕೇಂದ್ರಗಳಿಗೂ ಬಸ್ಗಳು ಸಂಚರಿಸಿದವು.</p>.<p>‘ಪ್ರಮುಖ ರಸ್ತೆಗಳಲ್ಲಿ ಬಸ್ಗಳು ಓಡಾಟ ನಡೆಸಿವೆ. ಆದರೆ ಹಳ್ಳಿಗಳಿಗೆ ಒಳರಸ್ತೆಗಳಲ್ಲಿ ಹೋಗಬೇಕಾದಲ್ಲಿಗೆ ಬಸ್ ಬಿಟ್ಟಿಲ್ಲ. ಪ್ರತಿ ಬಸ್ನಲ್ಲಿ 25 ಸೀಟ್ಗಳಾಗದೇ ಬಿಟ್ಟಿಲ್ಲ. ಮಧ್ಯಾಹ್ನ 2 ಗಂಟೆಯವರೆಗೆ ಬಸ್ಗಳಿಗೆ ಜನ ಇದ್ದರು. ಆಮೇಲೆ ಜನರೇ ಇರಲಿಲ್ಲ. 2 ಗಂಟೆಯ ಬಳಿಕವೂ ಬಸ್ ಸಂಚಾರಕ್ಕೆ ಅವಕಾಶ ಇತ್ತು. ಪ್ರಯಾಣಿಕರು ಇಲ್ಲದ ಕಾರಣ ಬಸ್ಗಳ ಓಡಾಟ ನಿಲ್ಲಿಸಲಾಯಿತು’ ಎಂದು ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಸಿದ್ದೇಶ್ವರ ಹೆಬ್ಬಾಳ್ ಪ್ರಜಾವಾಣಿಗೆ ತಿಳಿಸಿದ್ದಾರೆ.</p>.<p>ಪ್ರತಿ ಬಸ್ನಲ್ಲಿ ಶೇ 50ಕ್ಕಿಂತ ಅಧಿಕ ಪ್ರಯಾಣಿಕರು ಹೋಗದಂತೆ ನೋಡಿಕೊಳ್ಳಲಾಗಿದೆ. ಒಂದುಸೀಟ್ ನಲ್ಲಿ ಒಬ್ಬರಿಗೆ ಮಾತ್ರ ಅವಕಾಶ ಕೊಡಲಾಗಿದೆ. ಲಸಿಕೆ ಹಾಕಿಕೊಂಡಿರುವ ಚಾಲಕರು, ನಿರ್ವಾಹಕರನ್ನು ಬಳಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>