<p><strong>ಚನ್ನಗಿರಿ</strong>: ನಾನೂ ಒಬ್ಬ ನಿವೃತ್ತ ನೌಕರನ ಮಗನಾಗಿದ್ದು, ನಿವೃತ್ತ ನೌಕರರು ಇಳಿ ವಯಸ್ಸಿನಲ್ಲಿ ಜೀವನ ಸಾಗಿಸುವುದನ್ನು ತುಂಬಾ ಹತ್ತಿರರಿಂದ ಕಂಡಿದ್ದೇನೆ. ಕ್ಷೇತ್ರದ ಅಭಿವೃದ್ಧಿಗೆ ಹಿರಿಯರ ಮಾರ್ಗದರ್ಶನ ಅಗತ್ಯ’ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ತಿಳಿಸಿದರು.</p>.<p>ಪಟ್ಟಣದ ಹಾಲಸ್ವಾಮಿ ಸಮುದಾಯ ಭವನದಲ್ಲಿ ನಿವೃತ್ತ ನೌಕರರ ಸಂಘದಿಂದ ಬುಧವಾರ ನಡೆದ ಸರ್ವ ಸದಸ್ಯರ ಮಹಾಸಭೆ ಹಾಗೂ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರನ್ನು ಸನ್ಮಾನಿಸಿ ಮಾತನಾಡಿದರು.</p>.<p>‘ನಮ್ಮನ್ನು ಸಾಕಿ ಸಲುಹಿ ಸಮಾಜದಲ್ಲಿ ಉತ್ತಮ ಮನುಷ್ಯರನ್ನಾಗಿ ರೂಪಿಸಿದ ಹಿರಿಯ ಜೀವಗಳನ್ನು ತುಂಬಾ ಪ್ರೀತಿಯಿಂದ ಕಾಣಬೇಕು. ನಾವು ಇಂದು ಈ ಮಟ್ಟದಲ್ಲಿ ಇರಲು ಅವರ ಶ್ರಮ ಕಾರಣ. ಯಾವುದೇ ಕಾರಣಕ್ಕೂಯಾರೂ ಪಾಲಕರನ್ನು ಕಡೆಗಣಿಸಬಾರದು. ನಿವೃತ್ತಿ ಜೀವನದಲ್ಲಿ ಹಿರಿಯರಿಗೆ ಪ್ರೀತಿ ನೀಡಿ ವಿಶ್ವಾಸ ತೋರಬೇಕು’ ಎಂದು ಸಲಹೆ ನೀಡಿದರು.</p>.<p>ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮಾತನಾಡಿದರು. ಇದೇ ಸಂದರ್ಭದಲ್ಲಿ 75 ವರ್ಷ ತುಂಬಿದ ಸಂಘದ 35 ಹಿರಿಯ ಸದಸ್ಯರನ್ನು ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಹಿತಿ ಎಸ್.ಟಿ.ಶಾಂತ ಗಂಗಾಧರ್ ಹಾಗೂ ರಂಗ ಕಲಾವಿದ ಎಂ.ಅಣ್ಣೋಜಿರಾವ್ ಪವಾರ್ ಅವರನ್ನು ಸನ್ಮಾನಿಸಲಾಯಿತು.</p>.<p>ನಿವೃತ್ತ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಜಿ.ಭರತ್ ರಾಜ್, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಎಸ್.ಗಣೇಶ್, ಜಗಳೂರು ನಿವೃತ್ತ ನೌಕರರ ಸಂಘದ ಅಧ್ಯಕ್ಷ ಪಾಲಯ್ಯ ಉಪಸ್ಥಿತರಿದ್ದರು.</p>.<p>ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಜಿ.ಎಂ.