ದಾವಣಗೆರೆ: ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುವುದು ಮಂಗಳವಾರ ರಾತ್ರಿ ಖಚಿತವಾಗುತ್ತಿದ್ದಂತೆ ಕಾಂಗ್ರೆಸ್ ಎಂಎಲ್ಸಿಗಳು ಬರೋದು ಬೇಡ ಎಂಬ ಸೂಚನೆ ಹೋಗಿದ್ದರಿಂದ ಮೂವರು ಎಂಎಲ್ಸಿಗಳು ಗೈರಾಗಿದ್ದಾರೆ. ಜಿಲ್ಲೆಯ ಮಟ್ಟಿಗೆ ಹೈಕಮಾಂಡ್ ಆಗಿರುವ ಶಾಸಕ ಶಾಮನೂರು ಶಿವಶಂಕರಪ್ಪ ಕೂಡ ಹಾಜರಾಗಿಲ್ಲ.