<p><strong>ದಾವಣಗೆರೆ: </strong>ವಿವಿಧೆಡೆ ಕಳ್ಳತನ ಮಾಡಿದ್ದ ಅಪರಾಧಿಗೆ ಇಲ್ಲಿನ 3ನೇ ಹೆಚ್ಚುವರಿ ಹಿರಿಯ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಲಯ ಎರಡು ಪ್ರಕರಣಗಳಲ್ಲಿ ನಾಲ್ಕು ವರ್ಷ ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಿದೆ.</p>.<p>ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಕೂಡಸಿದ್ದನ ಪಾಳ್ಯದ ಕಲ್ಕೆರೆ ಮಂಜ ಅಲಿಯಾಸ್ ಮಂಜುನಾಥ (27) ಶಿಕ್ಷೆಗೆ ಗುರಿಯಾದ ಅಪರಾಧಿ.</p>.<p>ಈತ 2011ರಲ್ಲಿ ಆಂಜನೇಯ ಬಡಾವಣೆಯ ಅಣ್ಣಯ್ಯ ಅವರ ಮನೆಯಲ್ಲಿ ಮನೆಯ ಬಾಗಿಲಿನ ಇಂಟರ್ಲಾಕ್ ಮುರಿದು ಬಂಗಾರದ ಆಭರಣಗಳನ್ನು ಕಳ್ಳತನ ಮಾಡಿದ್ದ. ಸಿಪಿಐ ಎಂ.ಸಿ. ದಶರಥಮೂರ್ತಿ ಅವರು ಆತನನ್ನು ಬಂಧಿಸಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು.</p>.<p>ವಿಚಾರಣೆ ನಡೆಸಿದ ನ್ಯಾಯಾಧೀಶ ಪ್ರವೀಣ್ ಎಂ.ನಾಯಕ್, ಅಪರಾಧಿಗೆ ಕಲಂ 454 ಐಪಿಸಿ ಅಡಿ 2 ವರ್ಷ ಸಾದಾ ಶಿಕ್ಷೆ, ₹5 ಸಾವಿರ ದಂಡ. ಕಲಂ 380ರ ಅಡಿ 2 ವರ್ಷ ಸಾದಾ ಶಿಕ್ಷೆ ಹಾಗೂ ₹5 ಸಾವಿರ ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ತಪ್ಪಿದ್ದಲ್ಲಿ 3 ತಿಂಗಳ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.</p>.<p>ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಚಿತ್ರಶೇಖರಪ್ಪ ಬಿ.ಡಿ ಹಾಗೂ ಬಸವರಾಜು ಎ.ಎಂ. ವಾದ ಮಂಡಿಸಿದ್ದರು. ಅಪರಾಧಿಗೆ ಶಿಕ್ಷೆಯಾಗಲು ವಿದ್ಯಾನಗರ ಪಿಎಸ್ಐ ಹಾಗೂ ಸಿಬ್ಬಂದಿ ಸಹಕರಿಸಿದ್ದಾರೆ ಎಂದು ಅಭಿಯೋಜಕರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ವಿವಿಧೆಡೆ ಕಳ್ಳತನ ಮಾಡಿದ್ದ ಅಪರಾಧಿಗೆ ಇಲ್ಲಿನ 3ನೇ ಹೆಚ್ಚುವರಿ ಹಿರಿಯ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಲಯ ಎರಡು ಪ್ರಕರಣಗಳಲ್ಲಿ ನಾಲ್ಕು ವರ್ಷ ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಿದೆ.</p>.<p>ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಕೂಡಸಿದ್ದನ ಪಾಳ್ಯದ ಕಲ್ಕೆರೆ ಮಂಜ ಅಲಿಯಾಸ್ ಮಂಜುನಾಥ (27) ಶಿಕ್ಷೆಗೆ ಗುರಿಯಾದ ಅಪರಾಧಿ.</p>.<p>ಈತ 2011ರಲ್ಲಿ ಆಂಜನೇಯ ಬಡಾವಣೆಯ ಅಣ್ಣಯ್ಯ ಅವರ ಮನೆಯಲ್ಲಿ ಮನೆಯ ಬಾಗಿಲಿನ ಇಂಟರ್ಲಾಕ್ ಮುರಿದು ಬಂಗಾರದ ಆಭರಣಗಳನ್ನು ಕಳ್ಳತನ ಮಾಡಿದ್ದ. ಸಿಪಿಐ ಎಂ.ಸಿ. ದಶರಥಮೂರ್ತಿ ಅವರು ಆತನನ್ನು ಬಂಧಿಸಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು.</p>.<p>ವಿಚಾರಣೆ ನಡೆಸಿದ ನ್ಯಾಯಾಧೀಶ ಪ್ರವೀಣ್ ಎಂ.ನಾಯಕ್, ಅಪರಾಧಿಗೆ ಕಲಂ 454 ಐಪಿಸಿ ಅಡಿ 2 ವರ್ಷ ಸಾದಾ ಶಿಕ್ಷೆ, ₹5 ಸಾವಿರ ದಂಡ. ಕಲಂ 380ರ ಅಡಿ 2 ವರ್ಷ ಸಾದಾ ಶಿಕ್ಷೆ ಹಾಗೂ ₹5 ಸಾವಿರ ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ತಪ್ಪಿದ್ದಲ್ಲಿ 3 ತಿಂಗಳ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.</p>.<p>ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಚಿತ್ರಶೇಖರಪ್ಪ ಬಿ.ಡಿ ಹಾಗೂ ಬಸವರಾಜು ಎ.ಎಂ. ವಾದ ಮಂಡಿಸಿದ್ದರು. ಅಪರಾಧಿಗೆ ಶಿಕ್ಷೆಯಾಗಲು ವಿದ್ಯಾನಗರ ಪಿಎಸ್ಐ ಹಾಗೂ ಸಿಬ್ಬಂದಿ ಸಹಕರಿಸಿದ್ದಾರೆ ಎಂದು ಅಭಿಯೋಜಕರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>