ಉಜ್ಜನಪ್ಪ ಅಧ್ಯಕ್ಷತೆ ವಹಿಸಿದ್ದರು. ಹಾಲಸ್ವಾಮಿ ವಿರಕ್ತ ಮಠದ ಬಸವ ಜಯಚಂದ್ರ ಸ್ವಾಮೀಜಿ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಗಿರಿ</strong>: ನಾನೂ ಒಬ್ಬ ನಿವೃತ್ತ ನೌಕರನ ಮಗನಾಗಿದ್ದು, ನಿವೃತ್ತ ನೌಕರರು ಇಳಿ ವಯಸ್ಸಿನಲ್ಲಿ ಜೀವನ ಸಾಗಿಸುವುದನ್ನು ತುಂಬಾ ಹತ್ತಿರರಿಂದ ಕಂಡಿದ್ದೇನೆ. ಕ್ಷೇತ್ರದ ಅಭಿವೃದ್ಧಿಗೆ ಹಿರಿಯರ ಮಾರ್ಗದರ್ಶನ ಅಗತ್ಯ’ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ತಿಳಿಸಿದರು.</p>.<p>ಪಟ್ಟಣದ ಹಾಲಸ್ವಾಮಿ ಸಮುದಾಯ ಭವನದಲ್ಲಿ ನಿವೃತ್ತ ನೌಕರರ ಸಂಘದಿಂದ ಬುಧವಾರ ನಡೆದ ಸರ್ವ ಸದಸ್ಯರ ಮಹಾಸಭೆ ಹಾಗೂ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರನ್ನು ಸನ್ಮಾನಿಸಿ ಮಾತನಾಡಿದರು.</p>.<p>‘ನಮ್ಮನ್ನು ಸಾಕಿ ಸಲುಹಿ ಸಮಾಜದಲ್ಲಿ ಉತ್ತಮ ಮನುಷ್ಯರನ್ನಾಗಿ ರೂಪಿಸಿದ ಹಿರಿಯ ಜೀವಗಳನ್ನು ತುಂಬಾ ಪ್ರೀತಿಯಿಂದ ಕಾಣಬೇಕು. ನಾವು ಇಂದು ಈ ಮಟ್ಟದಲ್ಲಿ ಇರಲು ಅವರ ಶ್ರಮ ಕಾರಣ. ಯಾವುದೇ ಕಾರಣಕ್ಕೂಯಾರೂ ಪಾಲಕರನ್ನು ಕಡೆಗಣಿಸಬಾರದು. ನಿವೃತ್ತಿ ಜೀವನದಲ್ಲಿ ಹಿರಿಯರಿಗೆ ಪ್ರೀತಿ ನೀಡಿ ವಿಶ್ವಾಸ ತೋರಬೇಕು’ ಎಂದು ಸಲಹೆ ನೀಡಿದರು.</p>.<p>ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮಾತನಾಡಿದರು. ಇದೇ ಸಂದರ್ಭದಲ್ಲಿ 75 ವರ್ಷ ತುಂಬಿದ ಸಂಘದ 35 ಹಿರಿಯ ಸದಸ್ಯರನ್ನು ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಹಿತಿ ಎಸ್.ಟಿ.ಶಾಂತ ಗಂಗಾಧರ್ ಹಾಗೂ ರಂಗ ಕಲಾವಿದ ಎಂ.ಅಣ್ಣೋಜಿರಾವ್ ಪವಾರ್ ಅವರನ್ನು ಸನ್ಮಾನಿಸಲಾಯಿತು.</p>.<p>ನಿವೃತ್ತ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಜಿ.ಭರತ್ ರಾಜ್, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಎಸ್.ಗಣೇಶ್, ಜಗಳೂರು ನಿವೃತ್ತ ನೌಕರರ ಸಂಘದ ಅಧ್ಯಕ್ಷ ಪಾಲಯ್ಯ ಉಪಸ್ಥಿತರಿದ್ದರು.</p>.<p>ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಜಿ.ಎಂ.ಉಜ್ಜನಪ್ಪ ಅಧ್ಯಕ್ಷತೆ ವಹಿಸಿದ್ದರು. ಹಾಲಸ್ವಾಮಿ ವಿರಕ್ತ ಮಠದ ಬಸವ ಜಯಚಂದ್ರ ಸ್ವಾಮೀಜಿ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>