<p><strong>ಮಲೇಬೆನ್ನೂರು: </strong>ಸಮೀಪದ ಕೊಮಾರನಹಳ್ಳಿ ಗ್ರಾಮದ ನಾಗರಾಜಯ್ಯ ಅವರ ಕೊಟ್ಟಿಗೆಯಲ್ಲಿದ್ದ 4 ಹಸುಗಳು ಮಂಗಳವಾರ ರಾತ್ರಿ ಸಿಡಿಲು ಬಡಿದು ಸಾವಿಗೀಡಾಗಿವೆ.</p>.<p>‘ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಹಸುಗಳು ಸಿಡಿಲ ಹೊಡೆತಕ್ಕೆ ಸಿಲುಕಿ ಕೂಗಿಕೊಂಡವು. ಘಟನೆ ನಡೆಯುತ್ತಿದ್ದಂತೆ ವಿದ್ಯುತ್ ಸಂಪರ್ಕ ಕಡಿತವಾಯಿತು. ಬೆಂಕಿ ಕಾಣಿಸಿಕೊಂಡಿತು. ಮಳೆಯ ನಡುವೆಯೇ ಕೊಟ್ಟಿಗೆಯೊಳಗೆ ನೋಡಿದಾಗ 4 ಹಸುಗಳು ಸತ್ತು ಬಿದ್ದಿದ್ದವು’ ಎಂದು ಮಾಲೀಕ ನಾಗರಾಜಯ್ಯ ಅಲವತ್ತುಕೊಂಡರು.</p>.<p>ಜನರ ಸಹಕಾರದಿಂದ ಬೆಂಕಿ ನಂದಿಸಲಾಯಿತು ಎಂದು ಮಾಹಿತಿ ನೀಡಿದರು. 4 ಹಸುಗಳ ಮೌಲ್ಯ ₹ 3 ಲಕ್ಷ ಎಂದು ಅಂದಾಜು ಮಾಡಲಾಗಿದೆ.</p>.<p>ಘಟನಾ ಸ್ಥಳಕ್ಕೆ ಉಪತಹಶೀಲ್ದಾರ್ ಆರ್. ರವಿ, ಕಂದಾಯ ನಿರೀಕ್ಷಕ ಆನಂದ್, ಗ್ರಾಮ ಆಡಳಿತಾಧಿಕಾರಿ ಅಣ್ಣಪ್ಪ, ಪಶು ವೈದ್ಯಾಧಿಕಾರಿ ಬಾಲಚಂದ್ರ ತೇಲಗಾರ್, ಪೊಲೀಸರು ಭೇಟಿ ನೀಡಿದ್ದರು.</p>.<p>ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಲೇಬೆನ್ನೂರು: </strong>ಸಮೀಪದ ಕೊಮಾರನಹಳ್ಳಿ ಗ್ರಾಮದ ನಾಗರಾಜಯ್ಯ ಅವರ ಕೊಟ್ಟಿಗೆಯಲ್ಲಿದ್ದ 4 ಹಸುಗಳು ಮಂಗಳವಾರ ರಾತ್ರಿ ಸಿಡಿಲು ಬಡಿದು ಸಾವಿಗೀಡಾಗಿವೆ.</p>.<p>‘ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಹಸುಗಳು ಸಿಡಿಲ ಹೊಡೆತಕ್ಕೆ ಸಿಲುಕಿ ಕೂಗಿಕೊಂಡವು. ಘಟನೆ ನಡೆಯುತ್ತಿದ್ದಂತೆ ವಿದ್ಯುತ್ ಸಂಪರ್ಕ ಕಡಿತವಾಯಿತು. ಬೆಂಕಿ ಕಾಣಿಸಿಕೊಂಡಿತು. ಮಳೆಯ ನಡುವೆಯೇ ಕೊಟ್ಟಿಗೆಯೊಳಗೆ ನೋಡಿದಾಗ 4 ಹಸುಗಳು ಸತ್ತು ಬಿದ್ದಿದ್ದವು’ ಎಂದು ಮಾಲೀಕ ನಾಗರಾಜಯ್ಯ ಅಲವತ್ತುಕೊಂಡರು.</p>.<p>ಜನರ ಸಹಕಾರದಿಂದ ಬೆಂಕಿ ನಂದಿಸಲಾಯಿತು ಎಂದು ಮಾಹಿತಿ ನೀಡಿದರು. 4 ಹಸುಗಳ ಮೌಲ್ಯ ₹ 3 ಲಕ್ಷ ಎಂದು ಅಂದಾಜು ಮಾಡಲಾಗಿದೆ.</p>.<p>ಘಟನಾ ಸ್ಥಳಕ್ಕೆ ಉಪತಹಶೀಲ್ದಾರ್ ಆರ್. ರವಿ, ಕಂದಾಯ ನಿರೀಕ್ಷಕ ಆನಂದ್, ಗ್ರಾಮ ಆಡಳಿತಾಧಿಕಾರಿ ಅಣ್ಣಪ್ಪ, ಪಶು ವೈದ್ಯಾಧಿಕಾರಿ ಬಾಲಚಂದ್ರ ತೇಲಗಾರ್, ಪೊಲೀಸರು ಭೇಟಿ ನೀಡಿದ್ದರು.</p>.<p>ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>